ತೈವಾನ್ನಲ್ಲಿ 6.3 ತೀವ್ರತೆಯಲ್ಲಿ ಭಾರೀ ಭೂಕಂಪ
ತೈವಾನ್, ಸೆಪ್ಟೆಂಬರ್ 18: ತೈವಾನ್ ದೇಶದ ಈಶಾನ್ಯದಲ್ಲಿ ಪ್ರದೇಶದದಲ್ಲಿ ಸೋಮವಾರ 6.3 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋ ಸೈನ್ಸ್ (GFZ) ತಿಳಿಸಿದೆ. ಭೂಕಂಪವು 171 ಕಿಲೋಮೀಟರ್ (106.25 ಮೈಲುಗಳು) ಆಳದಲ್ಲಿತ್ತು ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋ ಸೈನ್ಸ್ ತಿಳಿಸಿದೆ.
ಇನ್ನು ಇತ್ತೀಚಿಗೆ ಮೊರಾಕೊದಲ್ಲಿ ಭಾರೀ ಭೂಕಂಪ ಸಂಭವಿಸಿದ್ದು, ಬರೋಬ್ಬರಿ 2,862 ಮಂದಿ ಸಾವನ್ನಪ್ಪಿದ್ದರು. 2,562ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು ಎಂದು ವರದಿಯಾಗಿತ್ತು. ಮೊರಾಕೊದ ಹೈ ಅಟ್ಲಾಸ್ ಪರ್ವತಗಳ ಕಣಿವೆಗಳಲ್ಲಿ ನೆಲೆಗೊಂಡಿರುವ ಹಳ್ಳಿಗಳು ಭೂಕಂಪದಿಂದಾಗಿ ಹೆಚ್ಚು ಹಾನಿಗೊಳಗಾಗಿವೆ. ಪರ್ವತದ ಅವಶೇಷಗಳು ಕೆಳಗಿಳಿದ ಕಾರಣ ಇಲ್ಲಿ ಅನೇಕ ಹಳ್ಳಿಗಳು ನಾಶವಾಗಿವೆ.

ಕಳೆದ ಮಂಗಳವಾರ ಮುಂಜಾನೆ ಅಂಡಮಾನ್ ಸಮುದ್ರ ಮತ್ತು ಮಣಿಪುರದ ಉಖ್ರುಲ್ನಲ್ಲಿ ಎರಡು ಪ್ರತ್ಯೇಕ ಭೂಕಂಪಗಳು ಸಂಭವಿಸಿದ್ದವು. ರಿಕ್ಟರ್ ಮಾಪಕದಲ್ಲಿ ಕ್ರಮವಾಗಿ 4.4 ಮತ್ತು 5.1ರಷ್ಟು ತೀವ್ರತೆಯನ್ನು ತೋರಿಸಿವೆ ಎಂದು ವರದಿಯಾಗಿತ್ತು.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ, ಅಂಡಮಾನ್ ಸಮುದ್ರದಲ್ಲಿ 4.4 ತೀವ್ರತೆಯ ಭೂಕಂಪವು ಸಂಭವಿಸಿತ್ತು. ಭೂಕಂಪದ ಆಳವು 93 ಕಿಲೋಮೀಟರ್ನಲ್ಲಿ ಕಂಡುಬಂದಿದೆ ಮತ್ತು ಭೂಕಂಪನದ ಕೇಂದ್ರವು ಅಂಡಮಾನ್ ಸಮುದ್ರದಲ್ಲಿದೆ ಎಂದು ಎನ್ಸಿಎಸ್ ಟ್ವೀಟ್ ಮೂಲಕ ತಿಳಿಸಿತ್ತು. ಮಾಡಿದೆ.
ಇನ್ನು ಕಳೆದ ಸೋಮವಾರ ತಡರಾತ್ರಿ ಈಶಾನ್ಯ ರಾಜ್ಯ ಮಣಿಪುರದಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಉಖ್ರುಲ್ನಲ್ಲಿ ಭೂಕಂಪದ ಕೇಂದ್ರಬಿಂದು ವರದಿಯಾಗಿತ್ತು. 20 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಎನ್ಸಿಎಸ್ ಟ್ವೀಟ್ ಮೂಲಕ ತಿಳಿಸಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications