King Charles III: ಬ್ರಿಟನ್ ರಾಜ ಚಾರ್ಲ್ಸ್ 3ಗೆ ಕ್ಯಾನ್ಸರ್, ಸಾರ್ವಜನಿಕ ಭೇಟಿ ರದ್ದು
ಲಂಡನ್, ಫೆಬ್ರವರಿ 06: ಬ್ರಿಟನ್ ರಾಜ ಚಾರ್ಲ್ಸ್ -3 (King Charles III) ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಕಿಂಗ್ ಹ್ಯಾಮ್ ಅರಮನೆ ಫೆಬ್ರವರಿ 5 ರ ಸೋಮವಾರ ಅಧಿಕೃತವಾಗಿ ತಿಳಿಸಿದೆ. 75 ವರ್ಷದ ರಾಜ ಚಾರ್ಲ್ಸ್ -3 ಅವರಿಗೆ ಯಾವ ರೀತಿಯ ಕ್ಯಾನ್ಸರ್ ಇದೆ ಎಂದು ಮಾಹಿತಿ ನೀಡಿಲ್ಲ.
ಕ್ಯಾನ್ಸರ್ಗೆ ಒಳಗಾಗಿರುವ ಕಿಂಗ್ ಚಾರ್ಲ್ಸ್ III ಸಾರ್ವಜನಿಕ ಭೇಟಿಯನ್ನು ರಸ್ಸು ಮಾಡಿದ್ದಾರೆ. ಆದರೆ ರಾಜ್ಯ ವ್ಯವಹಾರವನ್ನು ಮುಂದುವರಿಸುತ್ತಾರೆ, ಇದರ ಜೊತೆಗೆ ರಾಷ್ಟ್ರದ ಮುಖ್ಯಸ್ಥನಾಗಿ ತನ್ನ ಸಾಂವಿಧಾನಿಕ ಪಾತ್ರಗಳನ್ನು ಯಾರಿಗೂ ಹಸ್ತಾಂತರಿಸುವುದಿಲ್ಲ ಎಂದು ಹೇಳಿದೆ.

ಕಳೆದ ತಿಂಗಳು ಕಿಂಗ್ ಚಾರ್ಲ್ಸ್ ಅವರನ್ನು ಲಂಡನ್ ಆಸ್ಪತ್ರೆಯಲ್ಲಿ ಮೂರು ದಿನಗಳು ಚಿಕಿತ್ಸೆ ನೀಡಲಾಗಿತ್ತು, ಈ ವೇಳೆ "ಪ್ರತ್ಯೇಕ ಕಾಳಜಿಯ ಸಮಸ್ಯೆಯಿದೆ" ಎಂದು ಅರಮನೆ ಹೇಳಿದೆ. ಜೊತೆಗೆ "ರೋಗನಿರ್ಣಯ ಪರೀಕ್ಷೆಗಳು ಕ್ಯಾನ್ಸರ್ನ ಒಂದು ರೂಪವನ್ನು ಗುರುತಿಸಿವೆ" ಎಂದು ಬಕಿಂಗ್ ಹ್ಯಾಮ್ ಅರಮನೆ ಹೇಳಿಕೆಯಲ್ಲಿ ತಿಳಿಸಿದೆ.
ಸಾರ್ವಜನಿಕ ಭೇಟಿ ರದ್ದು
ಕಿಂಗ್ ಚಾರ್ಲ್ಸ್ ತಮ್ಮ ನಿಯಮಿತ ಚಿಕಿತ್ಸೆಗಳ ವೇಳಾಪಟ್ಟಿಯನ್ನು ಪ್ರಾರಂಭಿಸಿದ್ದಾರೆ. ಈ ಸಮಯದಲ್ಲಿ ಸಾರ್ವಜನಿಕರ ಭೇಟಿಯ ಕರ್ತವ್ಯಗಳನ್ನು ಮುಂದೂಡಲು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ. ಆದರೆ, ಈ ಅವಧಿಯುದ್ದಕ್ಕೂ, ಅವರುಎಂದಿನಂತೆ ರಾಜ್ಯ ವ್ಯವಹಾರ ಮತ್ತು ಅಧಿಕೃತ ದಾಖಲೆಗಳನ್ನು ಕೈಗೊಳ್ಳುವುದನ್ನು ಮುಂದುವರಿಸುತ್ತಾರೆ. ರಾಜನಿಗೆ ಹೊರರೋಗಿಯಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಕಿಂಗ್ ಹ್ಯಾಮ್ ಅರಮನೆ ಮಾಹಿತಿ ನೀಡಿದೆ.
"ಕಿಂಗ್ ಚಾರ್ಲ್ಸ್ ಚಿಕಿತ್ಸೆಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದು, ಸಾಧ್ಯವಾದಷ್ಟು ಬೇಗ ಸಾರ್ವಜನಿಕ ಕರ್ತವ್ಯಕ್ಕೆ ಮರಳಲು ಎದುರು ನೋಡುತ್ತಿದ್ದಾರೆ. ಊಹಾಪೋಹಗಳನ್ನು ತಡೆಗಟ್ಟಲು ತನ್ನ ರೋಗದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಇದನ್ನು ತಿಳಿಸುತ್ತಿದ್ದಾರೆ. ಪ್ರಪಂಚದಾದ್ಯಂತದ ಕ್ಯಾನ್ಸರ್ನಿಂದ ಬಳಲುತ್ತಿರುವ ಎಲ್ಲರಿಗೂ ಇದು ಸಾರ್ವಜನಿಕ ತಿಳುವಳಿಕೆಗೆ ಸಹಾಯ ಮಾಡುತ್ತದೆ" ಎಂದು ಅರಮನೆ ತಿಳಿಸಿದೆ.

ಸೆಪ್ಟೆಂಬರ್ 2022 ರಲ್ಲಿ ರಾಣಿ ಎಲಿಜಬೆತ್ II ತಮ್ಮ 96 ನೇ ವಯಸ್ಸಿನಲ್ಲಿ ನಿಧನರಾದಾಗ ಚಾರ್ಲ್ಸ್ ರಾಜರಾಗಿ ಪದಗ್ರಹಣ ಮಾಡಿದ್ದರು. ಇನ್ನು, ಬ್ರಿಟನ್ ರಾಜನಿಗೆ ಕ್ಯಾನ್ಸರ್ ಇರುವುದು ಪತ್ತೆಯಾದ ನಂತರ ಹಲವಾರು ದೇಶಗಳ ನಾಯಕರು ಕಿಂಗ್ ಚಾರ್ಲ್ಸ್ III ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications