ಕೊರೊನಾ ಕಾರಣ: ಆ ದೇಶದಲ್ಲಿ ಮಲೇರಿಯಾ ಸೋಂಕಿತರು ಡಬಲ್!
ನವದೆಹಲಿ, ಏಪ್ರಿಲ್.28: ವಿಶ್ವಕ್ಕೆ ವಿಶ್ವವೇ ಕೊರೊನಾ ವೈರಸ್ ಹೋಗಲಾಡಿಸುವ ಬಗ್ಗೆ ಚಿಂತಿಸುತ್ತಿದೆ. ಸಾಂಕ್ರಾಮಿಕ ಪಿಡುಗನ್ನು ಸೋಂಕಿತರ ಜೀವ ಹಿಂಡುತ್ತಿದ್ದರೆ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆ ಎಚ್ಚರಿಕೆ ಸಂದೇಶ ರವಾನಿಸಿದೆ.
Recommended Video
ಕೊರೊನಾ ವೈರಸ್ ಅಂತ್ಯವಾಗುವವರೆಗೂ ಸಾಂಕ್ರಾಮಿಕ ಪಿಡುಗಿನ ವಿರುದ್ಧದ ಹೋರಾಟ ನಿರಂತರವಾಗಿರುತ್ತದೆ. ಇದರ ಮಧ್ಯೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಉಳಿದಂತಾ ರೋಗಿಗಳ ಮೇಲಿಯೂ ಗಮನ ಹರಿಸುವಂತೆ ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕ ತೆಡ್ರಸ್ ಅಧನಮ್ ಗೆಬ್ಲಿಯಸೆಸ್ ತಿಳಿಸಿದ್ದಾರೆ.
ಜಗತ್ತಿನಲ್ಲಿ ಮಂಗಳವಾರದ ಅಂಕಿ-ಅಂಶಗಳ ಪ್ರಕಾರ 30,65,200 ಜನರಿಗೆ ಕೊರೊನಾ ವೈರಸ್ ಸೋಂಕು ಅಂಟಿಕೊಂಡಿದ್ದು, 2,11,597 ಜನರು ಪ್ರಾಣ ಬಿಟ್ಟಿದ್ದಾರೆ. ಕೊರೊನಾ ವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರಿಗಿಂತ ನಾಲ್ಕು ಪಟ್ಟು ಮಂದಿ ಅಂದರೆ 9,22,387 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಾಗತಿಕ ಗಡಿರೇಖೆ ಬಂದ್ ನಿಂದ ಔಷಧಿ ಕೊರತೆ:
ಸಾಂಕ್ರಾಮಿಕ ಪಿಡುಗು ಅಂತ್ಯವಾಗುವವರೆಗೂ ಕೊವಿಡ್-19 ವಿರುದ್ಧ ಹೋರಾಟವು ಮುಂದುವರಿಯುತ್ತದೆ. ಆಫ್ರಿಕಾ, ಪೂರ್ವ ಯುರೋಪ್, ಲ್ಯಾಟಿನ್ ಅಮೆರಿಕಾ ಜೊತೆಗೆ ಕೆಲವು ಏಷಿಯನ್ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಎಲ್ಲರೂ ಕೈಜೋಡಿಸಬೇಕಿದೆ ಎಂದು ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕ ತೆಡ್ರಸ್ ಅಧನಮ್ ಗೆಬ್ಲಿಯಸೆಸ್ ತಿಳಿಸಿದ್ದಾರೆ.
ಕೊರೊನಾ ವೈರಸ್ ನಿಯಂತ್ರಿಸುವು ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಗಡಿರೇಖೆಯನ್ನು ಬಂದ್ ಮಾಡಲಾಗಿದ್ದು, ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ವಿಶ್ವದ 21 ರಾಷ್ಟ್ರಗಳಲ್ಲಿ ಇತರೆ ಔಷಧಿಗಳಿಗೂ ಕೃತಕ ಅಭಾವ ಉಂಟಾಗಿದೆ.

ಮಲೇರಿಯಾ ಸೋಂಕಿತರ ಸಂಖ್ಯೆ ಡಬಲ್:
ಸಬ್ ಸಹರನ್ ಆಫ್ರಿಕಾದಲ್ಲಿ ಔಷಧಿಯ ಕೊರತೆಯಿಂದ ಮಲೇರಿಯಾ ಸೋಂಕಿತರ ಸಂಖ್ಯೆಯು ಡಬಲ್ ಆಗಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಹಿಂದುಳಿದ ರಾಷ್ಟ್ರಗಳಿಗೆ ನೆರವಾಗುವುದರ ಜೊತೆಗೆ ಉಳಿದ ದೇಶಗಳೊಂದಿಗೆ ಕೈಜೋಡಿಸಬೇಕಾದ ಅನಿವಾರ್ಯತೆಯಿದೆ ಎಂದು ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕ ತೆಡ್ರಸ್ ಅಧನಮ್ ಗೆಬ್ಲಿಯಸೆಸ್ ತಿಳಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications