ಯುರೋಪ್ ಸಂಸತ್ ಸಭಾಪತಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪತ್ರ
ನವದೆಹಲಿ, ಜನವರಿ.27: ಭಾರತದಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಯುರೋಪ್ ಸಂಸತ್ ನಲ್ಲಿ ಐದು ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಯುರೋಪಿಯನ್ ಸಂಸತ್ ಸಭಾಪತಿ ಅವರಿಗೆ ಪತ್ರ ಬರೆದಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದು ಭಾರತದ ಆಂತರಿಕ ವಿಚಾರವಾಗಿದೆ. ಸಾರ್ವಭೌಮ ದೇಶದ ಪ್ರಕ್ರಿಯೆ ವಿರುದ್ಧ ನಿರ್ಣಯ ಅಂಗೀಕರಿಸುವು ಸೂಕ್ತವಲ್ಲ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಯುರೋಪಿಯನ್ ಸಂಸತ್ ಸಭಾಪತಿ ದೇವಿಡ್ ಮಾರಿಯಾ ಸಸೋಲಿ ಅವರಿಗೆೆ ಈ ಪತ್ರವನ್ನು ಬರೆದಿದ್ದು, ಯುರೋಪಿಯನ್ ಸಂಸತ್ ನಿರ್ಣಯ ಅಂಗೀಕರಿಸಿರುವುದು ಸೂಕ್ತ ನಡೆಯಲ್ಲ ಎಂದು ಮನವರಿಕೆ ಮಾಡಿದ್ದಾರೆ.

ಪೌರತ್ವ ನೀಡುವ ಸದುದ್ದೇಶದಿಂದ ಕಾಯ್ದೆ ಜಾರಿ:
ನೆರೆ ರಾಷ್ಟ್ರಗಳಲ್ಲಿ ಧಾರ್ಮಿಕ ಕಾರಣಗಳಿಂದ ಹೊರದೂಡಲ್ಪಟ್ಟ ಅಸಹಾಯಕರಿಗೆ ಭಾರತದಲ್ಲಿ ನೆಲೆ ಕಲ್ಪಿಸುವ ಸದುದ್ದೇಶವನ್ನು ಪೌರತ್ವ ತಿದ್ದುಪಡಿ ಕಾಯ್ದೆಯು ಒಳಗೊಂಡಿದೆ ಎಂದು ಓಂ ಬಿರ್ಲಾ ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಯೂರೋಪ್ ಸಂಸತ್ತಿನ 154 ಮಂದಿ ಸಂಸದರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಾತನಾಡಿದ್ದು, ಸಿಎಎ ವಿರುದ್ಧ ಯೂರೋಪಿಯನ್ ಸಂಸತ್ತು ನಿರ್ಣಯ ಅಂಗೀಕರಿಸಿತ್ತು. ಈ ಕಾಯ್ದೆಯು ತಾರಮ್ಯದಿಂದ ಕೂಡಿದ್ದು, ಧರ್ಮ ಮತ್ತು ಜನ ವಿಭಜಕ ಕಾಯ್ದೆ ಎಂದು ಯೂರೋಪಿನ ಸೋಷಿಯಲಿಸ್ಟ್ ಆಂಡ್ ಡೆಮಾಕ್ರಟಿಕ್ಸ್ ಸದಸ್ಯರು ಯೂರೋಪಿಯನ್ ಸಂಸತ್ನಲ್ಲಿ ಆರೋಪಿಸಿದ್ದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications