Breaking: ಮಲೇಷ್ಯಾದ ಕೌಲಾಲಂಪುರ್ ಬಳಿ ಭೂಕುಸಿತ: 2 ಸಾವು, 50 ಕ್ಕೂ ಹೆಚ್ಚು ಮಂದಿ ನಾಪತ್ತೆ
ಶುಕ್ರವಾರ ಮುಂಜಾನೆ ಮಲೇಷ್ಯಾದ ಕ್ಯಾಂಪ್ಸೈಟ್ನಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು 50 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಬದುಕುಳಿದವರಿಗಾಗಿ ರಕ್ಷಣಾ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜಧಾನಿ ಕೌಲಾಲಂಪುರ್ನ ಹೊರವಲಯದಲ್ಲಿರುವ ಸೆಲಂಗೋರ್ ರಾಜ್ಯದಲ್ಲಿ ಸ್ಥಳೀಯ ಸಮಯ (1900 GMT) ಸುಮಾರು 3 ಗಂಟೆಗೆ ಭೂಕುಸಿತ ಸಂಭವಿಸಿದೆ. ರಾಜ್ಯ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಹೇಳಿಕೆಯ ಪ್ರಕಾರ, ರಸ್ತೆ ಬದಿಯಲ್ಲಿ ಕ್ಯಾಂಪಿಂಗ್ ಸೌಲಭ್ಯಗಳನ್ನು ಒದಗಿಸುವ ಫಾರ್ಮ್ಹೌಸ್ ಭೂಕುಸಿತದಿಂದ ನಾಶವಾಗಿದೆ.
ಭೂಕುಸಿತದಲ್ಲಿ ಒಟ್ಟು 79 ಮಂದಿ ಸಿಲುಕಿದ್ದು, 23 ಮಂದಿ ಸುರಕ್ಷಿತವಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ. ಇದಲ್ಲದೆ, ಇಬ್ಬರು ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ ಮತ್ತು 51 ಮಂದಿ ಇನ್ನೂ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಭೂಕುಸಿತ ಕ್ಯಾಂಪ್ಸೈಟ್ನಿಂದ ಅಂದಾಜು 30 ಮೀಟರ್ (100 ಅಡಿ) ಎತ್ತರದಿಂದ ಉಂಟಾಗಿದೆ. ಸುಮಾರು ಒಂದು ಎಕರೆ (0.4 ಹೆಕ್ಟೇರ್) ವಿಸ್ತೀರ್ಣವನ್ನು ಆವರಿಸಿದೆ ಎಂದು ಇಲಾಖೆಯ ನಿರ್ದೇಶಕ ನೊರಾಜಮ್ ಖಮಿಸ್ ರಾಯಿಟರ್ಸ್ಗೆ ತಿಳಿಸಿದರು.
ಇದು ನೈಸರ್ಗಿಕ ಸೌಂದರ್ಯಕ್ಕಾಗಿ ಜನಪ್ರಿಯವಾಗಿರುವ ರೆಸಾರ್ಟ್ಗಳ ಬಳಿ ಸಂಭವಿಸಿದೆ. ಉತ್ತರದಲ್ಲಿರುವ ಬಟಾಂಗ್ ಕಲಿ ಜಿಲ್ಲೆಯ ಸುಂದರವಾದ ಗುಡ್ಡಗಾಡು ಪ್ರದೇಶವಾದ ಗೆಂಟಿಂಗ್ ಹೈಲ್ಯಾಂಡ್ಸ್ನ ಹೊರಗೆ ಇದು ಸಂಭವಿಸಿದೆ. ಸೆಲಂಗೋರ್ ಈ ಮೊದಲು ಭೂಕುಸಿತವನ್ನು ಅನುಭವಿಸಿದೆ. ಆಗಾಗ್ಗೆ ಅರಣ್ಯ ಮತ್ತು ಭೂ ತೆರವು ಇದಕ್ಕೆ ಕಾರಣವಾಗಿದೆ. ಒಂದು ವರ್ಷದ ಹಿಂದೆ ದೇಶದಾದ್ಯಂತ ಏಳು ರಾಜ್ಯಗಳಲ್ಲಿ ಧಾರಾಕಾರ ಮಳೆಯಿಂದ ಸುಮಾರು 21,000 ಜನರು ಪ್ರವಾಹದಿಂದ ನಿರಾಶ್ರಿತರಾಗಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications