ಇನ್ನೂ 4 ಗಡಿ ಪ್ರದೇಶಗಳನ್ನು ನುಂಗುತ್ತೇವೆ ಎಂದ ಚೀನಾ
ಬೀಜಿಂಗ್, ಜೂನ್ 19: ಲಡಾಖ್ನ ಗಲ್ವಾನ್ ಕಣಿವೆಯ ಪ್ರದೇಶದಲ್ಲಿ ಚೀನಾ ಉದ್ಧಟತನ ಮುಂದುವರೆದ ಬೆನ್ನಲ್ಲೇ ಭಾರತದ ಇನ್ನಷ್ಟು ಭೂಭಾಗವನ್ನು ಆಕ್ರಮಿಸಿಕೊಳ್ಳುವ ಮಾತುಗಳನ್ನು ಚೀನಾ ಆಡಿದೆ.
Recommended Video
ಉದ್ಧಟತನ ಮುಂದುವರೆದಂತೆ ಆಧುನಿಕ ಚೀನಾ ನಿರ್ಮಾತೃ ಮಾವೋಝೆಡಾಂಗ್ ಟಿಬೆಟ್ನ್ನು ಆಕ್ರಮಿಸಿಕೊಂಡ ಬಳಿಕ ಅಂಗೈನ ಐದು ಬೆರಳಿನ ಸೂತ್ರವನ್ನು ಮುಂದಿಟ್ಟಿದ್ದರು.
ಇನ್ನೂ ನಾಲ್ಕು ಬಾಕಿ ಉಳಿದಿದೆ, ಅದರಲ್ಲಿ ನೇಪಾಳ ಭೂತಾನ್, ಅರುಣಾಚಲಪ್ರದೇಶ ಹಾಗೂ ಸಿಕ್ಕಿಂ ಎಂದು ಉದ್ಘರಿಸಿದ್ದರು. ಮಾವೋ ಅವರ ಈ ಹೇಳಿಕೆಯನ್ನು ಈಗ ಟಿಬೆಟ್ ಭಾಗದ ಚೀನಾ ಮುಖ್ಯಸ್ಥ ಲೊಬ್ಸಾಂಗ್ ಸಾಂಗಾಯ್ ಪುನರುಚ್ಚರಿಸಿದ್ದಾರೆ.

ಲಡಾಖ್ ಹಾಗೂ ಗಲ್ವಾನ್ ದಾಳಿ ಹಾಗೂ ಚೀನಾದ ಆಕ್ರಮಣ ಇದು ಅದರ ಮೊದಲ ಭಾಗವಾಗಿದೆ. ಟಿಬೆಟ್ನಲ್ಲಿ ಏನಾಗಿದೆ ಎಂದು ಭಾರತ ತಿಳಿದುಕೊಳ್ಳಲಿ, ಚೀನಾವನ್ನು ಕಡೆಗಣಿಸಿ ಸೈನ್ಯದ ಸಾಮರ್ಥ್ಯವನ್ನು ನಿರ್ಲಕ್ಷಿಸಿದರೆ ಭಾರತ ಪಾಠ ಕಲಿಯಬೇಕಾದೀತು ಎಂದು ಉದ್ಧಟತನದ ಮಾತುಗಳನ್ನಾಡಿದ್ದಾರೆ.
ಭಾರತ ಹಾಗೂ ಚೀನಾ ಗಡಿ ಸಾಮರಸ್ಯ ಕಾಯ್ದುಕೊಂಡು ಸಾರ್ವಭೌಮತ್ವವನ್ನು ಗೌರವಿಸಬೇಕು ಎಂಬ ಶಾಂತಿ ಮಾತುಗಳ ಮಧ್ಯೆ ಟಿಬೆಟ್ ಆಡಳಿತದ ಚುಕ್ಕಾಣಿ ಹೊಂದಿರುವ ವ್ಯಕ್ತಿಯ ಹೇಳಿಕೆ ಇನ್ನಷ್ಟು ಸಂಘರ್ಷಕ್ಕೆ ಕಾರಣವಾಗಬಹುದು.
ಈ ಹೇಳಿಕೆ ಬಗೆಗೂ ಭಾರತ ಅಧಿಕೃತವಾಗಿ ತನ್ನ ಆಕ್ಷೇಪವನ್ನು ವ್ಯಕ್ತಪಡಿಸುವ ಸಾಧ್ಯತೆ ಇದೆ. ಚೀನಾದ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ಷೇಪಗಳು ವ್ಯಕ್ತವಾಗಿವೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications