ಉಗ್ರ ಹಫೀಜ್ ಗೆ ಜೀವ ಬೆದರಿಕೆ; ಪ್ರಕರಣ ಲಾಹೋರ್ ಗೆ ವರ್ಗಾವಣೆ
ಲಾಹೋರ್, ಸೆಪ್ಟೆಂಬರ್ 30: ಮುಂಬೈ ಭಯೋತ್ಪಾದನಾ ದಾಳಿ ರೂವಾರಿ ಹಫೀಜ್ ಸಯೀದ್ ನ ಮನವಿಯನ್ನು ಪುರಸ್ಕರಿಸಿ, ಆತನ ವಿರುದ್ಧದ ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣವನ್ನು ಪಂಜಾಬ್ ಪ್ರಾಂತ್ಯದ ಗುಜ್ರನ್ ವಾಲಾ ಜಿಲ್ಲೆಯ ಭಯೋತ್ಪಾದನಾ ವಿರೋಧಿ ಕೋರ್ಟ್ ನಿಂದ ಲಾಹೋರ್ ಕೋರ್ಟ್ ಗೆ ವರ್ಗಾಯಿಸಲಾಗಿದೆ. "ಜೀವ ಬೆದರಿಕೆಯಿದೆ" ಎಂಬ ಹಿನ್ನೆಲೆಯಲ್ಲಿ ಆತ ಅರ್ಜಿ ಹಾಕಿಕೊಂಡಿದ್ದ.
ಕಳೆದ ಜುಲೈ ಹದಿನೇಳನೇ ತಾರೀಕು ಹಫೀಜ್ ಸಯೀದ್ ಲಾಹೋರ್ ನಿಂದ ಗುಜ್ರನ್ ವಾಲಾಗೆ ತೆರಳುತ್ತಿದ್ದ. ಆ ವೇಳೆ ಜಾಗತಿಕ ಭಯೋತ್ಪಾದಕ ಹಣೆಪಟ್ಟಿ ಹೊತ್ತಿರುವ ಆತನನ್ನು ಉಗ್ರ ಕೃತ್ಯಗಳಿಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ ಬಂಧಿಸಲಾಗಿತ್ತು. ಆತನ ಬಂಧನಕ್ಕೆ ಮುನ್ನ ಜಮಾತ್-ಉದ್-ದವಾದ ಇತರ ಹದಿಮೂರು ಮಂದಿ ವಿರುದ್ಧ ವಿವಿಧ ಪ್ರಕರಣಗಳು ದಾಖಲಾಗಿದ್ದವು.
ಸರ್ಕಾರದ ಕಾನೂನು ಅಧಿಕಾರಿ ಅಧಿಕಾರಿಗಳು ಯಾವುದೇ ಆಕ್ಷೇಪಣೆ ವ್ಯಕ್ತಪಡಿಸದ ಕಾರಣಕ್ಕೆ ಲಾಹೋರ್ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸರ್ದಾರ್ ಶಮೀಮ್ ಮನವಿಯನ್ನು ಪುರಸ್ಕರಿಸಿದ್ದಾರೆ. ಲಾಹೋರ್ ನಿಂದ ಎಂಬತ್ತು ಕಿ.ಮೀ. ದೂರದ ಗುಜ್ರನ್ ವಾಲಾಗೆ ಪ್ರತಿ ಸಲ ಭಯೋತ್ಪಾದನಾ ವಿರೋಧಿ ಕೋರ್ಟ್ ಗೆ ತೆರಳಬೇಕಾಗುತ್ತದೆ. ಹಫೀಜ್ ಸಯೀದ್ ಗೆ ಜೀವ ಬೆದರಿಕೆ ಇದೆ ಎಂದು ಆತನ ಪರ ವಕೀಲರು ವಾದ ಮಂಡಿಸಿದ್ದರು.

ಲಾಹೋರ್ ಭಯೋತ್ಪಾದನಾ ವಿರೋಧಿ ಕೋರ್ಟ್ ನಲ್ಲಿ ಹಫೀಜ್ ಸಯೀದ್ ನ ವಿಚಾರಣೆ ನಡೆಸಲು ನ್ಯಾ. ಶಮೀಮ್ ಒಪ್ಪಿಕೊಂಡಿದ್ದಾರೆ. ಹಫೀಜ್ ಸಯೀದ್ ಪ್ರಕರಣವನ್ನು ಇಬ್ಬರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ನಡೆಸಲಿದೆ.
ಮುಂಬೈನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ ನೂರಾ ಅರವತ್ತಾರು ಮಂದಿ ಸಾವಿಗೀಡಾಗಿದ್ದರು. ಈ ಘಟನೆಯ ಹಿಂದೆ ಜಮಾತ್- ಉದ್- ದವಾ ಸ್ಥಾಪಕ ಹಫೀಜ್ ಸಯೀದ್ ಇದ್ದ ಎಂದು ಆರೋಪಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications