ಲಡಾಖ್ ವಿವಾದ: ಭಾರತ-ಚೀನಾ ನಡುವೆ ರಾಜತಾಂತ್ರಿಕ ಸಭೆ
ನವದೆಹಲಿ, ಜೂನ್ 23: ಪೂರ್ವ ಲಡಾಖ್ ಗಡಿ ಪ್ರದೇಶದಲ್ಲಿ ಜನರು ಅಭಿವೃದ್ಧಿ ಬಯಸುತ್ತಿದ್ದು ವಿವಾದಿತ ಪ್ರದೇಶದಲ್ಲಿ ಸೇನಾ ಚಟುವಟಿಕೆಗಳನ್ನು ನಿಷ್ಕ್ರೀಯಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಚೀನಾ ಮತ್ತು ಭಾರತದ ನಡುವೆ ಇದೇ ವಾರ ಮತ್ತೊಂದು ಸುತ್ತಿನ ರಾಜತಾಂತ್ರಿಕ ಸಭೆ ನಡೆಯಲಿದೆ.
ಭಾರತ-ಚೀನಾ ಗಡಿ ವ್ಯವಹಾರಗಳ ಸಮಾಲೋಚನೆ ಮತ್ತು ಸಮನ್ವಯ ಕಾರ್ಯ ವಿಧಾನ(WMCC)ದ ಚೌಕಟ್ಟಿನ ಬಗ್ಗೆ ಚರ್ಚೆ ನಡೆಸಲು ಉದ್ದೇಶಿಸಲಾಗಿದೆ. ಪೂರ್ವ ಲಡಾಕ್ನಲ್ಲಿ ಉಭಯ ದೇಶಗಳ ಉದ್ವಿಗ್ನತೆಯನ್ನು ಬಗೆಹರಿಸುವ ವಿಶಾಲ ತತ್ವಗಳತ್ತ ಗಮನ ಹರಿಸುವ ನಿರೀಕ್ಷೆಯಿದೆ.
ಜೂನ್ 24ರಂದು ಭಾರತ ಮತ್ತು ಚೀನಾ ನಡುವಿನ WMCC ಸಭೆ ನಡೆಯಲಿದೆ. ಇದಕ್ಕೂ ಮೊದಲು ಕಳೆದ ಮಾರ್ಚ್ 12ರಂದು WMCC ಸಭೆ ನಡೆಸಲಾಗಿತ್ತು. ಗುರುವಾರ ನಡೆಯಲಿರುವ ರಾಜತಾಂತ್ರಿಕ ಮಾತುಕತೆ ಬಳಿಕ ಮತ್ತೊಂದು ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಉಭಯ ಸೇನಾ ಪಡೆಗಳು ಹಿಂದಕ್ಕೆ:
ಭಾರತ ಮತ್ತು ಚೀನಾದ ನಡುವಿನ ಸೇನಾ ಹಾಗೂ ರಾಜತಾಂತ್ರಿಕ ಸಭೆಗಳ ನಂತರ ಫೆಬ್ರವರಿ ತಿಂಗಳಿನಲ್ಲಿ ವಿವಾದಿತ ಪ್ಯಾಂಗಾಂಗ್ ಲೇಕ್ ಪ್ರದೇಶದ ಉತ್ತರ ಮತ್ತು ದಕ್ಷಿಣ ಪ್ರದೇಶದಲ್ಲಿ ಸೇನಾ ಚಟುವಟಿಕೆಗಳನ್ನು ನಿಷ್ಕ್ರಿಯಗೊಳಿಸಿದ ಸೇನೆಯನ್ನು ಹಿಂದಕ್ಕೆ ತೆಗೆದುಕೊಳ್ಳಲಾಗಿತ್ತು. ಇದೀಗ ವಿವಾದಿತ ಕೇಂದ್ರಗಳಲ್ಲಿ ಎರಡೂ ಕಡೆಯ ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸುವುದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಭಾರತವು ವಿಶೇಷವಾಗಿ ಹಾಟ್ ಸ್ಪ್ರಿಂಗ್, ಗೊಗ್ರಾ ಮತ್ತು ದಪ್ಸಾಂಗ್ ಪ್ರದೇಶಗಳಲ್ಲಿ ಸೇನಾ ಚಟುವಟಿಕೆಗಳನ್ನು ನಿಷ್ಕ್ರಿಯಗೊಳಿಸುವುದಕ್ಕೆ ಹೆಚ್ಚಿನ ಒತ್ತಡ ಹೇರಲಿದೆ.
ಗಡಿಯಲ್ಲಿ 50,000 ದಿಂದ 60,000 ಸೇನೆ:
ಮಿಲಿಟರಿ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಪ್ರಸ್ತುತ ಭಾರತ ಮತ್ತು ಚೀನಾದ ಗಡಿ ನಿಯಂತ್ರಣ ರೇಖೆಯ ಸೂಕ್ಷ್ಮ ಪ್ರದೇಶಗಳಲ್ಲಿ 50,000 ದಿಂದ 60,000 ಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಳೆದ 11ನೇ ಸುತ್ತಿನ ಮಿಲಿಟರಿ ಮಾತುಕತೆಗಳಲ್ಲಿ ವಿವಾದಿತ ಪ್ರದೇಶಗಳಲ್ಲಿ ಸೇನೆ ನಿಷ್ಕ್ರಿಯಗೊಳಿಸುವುದರ ಕುರಿತು ಚೀನಾ ಸಕಾರಾತ್ಮಕವಾಗಿ ಸ್ಪಂದಿಸಿರಲಿಲ್ಲ ಎಂದು ಹೇಳಲಾಗಿದೆ.
ಎಲ್ಲದಕ್ಕೂ ಸಿದ್ಧ ಎಂದ ಭಾರತ:
"ಪೂರ್ವ ಲಡಾಖ್ನ ವಿವಾದಿತ ಪ್ರದೇಶಗಳಲ್ಲಿ ಸೇನೆಯನ್ನು ಸಂಪೂರ್ಣ ನಿಷ್ಕ್ರಿಯಗೊಳಿಸದೇ ಯಾವುದೇ ಸಂಬಂಧ ಬಲವರ್ಧನೆ ಸಾಧ್ಯವಾಗುವುದಿಲ್ಲ. ಇದರ ಹೊರತಾಗಿ ಎಲ್ಲ ರೀತಿಯ ಸವಾಲುಗಳನ್ನು ಎದುರಿಸುವುದಕ್ಕೆ ಭಾರತ ಸಿದ್ಧವಾಗಿದೆ," ಎಂದು ಭಾರತದ ಸೇನಾ ಮುಖ್ಯಸ್ಥ ಎಂ ಎಂ ನಾರವಾನೆ ಹೇಳಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications