ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನ: ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಮರು ನಿರ್ಮಾಣಕ್ಕೆ 3.48 ಕೋಟಿ ರೂ.ಹಣ ಬಿಡುಗಡೆ

|
Google Oneindia Kannada News

ಪೇಶಾವರ, ಏಪ್ರಿಲ್ 9: ಪಾಕಿಸ್ತಾನದಲ್ಲಿ ಹಾನಿಗೊಳಗಾಗಿದ್ದ ಹಿಂದೂ ದೇವಾಲಯ ಮರು ನಿರ್ಮಾಣಕ್ಕೆ ಪಾಕಿಸ್ತಾನ ಸರ್ಕಾರ 3.48 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೆಲವು ಸ್ಥಳೀಯ ಮೌಲ್ವಿಗಳು ಮತ್ತು ಇಸ್ಲಾಮಿಸ್ಟ್ ಪಕ್ಷದ ಜಮಿಯತ್ ಉಲೆಮಾ-ಇ-ಇಸ್ಲಾಂ ಸದಸ್ಯರ ನೇತೃತ್ವದ ಗುಂಪಿನಿಂದ ಹಾನಿಗೊಳಗಾಗಿದ್ದ ಹಿಂದೂ ದೇವಾಲಯದ ಪುನರ್ ನಿರ್ಮಾಣಕ್ಕಾಗಿ ಪಾಕಿಸ್ತಾನದ ಖೈಬರ್ ಪಕ್ತುನ್ಖ್ವಾ ಪ್ರಾಂತೀಯ ಸರ್ಕಾರ 3.48 ಕೋಟಿ ರೂ. ಬಿಡುಗಡೆ ಮಾಡಿದೆ.

ಮಲೆ ಮಾದೇಶ್ವರ ಯುಗಾದಿ ಜಾತ್ರೆ; ಭಕ್ತರಿಗೆ ಪ್ರವೇಶ ನಿರ್ಬಂಧ

ಒಂದು ಶತಮಾನದಷ್ಟು ಹಳೆಯದಾದ ದೇವಾಲಯ ಮತ್ತು ಅದರ ಪಕ್ಕದ 'ಸಮಾಧಿ' ಮೇಲೆ ನಡೆದ ದಾಳಿಯನ್ನು ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮುಖಂಡರು ತೀವ್ರವಾಗಿ ಖಂಡಿಸಿದ್ದರು. ದೇವಾಲಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಪ್ರಾಂತೀಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

KPK Govt In Pak Releases Rs 3.48 Cr For Reconstruction Of Hindu Shrine Damaged By Mob

ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕರಕ್ ಜಿಲ್ಲೆಯ ಟೆರ್ರಿ ಗ್ರಾಮದಲ್ಲಿ ಕಳೆದ ವರ್ಷ ಡಿಸೆಂಬರ್ 30ರಂದು ನಾಶ ಮಾಡಲಾಗಿದ್ದ ಶ್ರೀ ಪರಮಹನ್ಸ್ ಜೀ ಮಹಾರಾಜ್ ಅವರ ಸಮಾಧಿಯ ಪುನರ್ನಿರ್ಮಾಣಕ್ಕಾಗಿ ಪ್ರಾಂತೀಯ ಸರ್ಕಾರವು ಅಕಾಫ್ ಇಲಾಖೆಗೆ 3,48,29,000 ರೂ. ಬಿಡುಗಡೆ ಮಾಡಿದೆ.

English summary
Pakistan''s Khyber Pakthunkhwa Provincial Government has released over Rs 3.48 crore for the reconstruction of a revered Hindu shrine damaged by a mob led by some local clerics and members of radical Islamist party Jamiat Ulema-e-Islam in December last year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X