ಇಂಗ್ಲೆಂಡ್ ಆರೋಗ್ಯ ಕಾರ್ಯದರ್ಶಿ ರಾಜೀನಾಮೆ ಹಿಂದೆ 'ಮುತ್ತಿನ ಕಥೆ'!
ಲಂಡನ್, ಜೂನ್ 27: ಕೊರೊನಾವೈರಸ್ ನಿರ್ಬಂಧನಗಳ ನಡುವೆ ಆಪ್ತ ಸಹಾಯಕಿಗೆ ಮುತ್ತು ಕೊಟ್ಟ ಸುದ್ದಿ ವೈರಲ್ ಆಗುತ್ತಿದ್ದಂತೆ ಇಂಗ್ಲೆಂಡಿನ ಆರೋಗ್ಯ ಕಾರ್ಯದರ್ಶಿ ಮ್ಯಾಟ್ ಹ್ಯಾನ್ಕಾಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂಗ್ಲೆಂಡಿನಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ನಡೆಯುತ್ತಿರುವುದರ ನಡುವೆ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ರಿಗೆ ಪತ್ರವೊಂದನ್ನು ಬರೆದಿದ್ದಾರೆ. "ಮ್ಯಾಟ್ ಹ್ಯಾನ್ಕಾಕ್ ರಾಜೀನಾಮೆ ಸ್ವೀಕರಿಸುವುದಕ್ಕೆ ಬೇಸರ ಎನಿಸುತ್ತದೆ. ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ಅವರು ಸಲ್ಲಿಸಿದ ಸೇವೆ ಕುರಿತು ಅಪಾರ ಗೌರವವಿದೆ," ಎಂದು ಬೋರಿಸ್ ಜಾನ್ಸನ್ ಹೇಳಿದ್ದಾರೆ.
"ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಸಂದರ್ಭದಲ್ಲಿ ಪ್ರಮಾಣಿಕವಾಗಿದ್ದು, ರೋಗ ನಿಯಂತ್ರಣಕ್ಕಾಗಿ ನಿಯಮಗಳನ್ನು ಪಾಲನೆ ಮಾಡುವುದರ ಜೊತೆಗೆ ತಮ್ಮ ಬದುಕನ್ನೇ ತ್ಯಾಗ ಮಾಡಿದವರಿಗೆ ನಾನು ಚಿರಋಣಿ ಆಗಿರುತ್ತೇನೆ. ಇದರ ಮಧ್ಯ ನನ್ನಿಂದ ಕೊವಿಡ್-19 ನಿಯಮಗಳ ಉಲ್ಲಂಘನೆ ಆಗಿದೆ, ಎಂದು ಇಂಗ್ಲೆಂಡ್ ಪ್ರಧಾನಮಂತ್ರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆರೋಗ್ಯ ಕಾರ್ಯದರ್ಶಿ ಸ್ಥಾನಕ್ಕೆ ಸಾಜಿದ್ ಜಾವಿದ್ ನೇಮಕ:
ಇಂಗ್ಲೆಂಡ್ ಆರೋಗ್ಯ ಕಾರ್ಯದರ್ಶಿ ಮ್ಯಾಟ್ ಹ್ಯಾನ್ಕಾಲ್ ರಾಜೀನಾಮೆ ಬೆನ್ನಲ್ಲೇ ಆ ಸ್ಥಾನಕ್ಕೆ ಸಾಜಿದ್ ಜಾವಿದ್ ಎಂ. ಪಿ ಅನ್ನು ನೇಮಿಸಲಾಗಿದೆ. ಹೊಸ ನೇಮಕಾತಿಗೆ ಸಂಬಂಧಿಸಿದಂತೆ ರಾಣಿ 2ನೇ ಎಲಿಜಬೆತ್ ಅನುಮೋದನೆ ನೀಡಿದ್ದಾರೆ.
ರಾಜೀನಾಮೆ ಹಿಂದೆ 'ಒಂದು ಮುತ್ತಿನ ಕಥೆ':
ಕಳೆದ ಮೇ 6ರಂದು ತಮ್ಮ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆಪ್ತ ಸಹಾಯಕಿ ಗಿನಾ ಕೊಲೊಡಂಗೆಲೋರಿಗೆ ಆರೋಗ್ಯ ಕಾರ್ಯದರ್ಶಿ ಆಗಿದ್ದ ಮ್ಯಾಟ್ ಹ್ಯಾನ್ಕಾಕ್ ಮುತ್ತು ನೀಡಿರುವ ಬಗ್ಗೆ 'ದಿ ಸನ್' ಪತ್ರಿಕೆ ವರದಿ ಮಾಡಿತ್ತು. ಕೊವಿಡ್-19 ನಿರ್ಬಂಧಗಳ ನಡುವೆ ಸಾಮಾಜಿಕ ಅಂತರವನ್ನು ಮರೆತು ಆಪ್ತ ಸಹಾಯಕಿಗೆ ಮುತ್ತು ನೀಡಿರುವ ಘಟನೆ ದೇಶಾದ್ಯಂತ ತೀವ್ರ ಟೀಕೆಗೆ ಗುರಿಯಾಗಿತ್ತು.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications