ಪಾಕಿಸ್ತಾನ ಮಿಲಿಟರಿ ಕೋರ್ಟ್ ನಲ್ಲಿ ಕುಲಭೂಷಣ್ ಜಾಧವ್ ಗೆ ಮರಣದಂಡನೆ
ಗೂಢಚರ್ಯೆ ಮಾಡಿದ ಆರೋಪದಲ್ಲಿ ಕಳೆದ ವರ್ಷ ಮಾರ್ಚ್ ನಲ್ಲಿ ಪಾಕಿಸ್ತಾನದಲ್ಲಿ ಬಂಧಿಸಿದ್ದ ಕುಲಭೂಷಣ್ ಜಾಧವ್ ಗೆ ಮಿಲಿಟರಿ ಕೋರ್ಟ್ ಮರಣದಂಡನೆ ವಿಧಿಸಿದೆ.
ಇಸ್ಲಾಮಾಬಾದ್, ಏಪ್ರಿಲ್ 10: ಭಾರತದ ಗೂಢಚಾರ ಎಂಬ ಆರೋಪದ ಮೇಲೆ ಬಂಧಿಸಲಾಗಿದ್ದ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಸೋಮವಾರ ಮರಣದಂಡನೆ ವಿಧಿಸಿದೆ. ಕರಾಚಿ ಹಾಗೂ ಬಲೂಚಿಸ್ತಾನದಲ್ಲಿ ಗೂಢಚರ್ಯೆ, ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸಿದ ಆರೋಪದಲ್ಲಿ ಜಾಧವ್ ನನ್ನು ಮಾರ್ಚ್ 11, 2016ರಲ್ಲಿ ಬಲೂಚಿಸ್ತಾನದ ಮಶ್ಕೆಲ್ ಪ್ರದೇಶದಲ್ಲಿ ಬಂಧಿಸಲಾಗಿತ್ತು.
ಕುಲಭೂಷಣ್ ರನ್ನು ಪಾಕಿಸ್ತಾನ ಸೇನಾ ಕಾಯ್ದೆ ಅಡಿಯಲ್ಲಿ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಿಯಲ್ ವಿಚಾರಣೆ ನಡೆಸಿ, ಮರಣದಂಡನೆ ವಿಧಿಸಲಾಗಿದೆ. ಈ ವಿಚಾರವನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಟ ಜನರಲ್ ಖಮರ್ ಜಾವೇದ್ ಬಾಜ್ವಾ ಖಾತ್ರಿ ಪಡಿಸಿದ್ದಾರೆ. ತಜ್ಞರ ಪ್ರಕಾರ, ಜಾಧವ್ ವಿಚಾರಣೆ ಹಾಗೂ ಶಿಕ್ಷೆ ಕ್ರಮವು ಭಾರತ ಸೇರಿದಂತೆ ಇತರೆ ರಾಷ್ಟ್ರಗಳ ಪಾಲಿಗೆ ಬಲವಾದ ಸಂದೇಶ ರವಾನಿಸಿದಂತಾಗಿದೆ.[ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ 800 ಕೋಟಿ ರು ಸುಪಾರಿ!]

ಫೀಲ್ಡ್ ಜನರಲ್ ಕೋರ್ಟ್ ಮಾರ್ಷಿಯಲ್ (FGCM) ಸೆಕ್ಷನ್ 59 ಪಾಕಿಸ್ತಾನ ಸೇನಾ ಕಾಯ್ದೆ ಹಾಗೂ ಸೆಕ್ಷನ್ 3 ಅಧಿಕೃತ ರಹಸ್ಯ ಕಾಯ್ದೆ 1923ರ ಅಡಿಯಲ್ಲಿ ವಿಚಾರಣೆ ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ನ್ಯಾಯಾಧೀಶರು ಹಾಗೂ ಕೋರ್ಟ್ ಮುಂದೆ ಜಾಧವ್ ತಪ್ಪೊಪ್ಪಿಕೊಂಡಿದ್ದು, ಭಾರತದ ಗೂಢಚಾರ ಸಂಸ್ಥೆ 'ರಾ' ತನ್ನನ್ನು ನೇಮಿಸಿತ್ತು. ಗೂಢಚರ್ಯೆ ಹಾಗೂ ವಿಧ್ವಂಸಕ ಕೃತ್ಯ ಎಸಗುವುದಕ್ಕೆ ಸೂಚಿಸಿತ್ತು ಎಂದು ಒಪ್ಪಿಕೊಂಡಿರುವುದಾಗಿ ಡಾನ್ ಪತ್ರಿಕೆಯಲ್ಲಿ ವರದಿಯಾಗಿದೆ.
ಪಾಕಿಸ್ತಾನದ ಕಾನೂನಿನ ಪ್ರಕಾರ ಆರೋಪಿ ಕುಲಭೂಷಣ್ ಗೆ ಕಾನೂನು ನೆರವು ನೀಡಲಾಗಿತ್ತು ಎಂದು ತಿಳಿಸಲಾಗಿದೆ. ಚೀನಾ-ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ ಯೋಜನೆ, ಅದರಲ್ಲೂ ವಿಶೇಷವಾಗಿ ಗ್ವದಾರ್ ಬಂದರನ್ನು ಗುರಿಯಾಗಿಸಿಕೊಳ್ಳಲಾಗಿತ್ತು. ಆದರೆ ಪಾಕಿಸ್ತಾನದಲ್ಲಿ ಭಾರತದ ಕೈವಾಡ ಇರುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಬಾಜ್ವಾ ಹೇಳಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications