ತಾಲಿಬಾನ್ ನಿಯಂತ್ರಣ: ಕಾಬೂಲ್ನಿಂದ ಭಾರತಕ್ಕೆ ಕೊನೆಯ ವಿಮಾನ ಪ್ರಯಾಣ
ಕಾಬೂಲ್, ಆಗಸ್ಟ್ 15: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ನಿಂದ 129 ಮಂದಿ ಪ್ರಯಾಣಿಕರನ್ನು ಹೊತ್ತು ಹಾರಿರುವ ಎಐ-244 ಏರ್ ಇಂಡಿಯಾ ವಿಮಾನವು ಭಾನುವಾರ ರಾತ್ರಿ ವೇಳೆ ನವದೆಹಲಿಗೆ ಆಗಮಿಸಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ತಾಲಿಬಾನ್ ಉಗ್ರರು ಹಿಡಿತ ಸಾಧಿಸಿದ ಹಿನ್ನೆಲೆ ವಾರದಲ್ಲಿ ಮೂರು ಬಾರಿ ಕಾಬೂಲ್ಗೆ ಹಾರುತ್ತಿದ್ದ ವಿಮಾನ ಸಂಚಾರವೂ ಸ್ಥಗಿತಗೊಳಿಸಲಾಗುತ್ತಿದೆ. ಭಾನುವಾರ ಬೆಳಗ್ಗೆ ಕಾಬೂಲ್ಗೆ ಹಾರಬೇಕಿದ್ದ ಒಂದು ಚಾರ್ಟರ್ ವಿಮಾನವನ್ನು ರದ್ದುಗೊಳಿಸಲಾಗಿದೆ. ಕಾಬೂಲ್ ವಾಯು ನೆಲೆಯಲ್ಲಿ ಸೇನಾ ಚಟುವಟಿಕೆಗಳು ಹೆಚ್ಚಾಗುತ್ತಿರುವುದರ ಮಧ್ಯೆ ನಾಗರಿಕ ವಿಮಾನಗಳ ಸಂಚಾರ ದೊಡ್ಡ ಸವಾಲಾಗುತ್ತದೆ.
"ಶಾಂತಿಯುತ ಮತ್ತು ತೃಪ್ತಿದಾಯಕ ರೀತಿಯಲ್ಲಿ ಅಧಿಕಾರದ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಕಾಬೂಲ್ನ ಎಲ್ಲಾ ಪ್ರವೇಶದ್ವಾರಗಳಲ್ಲೂ ತಾಲಿಬಾನ್ ಉಗ್ರರು ಸಶಸ್ತ್ರರಾಗಿ ನಿಂತಿರುತ್ತಾರೆ," ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಸೆಪ್ಟೆಂಬರ್ 11 ದಾಳಿಯ ನಂತರ 20 ವರ್ಷಗಳ ಹಿಂದೆ ಅಮೆರಿಕದಿಂದ ಕಾಬೂಲ್ನಿಂದ ಹೊರಹಾಕಲ್ಪಟ್ಟ ತಾಲಿಬಾನ್ಗಳು ಇದೀಗ ಮತ್ತೆ ರಾಜಧಾನಿಯ ಪ್ರವೇಶಿಸಿ ಹಿಡಿತ ಸಾಧಿಸಲು ಮುಂದಾಗಿದ್ದಾರೆ.

ಒಂದೇ ವಾರದಲ್ಲಿ ಅಫ್ಘಾನ್ ಮೇಲೆ ಹಿಡಿತ ಸಾಧಿಸಿದ ತಾಲಿಬಾನ್:
ಅಫ್ಘಾನಿಸ್ತಾನದ ಕೆಲವು ಪ್ರದೇಶಗಳಲ್ಲಿ ಯುಎಸ್ ವಾಯುಸೇನೆ ಬೆಂಬಲದ ಹೊರತಾಗಿಯೂ ತಾಲಿಬಾನ್ ಶಕ್ತಿಶಾಲಿ ಆಗುತ್ತಿದೆ. ಯುಎಸ್ ಸೇನಾ ಪಡೆಯನ್ನು ಹಿಂತೆಗೆದುಕೊಂಡ ಒಂದು ವಾರದಲ್ಲೇ ಇಡೀ ದೇಶದ ಚಿತ್ರಣವೇ ಬದಲಾಗಿ ಹೋಗಿದೆ. ಅಫ್ಘಾನಿಸ್ತಾನ ಸರ್ಕಾರ ಮತ್ತು ಸೇನೆಯನ್ನು ಆಕ್ರಮಿಸಿಕೊಂಡ ತಾಲಿಬಾನ್ ದೇಶದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಒಂದೇ ವಾರದಲ್ಲಿ ದೇಶದ ಪ್ರಮುಖ ಪ್ರದೇಶಗಳ ಮೇಲೆ ತಾಲಿಬಾನ್ ಆಕ್ರಮಿಸಿಕೊಂಡಿದೆ. ಕೆಲವು ಪ್ರದೇಶಗಳಲ್ಲಿ ಸೇನೆಯನ್ನು ಸೋಲಿಸಿದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಸಂಘಟನೆಗೆ ಸಹಕಾರ ನೀಡಿದ ಸರ್ಕಾರದ ಭದ್ರತಾ ಪಡೆಗಳನ್ನು ಅಲ್ಲಿಂದ ಹಿಂತಿರುಗಿ ಕಳುಹಿಸಲಾಗಿದೆ. ಆದರೆ ತಾಲಿಬಾನ್ ಬಂಡುಕೋರರಿಗೆ ಬೆದರಿ ವಾಪಸ್ಸಾದ ಅಫ್ಘಾನ್ ಸೇನೆ ಮತ್ತು ಯೋಧರ ಬಗ್ಗೆ ಹಲವು ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ. ಶತಕೋಟಿಗಳನ್ನು ಖರ್ಚು ಮಾಡಿ ಅಮೆರಿಕಾದ ಸೇನೆಗಳಿಂದ ಅಫ್ಘಾನ್ ಅದೆಂಥಾ ತರಬೇತಿಗಳನ್ನು ಪಡೆದುಕೊಂಡಿದೆ ಎಂಬು ಪ್ರಶ್ನೆ ಹುಟ್ಟಿಕೊಳ್ಳುತ್ತಿದೆ.
ಅಫ್ಘಾನ್ ರಾಜಧಾನಿ ಮೇಲೆ ತಾಲಿಬಾನ್ ನಿಯಂತ್ರಣ:
ಭಾನುವಾರ ತಾಲಿಬಾನ್ ಸಂಘಟನೆಯ ಹೋರಾಟಗಾರರು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಹೊರವಲಯವನ್ನು ಪ್ರವೇಶಿಸಿದರು. ನಾವು ಬಲವಂತವಾಗಿ ನಗರವನ್ನು ವಶಕ್ಕೆ ಪಡೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ ನಂತರ "ಶಾಂತಿಯುತ ವರ್ಗಾವಣೆ"ಗಾಗಿ ಕಾಯುತ್ತಿದ್ದೇವೆ ಎಂದು ತಾಲಿಬಾನ್ ಹೇಳಿದೆ. ಇದರ ಮಧ್ಯೆ ಯುಎಸ್ ರಾಯಭಾರ ಕಚೇರಿಯಲ್ಲಿ ಹೆಲಿಕಾಪ್ಟರ್ಗಳು ಬಂದಿಳಿಯುತ್ತಿದ್ದಂತೆ ಅನಿಶ್ಚಿತತೆಯ ಭೀತಿಯಲ್ಲಿ ಸರ್ಕಾರಿ ಕಚೇರಿಗಳಿಂದ ಸಿಬ್ಬಂದಿಯು ಓಡಿ ಹೋಗಿದ್ದಾರೆ.
ಈ ಮಧ್ಯೆ "ನಾವು ಕಾಬೂಲ್ ನಗರದ ಅಧಿಕಾರವನ್ನು ಶಾಂತಿಯುತವಾಗಿ ವರ್ಗಾಯಿಸುವ ನಿರೀಕ್ಷೆಯಲ್ಲಿದ್ದೇವೆ," ಎಂದು ತಾಲಿಬಾನ್ ವಕ್ತಾರ ಸುಶೈಲ್ ಶಾಹೀನ್ ಹೇಳಿದ್ದಾರೆ. ಕ್ವಾತಾರ್ ಪ್ರದೇಶದಲ್ಲಿ ಜಾಗತಿಕ ಸುದ್ದಿ ಸಂಸ್ಥೆ ಅಲ್-ಜಜಿರಾಗೆ ಅವರು ಪ್ರತಿಕ್ರಿಯೆ ನೀಡಿದ್ದು, ಶಾಂತಿಯುತ ಅಧಿಕಾರ ವರ್ಗಾವಣೆಗೆ ಸಂಬಂಧಿಸಿದಂತೆ ಅಫ್ಘಾನಿಸ್ತಾನ ಸರ್ಕಾರ, ಸೇನೆ ಮತ್ತು ತಾಲಿಬಾನ್ ನಡುವಿನ ಶಾಂತಿ ಮಾತುಕತೆ ಬಗ್ಗೆ ತಿಳಿಸಲು ನಿರಾಕರಿಸಿದ್ದಾರೆ. "ಯಾರೊಬ್ಬರ ಜೀವನ, ಆಸ್ತಿ ಮತ್ತು ಘನತೆಗೆ ಹಾನಿಯಾಗುವುದಿಲ್ಲ ಮತ್ತು ಕಾಬೂಲ್ ನಾಗರಿಕರ ಜೀವಕ್ಕೆ ಅಪಾಯವಿಲ್ಲ" ಎಂದು ತಾಲಿಬಾನ್ ತನ್ನ ಹಿಂದಿನ ಹೇಳಿಕೆಯಲ್ಲಿ ತಿಳಿಸಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications