ವೆಂಟಿಲೇಟರ್ನಲ್ಲಿರುವ ಸಲ್ಮಾನ್ ರಶ್ದಿ, ದೃಷ್ಟಿ ಕಳೆದುಕೊಳ್ಳುವ ಅಪಾಯ!
ನ್ಯೂಯಾರ್ಕ್ ಆಗಸ್ಟ್ 13: ಭಾರತೀಯ ಮೂಲದ ಕಾದಂಬರಿಕಾರ ಮತ್ತು ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರು ದಾಳಿಯ ಬಳಿಕ ಪ್ರಸ್ತುತ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ. ನ್ಯೂಯಾರ್ಕ್ನ ಬಫಲೋ ಬಳಿಯ ಚೌಟಕ್ವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬರಹಗಾರ ಸಲ್ಮಾನ್ ರಶ್ದಿ ಮೇಲೆ ದಾಳಿ ನಡೆಸಲಾಯಿತು. ಸಲ್ಮಾನ್ ರಶ್ದಿ ಮೇಲೆ 10-15 ಬಾರಿ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಸಲ್ಮಾನ್ ರಶ್ದಿ ಅವರು ಕುತ್ತಿಗೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ಪ್ರಸ್ತುತ ವೆಂಟಿಲೇಟರ್ನಲ್ಲಿದ್ದಾರೆ. ಶಸ್ತ್ರ ಚಿಕಿತ್ಸೆ ಬಳಿಕ ಅವರು ಒಂದು ಕಣ್ಣಿನಲ್ಲಿ ದೃಷ್ಟಿ ಕಳೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ನ್ಯೂಯಾರ್ಕ್ ಟೈಮ್ಸ್ ವರದಿಯ ಪ್ರಕಾರ, ಸಲ್ಮಾನ್ ರಶ್ದಿ ಅವರ ಏಜೆಂಟ್ ಆಂಡ್ರ್ಯೂ ವೈಲಿ ಅವರು, ಸಲ್ಮಾನ್ ರಶ್ದಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಸಲ್ಮಾನ್ ರಶ್ದಿ ಅವರು ವೆಂಟಿಲೇಟರ್ನಲ್ಲಿದ್ದಾರೆ ಮತ್ತು ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಸಲ್ಮಾನ್ ರಶ್ದಿ ಅವರ ಏಜೆಂಟ್ ಆಂಡ್ರ್ಯೂ ವೈಲ್ಲಿ, "ಪರಿಸ್ಥಿತಿ ಚೆನ್ನಾಗಿಲ್ಲ. ಸಲ್ಮಾನ್ ಅವರು ಕಣ್ಣು ಕಳೆದುಕೊಂಡಿರುವ ಸಾಧ್ಯತೆಯಿದೆ. ಅವರ ತೋಳಿನಲ್ಲಿ ಮೂಳೆ ಮುರಿದುಹೋಗಿದ್ದು ಅವರು ಸಂಪೂರ್ಣವಾಗಿ ಹಾನಿಗೊಳಗಾಗಿದ್ದಾರೆ" ಎಂದಿದ್ದಾರೆ.

ಘಟನೆಯ ಹಿಂದಿನ ಉದ್ದೇಶ ನಿಗೂಢ
ನ್ಯೂಯಾರ್ಕ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಲ್ಮಾನ್ ರಶ್ದಿ ಕುತ್ತಿಗೆ ಮತ್ತು ದೇಹಕ್ಕೆ ಇರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅದೇ ವೇಳೆ ಹೊಟ್ಟೆಗೂ ಚಾಕುವಿನಿಂದ ಇರಿದಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸದ್ಯ ಪೊಲೀಸರು ದಾಳಿಕೋರನನ್ನು ಬಂಧಿಸಿದ್ದಾರೆ. ನ್ಯೂಯಾರ್ಕ್ ಸ್ಟೇಟ್ ಪೊಲೀಸರು ಸಲ್ಮಾನ್ ರಶ್ದಿಯ ಮೇಲೆ ದಾಳಿ ಮಾಡಿದ ಶಂಕಿತನನ್ನು ನ್ಯೂಜೆರ್ಸಿಯ 24 ವರ್ಷದ ಹಾದಿ ಮಾತರ್ ಎಂದು ಗುರುತಿಸಿದ್ದಾರೆ. ಆದರೆ, ಈ ಘಟನೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಭಾರತೀಯ ಮೂಲದ ಬ್ರಿಟಿನ್ ಬರಹಗಾರ ರಶ್ದಿ ಅವರು ತಮ್ಮ 'ದಿ ಸೈಟಾನಿಕ್ ವರ್ಸಸ್' ಪುಸ್ತಕಕ್ಕಾಗಿ ಇರಾನ್ನಿಂದ ಕೊಲೆ ಬೆದರಿಕೆಗಳು ಬಂದಿದ್ದವು. ಸಲ್ಮಾನ್ ರಶ್ದಿಯವರ ಈ ಪುಸ್ತಕ 1988 ರಲ್ಲಿ ಬಿಡುಗಡೆಯಾಯಿತು.

ಹಾದಿ ಮಾತರ್ ಯಾರು?
ನ್ಯೂಯಾರ್ಕ್ ಪೊಲೀಸರು ಶಂಕಿತನನ್ನು ನ್ಯೂಜೆರ್ಸಿಯ ಫೇರ್ವ್ಯೂನಿಂದ ಬಂಧಿಸಿದ್ದಾರೆ. ಬಂಧಿತನನ್ನು ಹದಿ ಮತರ್ (24) ಎಂದು ಗುರುತಿಸಲಾಗಿದೆ. ನ್ಯೂಯಾರ್ಕ್ ಸ್ಟೇಟ್ ಪೋಲೀಸ್ನ ಮೇಜರ್ ಯುಜೀನ್ ಸ್ಟಾನಿಸ್ಜೆವ್ಸ್ಕಿ ಶುಕ್ರವಾರ ಮಾಧ್ಯಮಗಳಿಗೆ ಮಾತನಾಡಿ, ಶಂಕಿತ ಹಾದಿ ಮಾತರ್ ವೇದಿಕೆಯ ಮೇಲೆ ಹಾರಿ "ಕನಿಷ್ಠ ಒಮ್ಮೆ ಕುತ್ತಿಗೆಗೆ ಮತ್ತು ಒಮ್ಮೆಯಾದರೂ ಹೊಟ್ಟೆಗೆ ಇರಿದ" ಎಂದು ಹೇಳಿದರು.

ಎಲೆಕ್ಟ್ರಾನಿಕ್ ಸಾಧನಗಳನ್ನು ಹೊಂದಿದ್ದ ದಾಳಿಕೋರ
ರಶ್ದಿ ಭಾಷಣ ಮಾಡಲಿರುವ ನ್ಯೂಯಾರ್ಕ್ನ ಚೌಟಕ್ವಾ ಇನ್ಸ್ಟಿಟ್ಯೂಟ್ನ ಅಧ್ಯಕ್ಷರು, ಮೈದಾನವನ್ನು ಪ್ರವೇಶಿಸಲು ಪಾಸ್ ಹೊಂದಿದ್ದರು. ಈ ವೇಳೆ ದಾಳಿಕೋರ ಪಾಸ್ ಪಡೆದು ಉಪನ್ಯಾಸದ ವೇದಿಗಕೆಗೆ ಆಗಮಿಸಿದ್ದಾನೆ ಎಂದು ಹೇಳಿದರು. ಅಧಿಕಾರಿಗಳು "ವಿವಿಧ ವಸ್ತುಗಳಿಗೆ ಸರ್ಚ್ ವಾರಂಟ್ಗಳನ್ನು ಪಡೆಯುವ ಪ್ರಕ್ರಿಯೆಯಲ್ಲಿದ್ದಾರೆ. ಘಟನಾ ಸ್ಥಳದಲ್ಲಿ ಬೆನ್ನುಹೊರೆಯಿತ್ತು. ಎಲೆಕ್ಟ್ರಾನಿಕ್ ಸಾಧನಗಳೂ ಇದ್ದವು" ಎಂದು ಮೇಜರ್ ಸ್ಟಾನಿಸ್ಜೆವ್ಸ್ಕಿ ಹೇಳಿದರು.

ಆರಂಭಿಕ ಹಂತದಲ್ಲಿ ತನಿಖೆ
ತನಿಖೆ ಇನ್ನೂ ಆರಂಭಿಕ ಹಂತದಲ್ಲಿದೆ ಮತ್ತು ಸದ್ಯಕ್ಕೆ ಯಾವುದೇ ಉದ್ದೇಶದ ಸೂಚನೆಯಿಲ್ಲ ಎಂದು ಅವರು ಹೇಳಿದರು. ದಾಳಿಯ ಹಿಂದಿನ ಉದ್ದೇಶವನ್ನು ನಿರ್ಧರಿಸಲು ನ್ಯೂಯಾರ್ಕ್ ಪೊಲೀಸರು ಎಫ್ಬಿಐ ಮತ್ತು ಶೆರಿಫ್ ಕಚೇರಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಸ್ಟಾನಿಸ್ಜೆವ್ಸ್ಕಿ ಹೇಳಿದರು.
ಈ ಸಮಯದಲ್ಲಿ, ಶಂಕಿತ ವ್ಯಕ್ತಿಯು "ಒಬ್ಬನೇ ಕೆಲಸ ಮಾಡುತ್ತಿದ್ದಾನೆ" ಎಂದು ಭಾವಿಸಲಾಗಿದೆ. ಆದರೆ ಅದು ನಿಜವೆಂದು ಖಚಿತಪಡಿಸಿಕೊಳ್ಳಲು ಅವರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
Recommended Video
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications