ಶನಿವಾರ ಭಾರತ-ಚೀನಾದ 12ನೇ ಸುತ್ತಿನ ಕಮಾಂಡರ್ ಹಂತದ ಸಭೆ
ನವದೆಹಲಿ, ಜುಲೈ 30: ಲಡಾಖ್ ಪೂರ್ವದಲ್ಲಿರುವ ಗಾಲ್ವಾನ್ ಕಣಿವೆ ಸಂಘರ್ಷದ ಬಳಿಕ ಭಾರತ-ಚೀನಾ ನಡುವಿನ 12 ಬಾರಿ ಉಭಯ ರಾಷ್ಟ್ರಗಳ ಲೆಫ್ಟಿನೆಂಟ್ ಜನರಲ್ ಹಂತದ ಸಭೆಯು ಶನಿವಾರ ನಡೆಯಲಿದೆ.
ಚೀನಾದ ಗಡಿರೇಖೆಗೆ ಹೊಂದಿಕೊಂಡಂತೆ ಮಾಲ್ಡೋ ಪ್ರದೇಶದಲ್ಲಿ ಬೆಳಗ್ಗೆ 10.30ಕ್ಕೆ ಭಾರತ ಮತ್ತು ಚೀನಾದ ಹಿರಿಯ ಕಮಾಂಡರ್ ಹಂತದ ಸಭೆಯು ನಡೆಯಲಿದೆ. ಈ ವೇಳೆ ಹಿರಿಯ ಅಧಿಕಾರಿಗಳು ಪೂರ್ವ ಲಡಾಖ್ ಭಾಗದ ವಿವಾದಿತ ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾ ಹೈಟ್ಸ್ ಪ್ರದೇಶಗಳಲ್ಲಿ ಸೇನಾ ನಿಷ್ಕ್ರಿಯಗೊಳಿಸುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಭಾರತೀಯ ಸೇನಾ ಮೂಲಗಳಿಂದ ತಿಳಿದು ಬಂದಿದೆ.
ಉಭಯ ರಾಷ್ಟ್ರಗಳು ಪರಸ್ಪರ ಭದ್ರತಾ ಕಾಳಜಿಯಿಂದಾಗಿ ಎರಡೂ ಕಡೆಗಳ ಸೇನೆಗಳು ಸರಿಸಮನಾಗಿ ವಾಪಸ್ ತೆಗೆದುಕೊಳ್ಳುವ ಬಗ್ಗೆ ಭಾರತೀಯ ಸೇನೆ ಉಲ್ಲೇಖಿಸಿದೆ. ಗಡಿ ಪ್ರದೇಶದ ಎತ್ತರದ ಸ್ಥಳಗಳಿಂದ ಸೇನೆಯನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಭಾರತ ಸಿದ್ಧವಿದೆ, ಆದರೆ ಚೀನಾ ಕೂಡ ಅಷ್ಟೇ ಸಂಖ್ಯೆಯ ಸೇನೆಯನ್ನು ಅಲ್ಲಿಂದ ವಾಪಸ್ ತೆಗೆದುಕೊಳ್ಳಬೇಕು ಎಂದು ಭಾರತೀಯ ಸೇನೆಯು ಷರತ್ತು ವಿಧಿಸುವ ಬಗ್ಗೆ ತಿಳಿದು ಬಂದಿದೆ.

ಮಿಲಿಟರಿ ಸಭೆ ಸೇರುವ ಬಗ್ಗೆ ಚೀನಾ ಪ್ರಸ್ತಾಪ:
ಕಳೆದ ಜುಲೈ 22ರಂದು ಚೀನಾ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಮತ್ತು ಭಾರತೀಯ ವಿದೇಶಾಂಗ ವ್ಯವಹಾರ ಸಚಿವ ಜೈಶಂಕರ್ ಸಭೆ ನಡೆಸಿದ್ದರು. ಈ ವೇಳೆ ಉಭಯ ರಾಷ್ಟ್ರಗಳ ನಡುವೆ ಸಾಧ್ಯವಾದಷ್ಟು ಬೇಗನೇ ಕಮಾಂಡರ್ ಹಂತದ ಸಭೆಯನ್ನು ಕರೆಯಬೇಕೆಂದು ಚೀನಾದ ವಕ್ತಾರರು ಪ್ರಸ್ತಾಪಿಸಿದ್ದರು. ಎರಡು ರಾಷ್ಟ್ರಗಳು ಪರಸ್ಪರ ಒಪ್ಪಿಕೊಳ್ಳುವಿಕೆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕುರಿತು ಉಲ್ಲೇಖಿಸಿದ್ದರು.
ಭಾರತ ಚೀನಾ ಯೋಧರ ನಡುವೆ ಸಂಘರ್ಷ
2020ರ ಜೂನ್.06ರಂದು ಲಡಾಖ್ ಗಡಿಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವೆ ಶಾಂತಿಸಭೆ ನಡೆಸಲಾಗಿತ್ತು. ಈ ಸಭೆಯು ವಿಫಲವಾದ ಬೆನ್ನಲ್ಲೇ 2020ರ ಜೂನ್ 15 ಮತ್ತು 16ರ ರಾತ್ರಿ ಲಡಾಖ್ ಪೂರ್ವ ಗಡಿ ಪ್ರದೇಶದ ಗಾಲ್ವಾನ್ ಕಣಿವೆಯ ಬಳಿ ಭಾರತ-ಚೀನಾ ಯೋಧರ ನಡುವೆ ಸಂಘರ್ಷ ನಡೆಯಿತು. ರೌಡಿಗಳಂತೆ ವರ್ತಿಸಿದ ಚೀನಾ ಯೋಧರು ಮಾರಕಾಸ್ತ್ರಗಳಿಂದ ಭಾರತೀಯ ಯೋಧರ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಭಾರತದ 20 ಯೋಧರು ಹುತಾತ್ಮರಾಗಿದ್ದು, 70 ಯೋಧರು ಗಾಯಗೊಂಡಿದ್ದರು.
ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರ ಸಾವಿಗೆ ಕಾರಣವಾದ ಚೀನಾದ ವಿರುದ್ಧ ಭಾರತೀಯ ಯೋಧರು ಪ್ರತೀಕಾರ ತೀರಿಸಿಕೊಂಡರು. ಭಾರತ ನಡೆಸಿದ ಪ್ರತಿದಾಳಿಯಲ್ಲಿ ಚೀನಾದ 40ಕ್ಕೂ ಹೆಚ್ಚು ಯೋಧರು ಹತರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಚೀನಾ ಮಾತ್ರ ಸೈನಿಕರ ಸಾವು-ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ವಾದಿಸಿತು.
ಲಡಾಖ್ ಗಡಿ ವಿವಾದಕ್ಕೆ ಕಾರಣವಾಗಿರುವುದು ಏನು?
ಭಾರತ ಮತ್ತು ಚೀನಾ ಗಡಿಯ ಪಂಗೊಂಗ್ ಸೋ, ಗಲ್ವಾನ್ ವ್ಯಾಲಿ ಪ್ರದೇಶದಲ್ಲಿ 2,500 ಯೋಧರು ಶಸ್ತ್ರಸಜ್ಜಿತರಾಗಿ ನಿಂತಿದ್ದಾರೆ. ಪಂಗೊಂಗ್ ಸೋ ಸುತ್ತಮುತ್ತಲು 180 ಕಿ.ಮೀ ವ್ಯಾಪ್ತಿಯಲ್ಲಿ ರಕ್ಷಣಾ ಮೂಲಸೌಕರ್ಯಗಳ ಕಾಮಗಾರಿ ಚಟುವಟಿಕೆ ನಡೆಸುತ್ತಿರುವುದು ಉಪಗ್ರಹ ಸೆರೆ ಹಿಡಿದ ಫೋಟೋಗಳಲ್ಲಿ ಸಾಬೀತಾಗಿದೆ. ಇದಕ್ಕೂ ಮೊದಲು ದರ್ಬಕ್-ಶಯೊಕ್ ನಿಂದ ದೌಲತ್ ಬೆಗ್ ಒಲ್ಡಿಯೆಗೆ ಗಾಲ್ವಾನ್ ವ್ಯಾಲಿಯಲ್ಲಿ ರಸ್ತೆ ನಿರ್ಮಿಸುವುದಕ್ಕೆ ಭಾರತವು ಮುಂದಾಗಿತ್ತು. ಪಂಗೊಂಗ್ ಸೋ ತುದಿಯಲ್ಲಿರುವ ಪ್ರದೇಶದಲ್ಲಿ ರಸ್ತೆ ಕಾಮಗಾರಿಗೆ ಚೀನಾ ವಿರೋಧಿಸಿತ್ತು. ಪಂಗೊಂಗ್ ಸೋ ಪ್ರದೇಶ ತೀರಾ ಮಹತ್ವವಾಗಿದ್ದು ಎಂದು ಭಾರತ ಕೂಡಾ ಪರಿಗಣಿಸಿತ್ತು. ಆದರೆ ಚೀನಾ ವಿರೋಧದ ಹಿನ್ನೆಲೆ ಗಡಿಯಲ್ಲಿ ಯಾವುದೇ ರೀತಿ ಸೇನೆ ನಿಯೋಜಿಸದಿರಲು ಭಾರತವು ತೀರ್ಮಾನಿಸಿತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications