ಏರ್ ಇಂಡಿಯಾ ವಿಮಾನಗಳ ಮೇಲೆ ಆ ದಿನ ದಾಳಿಯಾಗುತ್ತೆ: ಖಲಿಸ್ತಾನಿ ಭಯೋತ್ಪಾದಕನ ಬೆದರಿಕೆ
ನವೆಂಬರ್ 1ರಿಂದ 19ರವರೆಗೆ ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣ ಮಾಡಬೇಡಿ ಎಂದು ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಎಚ್ಚರಿಕೆ ಕೊಟ್ಟಿದ್ದಾರೆ. ಸಿಖ್ಖರ ನರಮೇಧದ 40ನೇ ವಾರ್ಷಿಕೋತ್ಸವದ ಹಿನ್ನೆಲೆ ಈ ನಿಗದಿತ ದಿನಾಂಕಗಳಲ್ಲಿ ಏರ್ ಇಂಡಿಯಾ ವಿಮಾನದ ಮೇಲೆ ದಾಳಿಯಾಗಬಹುದು ಎಂದು ಪನ್ನುನ್ ಸುಳಿವು ನೀಡಿದ್ದಾರೆ.
ಕೆನಡಾ ಹಾಗೂ ಅಮೇರಿಕಾದಲ್ಲಿ ಪೌರತ್ವ ಹೊಂದಿರುವ ಸಿಖ್ಸ್ ಫಾರ್ ಜಸ್ಟಿಸ್ (ಎಸ್ಎಫ್ಜೆ) ಸಂಘಟನೆಯ ಸ್ಥಾಪಕರು ಕಳೆದ ವರ್ಷವೂ ಇದೇ ಅವಧಿಯಲ್ಲಿ ಇಂತದ್ದೇ ಬೆದರಿಕೆ ಸಂದೇಶ ರವಾನಿಸಿದ್ದರು. ಈಗ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಕೂಡ ಬೆದರಿಕೆ ಹಾಕಿದ್ದಾರೆ.

ಇತ್ತೀಚೆಗೆ ಭಾರತದಲ್ಲಿ ಹಲವು ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಸ್ಫೋಟದ ಬೆದರಿಕೆ ಸಂದೇಶಗಳು ಬರುತ್ತಲೇ ಇವೆ. ಇದರ ನಡುವೆಯೇ ಪನ್ನುನ್ ಬೆದರಿಕೆ ಹಾಕಿರುವುದು ಆತಂಕ ಸೃಷ್ಟಿಸಿದೆ.
ಮತ್ತೊಬ್ಬ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯೂ ಸೇರಿದಂತೆ, ದೇಶದಲ್ಲಿ ಖಲಿಸ್ತಾನಿ ಅಂಶಗಳನ್ನು ಗುರಿಯಾಗಿಸಿಕೊಂಡು ಕೆನಡಾದ ಭಾರತ ಆರೋಪಗಳನ್ನು ಅನುಸರಿಸಿ ಭಾರತ ಮತ್ತು ಕೆನಡಾವು ರಾಜತಾಂತ್ರಿಕ ವಿವಾದದಲ್ಲಿ ತೊಡಗಿರುವ ಸಮಯದಲ್ಲಿ ಇದು ಸಂಭವಿಸಿದೆ.

ಒಂದೆಡೆ ಕೆನಡಾ ಹಾಗೂ ಭಾರತದ ನಡುವೆ ರಾಜತಾಂತ್ರಿಕ ವಿವಾದಗಳು ಭುಗಿಲೆದ್ದಿವೆ. ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಸೇರಿದಂತೆ ಕೆನಡಾದಲ್ಲಿ ಖಲಿಸ್ತಾನಿ ಅಂಶಗಳನ್ನು ಭಾರತ ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪ ಮಾಡುತ್ತಿದೆ. ಇದರ ನಡುವೆಯೇ ಈ ಬೆದರಿಕೆ ಬಂದಿರುವುದು ಬಿಗುವಿನ ವಾತಾವರಣ ಸೃಷ್ಟಿಸಿದೆ.
ಕಳೆದ ನವೆಂಬರ್ನಲ್ಲೂ ಪನ್ನುನ್ ಅವರು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮರುನಾಮಕರಣ ಮಾಡಲಾಗುವುದು ಹಾಗೂ ನವೆಂಬರ್ 19ರಂದು ಏರ್ಪೋರ್ಟ್ ಮುಚ್ಚುತ್ತೇವೆ ಎಂದು ವಿಡಿಯೋ ರಿಲೀಸ್ ಮಾಡಿದ್ದರು. ಆ ದಿನವೂ ಏರ್ ಇಂಡಿಯಾದಲ್ಲಿ ಪ್ರಯಾಣಿಸದಂತೆ ಜನರಿಗೆ ಎಚ್ಚರಿಕೆಯೂ ನೀಡಿದ್ದರು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೂಡ ಈತನ ವಿರುದ್ಧ ಕ್ರಿಮಿನಲ್ ಪಿತೂರಿ, ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವುದು, ಕಾನೂನುಬಾಹಿರ ಚಟುವಟಿಕೆಗಳ ಕಾಯಿದೆ (ಯುಎಪಿಎ) ಅಡಿಯಲ್ಲಿ ವಿವಿಧ ಅಪರಾಧಗಳಲ್ಲಿ ಈತನ ಕೈವಾಡವಿದೆ ಎಂದು ಆರೋಪಿಸಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಪನ್ನುನ್ ಡಿಸೆಂಬರ್ 13 ಅಥವಾ ಅದಕ್ಕಿಂತ ಮೊದಲು ಸಂಸತ್ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದರು. 2001ರ ಡಿಸೆಂಬರ್ 13ರಂದು ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿಯ ದಿನವನ್ನೇ ಈತ ಸೂಚಿಸಿದ್ದ. ಅಲ್ಲದೆ, ಈ ವರ್ಷದ ಗಣರಾಜ್ಯೋತ್ಸವದಂದು ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು.
ಪ್ರತ್ಯೇಕ ಸಿಖ್ ರಾಜ್ಯಕ್ಕಾಗಿ ಪ್ರತಿಪಾದಿಸುವ ಎಸ್ಎಫ್ಜೆ ಎಂಬ ಗುಂಪನ್ನು ಮುನ್ನಡೆಸುತ್ತಿರುವ ಕಾರಣ, ದೇಶದ್ರೋಹ ಮತ್ತು ಪ್ರತ್ಯೇಕತಾವಾದದ ಆರೋಪದ ಮೇಲೆ ಪನ್ನುನ್ ಅವರನ್ನು ಗೃಹ ಸಚಿವಾಲಯವು ಭಯೋತ್ಪಾದಕ ಎಂದು ಘೋಷಿಸಿದೆ. ಅಲ್ಲದೆ ರಾಷ್ಟ್ರ ವಿರೋಧಿ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿದ್ದಕ್ಕಾಗಿ ಈ ಸಂಘಟನೆಯನ್ನು ನಿಷೇಧ ಕೂಡ ಮಾಡಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications