ಮೇಲ್ಮನವಿ ಸಲ್ಲಿಸಲು ಕುಲಭೂಷಣ್ ಜಾಧವ್ಗೆ ಅವಕಾಶ: ಕಾಯ್ದೆಗೆ ಪಾಕಿಸ್ತಾನ ತಿದ್ದುಪಡಿ
ಇಸ್ಲಾಮಾಬಾದ್, ನವೆಂಬರ್ 13: ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾಗಿ, ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರು ಸಿವಿಲಿಯನ್ ನ್ಯಾಯಾಲಯದಲ್ಲಿ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಪಾಕಿಸ್ತಾನವು ತನ್ನ ಸೇನಾ ಕಾಯ್ದೆಗೆ ತಿದ್ದುಪಡಿ ತರಲಿದೆ.
ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನದ ಸೇನಾ ನ್ಯಾಯಾಲಯವು ವಿಚಾರಣೆಗೊಳಪಡಿಸಿ ಸೇನಾ ಕಾಯ್ದೆಯಡಿ ಗಲ್ಲುಶಿಕ್ಷೆ ವಿಧಿಸಿತ್ತು. ಅದರ ವಿರುದ್ಧ ಮನವಿ ಸಲ್ಲಿಸಲು ಪ್ರಸ್ತುತದ ಕಾನೂನಿನಲ್ಲಿ ಅವಕಾಶವಿಲ್ಲ.
ಕುಲಭೂಷಣ್ ಜಾಧವ್ ಅವರಿಗೆ ಗಲ್ಲುಶಿಕ್ಷೆ ವಿಧಿಸಿದ್ದ ಆದೇಶವನ್ನು ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಕುಲಭೂಷಣ್ ಜಾಧವ್ ಅವರಿಗೆ ಕೌನ್ಸೆಲರ್ ಭೇಟಿಯ ಅವಕಾಶ ಕಲ್ಪಿಸಬೇಕು ಮತ್ತು ಅವರ ಗಲ್ಲುಶಿಕ್ಷೆಯನ್ನು ಪರಾಮರ್ಶಿಸಬೇಕು ಎಂದು ಅಂತಾರಾಷ್ಟ್ರೀಯ ನ್ಯಾಯಾಲಯ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜಾಧವ್ ಅವರಿಗೆ ಮೇಲ್ಮನವಿ ಅವಕಾಶ ಕಲ್ಪಿಸಲು ಪಾಕಿಸ್ತಾನ ಮುಂದಾಗಿದೆ.

'ಕುಲಭೂಷಣ್ ಜಾಧವ್ ಅವರಿಗೆ ತಮ್ಮ ಶಿಕ್ಷೆಯನ್ನು ಸಿವಿಲ್ ನ್ಯಾಯಾಲಯದಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯ ನೀಡಿದ ಸೂಚನೆಯಂತೆ ಪಾಕಿಸ್ತಾನ ತನ್ನ ಸೇನಾ ಕಾಯ್ದೆಗೆ ತಿದ್ದುಪಡಿ ತರಲಿದೆ. ಈ ಪ್ರಕರಣವು ಸೇನಾ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಿತ್ತು. ಯಾವುದೇ ವ್ಯಕ್ತಿ ಅಥವಾ ಗುಂಪು ಸಿವಿಲ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಮತ್ತು ನ್ಯಾಯ ಕೋರುವುದನ್ನು ಸೇನಾ ಕಾಯ್ದೆ ಪ್ರತಿಬಂಧಿಸಿತ್ತು. ಆದರೆ ಕುಲಭೂಷಣ್ ಜಾಧವ್ಗಾಗಿ ವಿಶೇಷ ತಿದ್ದುಪಡಿ ಮಾಡಲಾಗುತ್ತಿದೆ' ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications