ನೈರೋಬಿಯಲ್ಲಿ ಉಗ್ರರ ಅಟ್ಟಹಾಸ 43 ಸಾವು
ನೈರೋಬಿ, ಸೆ.22 : ಮುಂಬೈದಾಳಿ ಮಾದರಿಯಲ್ಲಿ ಕೀನ್ಯಾದ ನೈರೋಬಿಯ ಮಾಲ್ ಒಂದರಲ್ಲಿ ಶನಿವಾರ ರಾತ್ರಿ ಇಸ್ಲಾಮಿಕ್ ಉಗ್ರರು ರಕ್ತಪಾತ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಭಾರತೀಯರು ಸೇರಿದಂತೆ 43 ಮಂದಿ ಮುಗ್ಧರು ಸಾವನ್ನಪ್ಪಿದ್ದಾರೆ.
ಬಂದೂಕುಧಾರಿ ಇಸ್ಲಾಮಿಕ್ ಉಗ್ರಗಾಮಿಗಳು ಗ್ರೆನೇಡ್ಗಳನ್ನು ಎಸೆಯುತ್ತಾ, ರೈಫಲ್ ದಾಳಿಯ ಮೂಲಕ ಮಾಲ್ ಪ್ರವೇಶಿಸಿ ಸಿಕ್ಕ ಸಿಕ್ಕವರ ಮೇಲೆ ಗುಂಡು ಹಾರಿಸಿದ್ದಾರೆ. ನಾಲ್ಕು ಮಹಡಿಯ ಕಟ್ಟಡದಲ್ಲಿ ಘಟನೆಯಿಂದಾಗಿ ಜನರ ಆರ್ತನಾದ ಮುಗಿಲು ಮುಟ್ಟಿತ್ತು.

ಘಟನೆಯಿಂದ ಇಬ್ಬರು ಭಾರತೀಯರು ಸೇರಿ 43 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಾಹಿನಿಯಲ್ಲಿ ಮಾತನಾಡಿದ ಕೀನ್ಯಾ ಅಧ್ಯಕ್ಷರು, ಮೃತರಲ್ಲಿ ತಮ್ಮ ಕುಟುಂಬದ ಆಪ್ತರು ಕೂಡ ಸೇರಿದ್ದಾರೆ ಎಂದು ಹೇಳಿದ್ದಾರೆ.
ಮೃತಪಟ್ಟವರಲ್ಲಿ ವಿದೇಶೀಯರೂ ಸೇರಿದ್ದಾರೆ. ಗುಂಡಿನ ದಾಳಿ ಆರಂಭವಾದ 12 ಗಂಟೆಗಳ ಬಳಿಕ, ಭಾನುವಾರ ಬೆಳಗ್ಗಿನವರೆಗೂ ಉಗ್ರಗಾಮಿಗಳು ಕಟ್ಟಡದೊಳಗೆ ಅವಿತುಕುಳಿತಿದ್ದು, ಹಲವರನ್ನು ಒತ್ತೆಯಿಟ್ಟುಕೊಂಡಿರುವ ಶಂಕೆಯಿದೆ.
ಸ್ಥಳದಲ್ಲಿ ಪರಿಸ್ಥಿತಿ ತುಂಬಾ ಸೂಕ್ಷ್ಮವಾಗಿದ್ದು, ಒತ್ತೆಯಾಳುಗಳ ರಕ್ಷಣೆಗೆ ಮೊದಲ ಆದ್ಯತೆ ನೀಡುವುದಾಗಿ ಕೀನ್ಯಾ ಅಧ್ಯಕ್ಷ ಉಹುರು ಕೆನ್ಯಟಾ ಹೇಳಿದ್ದಾರೆ. ಶನಿವಾರ ಮಧ್ಯಾಹ್ನ ದಾಳಿ ಆರಂಭವಾದಾಗ, ಯಾರೆಲ್ಲಾ ಮುಸ್ಲಿಮರು ಎಂದು ಬಂದೂಕುಧಾರಿಗಳು ಕೇಳಿ, ಅವರಿಗೆ ಮಾತ್ರ ತಪ್ಪಿಸಿಕೊಳ್ಳಲು ಅವಕಾಶ ನೀಡಿದ್ದಾರೆ.
ಸೋಮಾಲಿಯಾದ ಇಸ್ಲಾಮಿಕ್ ಉಗ್ರಗಾಮಿ ಸಂಘಟನೆ ಅಲ್-ಶಬಾಬ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. 2011ರಲ್ಲಿ ಸೋಮಾಲಿಯದಲ್ಲಿ ಕೀನ್ಯಾ ಪಡೆಗಳು ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ದಾಳಿ ನಡೆಸಿದ್ದೇವೆ. ಇನ್ನಷ್ಟು ದಾಳಿಗಳು ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪೊಲೀಸರು ಮತ್ತು ಸೇನಾಪಡೆಗಳು ಕಟ್ಟಡವನ್ನು ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಅಮೆರಿಕಾ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ಈ ದಾಳಿಯನ್ನು ತೀವ್ರವಾಗಿ ಖಂಡಿಸಿವೆ.
ಗುರುತು ಪತ್ತೆ : ಉಗ್ರರ ದಾಳಿಯಲ್ಲಿ ಮೃತಪಟ್ಟ ಇಬ್ಬರು ಭಾರತೀಯರ ಗುರುತು ಪತ್ತೆಯಾಗಿದೆ. ಚೆನ್ನೈ ಮೂಲದ ಶ್ರೀಧರ್ ನಟರಾಜನ್(40) ಮತ್ತು ಬ್ಯಾಂಕ್ ಆಫ್ ಬರೋಡಾದ ಮ್ಯಾನೇಜರ್ ಅವರ ಪುತ್ರ ಪರಮಾನ್ಯು ಜೈನ್(8) ಎಂಬವರು ಉಗ್ರರ ಗುಂಡೇಟಿಗೆ ಬಲಿಯಾಗಿದ್ದು, ಮುವತ್ತೈದು ಭಾರತೀಯರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ದಾಳಿಗೆ ಸಂಬಂಧಿಸಿದಂತೆ ಭಾರತೀಯರ ರಕ್ಷಣೆಗಾಗಿ ಭಾರತೀಯ ರಾಯಭಾರಿ ಕಚೇರಿ ಕೀನ್ಯಾ ಸರ್ಕಾರದೊಂದಿಗೆ ನಿರಂತರವಾಗಿ ಸಮರ್ಪಕದಲ್ಲಿದೆ. ಗಾಯಗೊಂಡಿರುವವರನ್ನು ಮಂಜುಳಾ ಶ್ರೀಧರ್, ಮುಕ್ತಾ ಜೈನ್, ಕುಮಾರ್ ಪೂರ್ವಿ ಜೈನ್, ನಟರಾಜನ್ ರಾಮಚಂದ್ರನ್ ಎಂದು ಗುರುತಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications