ಅಕ್ಟೋಬರ್ 14ಕ್ಕೆ ಅತಿ ದೊಡ್ಡ ಅಂಬೇಡ್ಕರ್ ಪ್ರತಿಮೆ ಅನಾವರಣ, ವಿವರ
ಬೆಂಗಳೂರು, ಅಕ್ಟೋಬರ್ 03: ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆಯನ್ನು ಅಕ್ಟೋಬರ್ 14 ರಂದು ಅಮೆರಿಕಾದ ಮೇರಿಲ್ಯಾಂಡ್ನಲ್ಲಿ ಅನಾವರಣಗೊಳಿಸಲು ಸಿದ್ಧವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
19 ಅಡಿ ಎತ್ತರದ ಈ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ನಾಮಕರಣ ಮಾಡಲಾಗಿದೆ. ಇದನ್ನು ಹೆಸರಾಂತ ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ನಿರ್ಮಿಸಿದ್ದಾರೆ, ಅವರು ಗುಜರಾತ್ನ ಅಹಮದಾಬಾದ್ನಲ್ಲಿ ಸ್ಥಾಪಿಸಲಾದ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ಸಹ ನಿರ್ಮಿಸಿದವರಾಗಿದ್ದಾರೆ.

ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆಯು ಮೇರಿಲ್ಯಾಂಡ್ನ ಅಕೋಕೀಕ್ ನಗರದಲ್ಲಿ 13 ಎಕರೆ ಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದ (ಎಐಸಿ) ಭಾಗವಾಗಿದೆ. "ಇದು ಭಾರತದ ಹೊರಗೆ ನಿರ್ಮಾಣವಾಗಿರುವ ಬಾಬಾಸಾಹೇಬರ ಅತಿದೊಡ್ಡ ಪ್ರತಿಮೆಯಾಗಿದೆ. ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಿರ್ಮಿಸಲಾಗುತ್ತಿರುವ ಅಂಬೇಡ್ಕರ್ ಸ್ಮಾರಕದ ಭಾಗವಾಗಿ ಸ್ಥಾಪಿಸಲಾಗಿದೆ" ಎಂದು ಎಐಸಿ ಹೇಳಿದೆ.
"ಅಮೆರಿಕ ಮತ್ತು ಪ್ರಪಂಚದ ಇತರ ಭಾಗಗಳಿಂದ ಅಂಬೇಡ್ಕರ್ ಚಳವಳಿಯ ಹೆಚ್ಚಿನ ಸಂಖ್ಯೆಯ ಪ್ರತಿನಿಧಿಗಳು ಮತ್ತು ಅವರ ಅನುಯಾಯಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ" ಎಂದು ಎಐಸಿ ಹೇಳಿದೆ. ಈ ಪ್ರತಿಮೆಯು ಬಾಬಾಸಾಹೇಬರ ಸಂದೇಶಗಳು ಮತ್ತು ಬೋಧನೆಗಳನ್ನು ಹರಡಲು ಮತ್ತು ಸಮಾನತೆ ಮತ್ತು ಮಾನವ ಹಕ್ಕುಗಳ ಸಂಕೇತವನ್ನು ಪ್ರದರ್ಶಿಸುವ ಉದ್ದೇಶವಾಗಿದೆ ಎಂದು ತಿಳಿಸಲಾಗಿದೆ.
ಏಪ್ರಿಲ್ 14, 1891 ರಂದು ಜನಿಸಿದ ಡಾ ಭೀಮ್ ರಾವ್ ಅಂಬೇಡ್ಕರ್ ಅವರು ಅನುಯಾಯಿಗಳಲ್ಲಿ ಬಾಬಾಸಾಹೇಬ್ ಎಂದು ಜನಪ್ರಿಯರಾಗಿದ್ದರು. ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಅವರು, ಅಖಂಡ ಭಾರತಕ್ಕೆ ಸರ್ವರಿಗೂ ಸಮಬಾಳು ಒದಗಿಸುವ ಮೂಲಕ ಸಮಸಮಾಜಕ್ಕೆ ಕಾರಣರಾಗಿದ್ದರು. ಹೀಗಾಗಿ ಅವರನ್ನು ಆಧುನಿಕ ಭಾರತದ ಪಿತಾಮಹ ಎಂದೂ ಕರೆಯಲಾಗುತ್ತದೆ.
ಸ್ವಾತಂತ್ರ್ಯದ ನಂತರ ಅವರು ಪ್ರಧಾನಿ ಜವಾಹರಲಾಲ್ ನೆಹರು ಅವರ ಮೊದಲ ಕ್ಯಾಬಿನೆಟ್ನಲ್ಲಿ ಕಾನೂನು ಮತ್ತು ನ್ಯಾಯ ಸಚಿವರಾಗಿದ್ದರು. ದಲಿತರು ಮತ್ತು ಅಸ್ಪೃಶ್ಯರ ಹಕ್ಕುಗಳಿಗಾಗಿ ಹೋರಾಡಿದ ಸಾಮಾಜಿಕ ಚಳವಳಿಗಳಲ್ಲಿ ಅಂಬೇಡ್ಕರ್ ಪ್ರಮುಖ ಪಾತ್ರ ವಹಿಸಿದ್ದರು. ಅಂಬೇಡ್ಕರ್ ಅವರು ಡಿಸೆಂಬರ್ 6, 1956 ರಂದು ನಿಧನರಾದರು. ಅಕ್ಟೋಬರ್ 14 ಅನ್ನು ಅಂಬೇಡ್ಕರ್ ವಾದಿಗಳು ಧಮ್ಮ ಚಕ್ರ ಪರಿವರ್ತನ ದಿನವನ್ನಾಗಿ ಆಚರಿಸುತ್ತಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications