ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನಕ್ಕೆ ಮುಖಭಂಗ
ದಿ ಹೇಗ್, ಜುಲೈ 17: ತೀವ್ರ ಕುತೂಹಲ ಕೆರಳಿಸಿದ್ದ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತಕ್ಕೆ ರಾಜತಾಂತ್ರಿಕ ಗೆಲುವು ದೊರೆತಿದ್ದು, ಪಾಕಿಸ್ತಾನಕ್ಕೆ ಮುಖಭಂಗವಾಗಿದೆ.
ಪಾಕಿಸ್ತಾನದೊಳಗೆ ನುಗ್ಗಿ ಬೇಹುಗಾರಿಕೆ ಮತ್ತು ಭಯೋತ್ಪಾದನೆಯ ಸಂಚು ನಡೆಸಿದ್ದ ಆರೋಪದಲ್ಲಿ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಅಲ್ಲಿನ ಸೇನಾ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಅಮಾನತು ಮಾಡಿದೆ. ಅಲ್ಲದೆ, ಪಾಕಿಸ್ತಾನವು ತನ್ನ ತೀರ್ಪನ್ನು ಮರುಪರಿಶೀಲಿಸುವಂತೆ ಸೂಚಿಸಿದೆ.
ಜಾಧವ್ ಅವರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಿಯೇ ಸಿದ್ಧ ಎಂದು ಹೇಳಿದ್ದ ಪಾಕಿಸ್ತಾನಕ್ಕೆ ಇದರಿಂದ ಹಿನ್ನಡೆಯಾಗಿದೆ. ಆದರೆ, ಜಾಧವ್ ಅವರ ಗಲ್ಲುಶಿಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಅವರನ್ನು ಬಿಡುಗಡೆ ಮಾಡಬೇಕೆಂಬ ಭಾರತದ ಬೇಡಿಕೆಯನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಪುರಸ್ಕರಿಸಿಲ್ಲ ಎನ್ನುವುದು ಕೂಡ ಗಮನಿಸಬೇಕಾದ ಸಂಗತಿ.
ಜಾಧವ್ ಅವರಿಗೆ ರಾಜತಾಂತ್ರಿಕ ಭೇಟಿ ಅವಕಾಶ ನೀಡದೆ ವಿಯೆನ್ನಾ ಒಪ್ಪಂದ ಉಲ್ಲಂಘಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ರಾಜತಾಂತ್ರಿಕ ಅವಕಾಶವು ವಿಯೆನ್ನಾ ಒಪ್ಪಂದ ಮೂಲ ತತ್ವವಾಗಿದೆ. ಇದನ್ನು ಪಾಕಿಸ್ತಾನ ಉಲ್ಲಂಘನೆ ಮಾಡಿರುವುದು ಅಲ್ಲದೆ, ಜಾಧವ್ ಅವರ ತಾಯಿ ಮತ್ತು ಪತ್ನಿಯನ್ನು ಅಲ್ಲಿನ ಸೇನೆ ಕೆಟ್ಟದಾಗಿ ನಡೆಸಿಕೊಂಡಿತ್ತು ಎಂದು ಭಾರತ ಆರೋಪಿಸಿತ್ತು.

ಗಲ್ಲುಶಿಕ್ಷೆ ತೀರ್ಪು ಅಮಾನತು
ಜಾಧವ್ಗೆ ವಿಧಿಸಿರುವ ಗಲ್ಲುಶಿಕ್ಷೆ ತೀರ್ಪನ್ನು ಅಮಾನತು ಮಾಡಿದ ಅಂತಾರಾಷ್ಟ್ರೀಯ ನ್ಯಾಯಾಲಯವು, ಜಾಧವ್ ಅವರನ್ನು ಭೇಟಿ ಮಾಡಲು ಮತ್ತು ಅವರು ಕಾನೂನಾತ್ಮಕ ನೆರವು ಒದಗಿಸಲು ಭಾರತದ ರಾಜತಾಂತ್ರಿಕರಿಗೆ ಅವಕಾಶ ನೀಡುವಂತೆ ಆದೇಶ ಹೊರಡಿಸಿದೆ.
ಕುಲಭೂಷಣ್ ಸುಧೀರ್ ಜಾಧವ್ ಅವರ ಶಿಕ್ಷೆ ಮತ್ತು ಮರಣದಂಡನೆಯನ್ನು ಪರಿಣಾಮಕಾರಿಯಾಗಿ ಮರುಪರಿಗಣಿಸಲು ಹಾಗೂ ಮರುಪರಿಶೀಲಿಸಲು ಶಿಕ್ಷೆ ಜಾರಿ ಮೇಲಿನ ತಡೆಯನ್ನು ಮುಂದುವರಿಸುವುದು ಅಗತ್ಯವಾಗಿದೆ ಎಂದು ಐಸಿಜೆ ಹೇಳಿದೆ.

ಆರ್ಟಿಕಲ್ 36ರ ಉಲ್ಲಂಘನೆ
ಪಾಕಿಸ್ತಾನವು ಕಾನ್ಸುಲರ್ ಭೇಟಿ ನಿರಾಕರಿಸುವ ಮೂಲಕ ಆರ್ಟಿಕಲ್ 36 (1)ಅನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಜಾಧವ್ ಅವರ ಗಲ್ಲುಶಿಕ್ಷೆಯ ತೀರ್ಪನ್ನು ಪರಿಣಾಮಕಾರಿಯಾಗಿ ಮರುಪರಿಶೀಲನೆ ಮತ್ತು ಮರುಪರಿಗಣನೆಗೆ ಒಳಪಡಿಸಬೇಕು ಎಂದು ಹೇಳಿದೆ. ಬೇಹುಗಾರಿಕೆಯ ಪ್ರಕರಣಗಳಲ್ಲಿ ವಿಯೆನ್ನಾ ಒಪ್ಪಂದದ ಆರ್ಟಿಕಲ್ 36 ಅನ್ವಯವಾಗುವುದಿಲ್ಲ ಎಂದು ವಾದಿಸಿದ ಪಾಕಿಸ್ತಾನ. 2008ರಲ್ಲಿ ಭಾರತ ಮತ್ತು ಪಾಕಿಸ್ತಾನ ಮಾಡಿಕೊಂಡ ಒಪ್ಪಂದ ಈ ಪ್ರಕರಣದಲ್ಲಿ ಮುಖ್ಯವಾಗುತ್ತದೆ ಎಂದು ವಾದ.

ಭಾರತದ ಕೆಲ ಮನವಿಗಳ ತಿರಸ್ಕಾರ
ಜಾಧವ್ ಅವರಿಗೆ ವಿಧಿಸಿರುವ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಬೇಕು, ಅವರನ್ನು ಬಿಡುಗಡೆ ಮಾಡಿ ಭಾರತಕ್ಕೆ ಸುರಕ್ಷಿತವಾಗಿ ಕಳುಹಿಸಬೇಕು ಎಂಬುದು ಸೇರಿದಂತೆ ಭಾರತದ ಬಹುತೇಕ ಬೇಡಿಕೆಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.

ಭಾರತದ ಪರ 15 ನ್ಯಾಯಾಧೀಶರು
ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ 16 ನ್ಯಾಯಾಧೀಶರ ಪೈಕಿ ಭಾರತದ ಪರ 15 ನ್ಯಾಯಾಧೀಶರು ಮತ ಚಲಾಯಿಸಿದರೆ, ಭಾರತದ ವಿರುದ್ಧ ಒಬ್ಬ ನ್ಯಾಯಾಧೀಶರು ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳ ನ್ಯಾಯಾಧೀಶರು ಈ ವಿಚಾರಣೆಯಲ್ಲಿ ಭಾಗವಹಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಲು ಸಿಐಜೆಗೆ ಅಧಿಕಾರವಿದೆ ಎನ್ನುವುದಕ್ಕೆ ಎಲ್ಲ 16 ನ್ಯಾಯಾಧೀಶರು ಅವಿರೋಧವಾಗಿ ಒಪ್ಪಿಕೊಂಡಿದ್ದರು. ಉಳಿದಂತೆ ಭಾರತದ ಎಲ್ಲ ವಾದಗಳಿಗೂ ಪಾಕಿಸ್ತಾನದ ನ್ಯಾಯಾಧೀಶರನ್ನು ಹೊರತುಪಡಿಸಿ ಉಳಿದ ಎಲ್ಲ ನ್ಯಾಯಾಧೀಶರೂ ಅನುಮೋದನೆ ನೀಡಿದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications