ಜಾಕೀರ್ ನಾಯ್ಕ್ ಗಡಿಪಾರಿಗೆ ಮಲೇಷ್ಯಾ ನಕಾರ, ಭಾರತಕ್ಕೆ ಹಿನ್ನಡೆ
ಕೌಲಾಲಂಪುರ, ಜೂನ್ 11: ಭಾರತದಲ್ಲಿ ಉಗ್ರ ಚಟುವಟಿಕೆಗಳಿಗೆ ಬೆಂಬಲ, ಧರ್ಮ ಪ್ರಕ್ಷುಬ್ಧತೆ ನಿರ್ಮಾಣ ಮತ್ತಿತರೆ ಪ್ರಕರಣಗಳನ್ನು ಎದುರಿಸುತ್ತಿರುವ ಇಸ್ಲಾಂ ಧರ್ಮ ಪ್ರಚಾರಕ, ಪೀಸ್ ಟಿವಿ ಮುಖ್ಯಸ್ಥ ಜಾಕೀರ್ ನಾಯ್ಕ್ ಅನ್ನು ಭಾರತಕ್ಕೆ ಗಡಿ ಪಾರು ಮಾಡುವಂತೆ ಮಾಡಿದ್ದ ಮನವಿಯನ್ನು ಮಲೇಷ್ಯಾ ತಳ್ಳಿ ಹಾಕಿದೆ.
ನರೇಂದ್ರ ಮೋದಿ ಅವರು ಮೊನ್ನೆಯಷ್ಟೆ ಮಲೇಷ್ಯಾಕ್ಕೆ ಭೇಟಿ ನೀಡಿ ಪ್ರಧಾನಿ ಮಹತ್ತಿರ್ ರಹಮಾನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಜಾಕೀರ್ ನಾಯ್ಕ್ ಅನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಈ ಸಮಯ ಪ್ರಸ್ತಾಪ ವಾಗಿತ್ತು.
ಆದರೆ ಇಂದು ಹೇಳಿಕೆ ನೀಡಿರುವ ಮಲೇಷ್ಯಾ ಪ್ರಧಾನಿ, ಜಾಕೀರ್ ನಾಯ್ಕ್ ಅನ್ನು ಭಾರತಕ್ಕೆ ಗಡಿಪಾರು ಮಾಡದೇ ಇರುವ ಹಕ್ಕು ನಮಗೆ ಇದೆ ಎಂದು ಹೇಳಿದ್ದಾರೆ. ಆ ಮೂಲಕ ಝಕೀರ್ ಅನ್ನು ಭಾರತಕ್ಕೆ ಗಡಿ ಮಾಡದಿರುವ ನಿರ್ಣಯವನ್ನು ಮಲೇಷ್ಯಾ ಬದಲಾಯಿಸಿಲ್ಲ.

2016 ರಲ್ಲಿ ಜಾಕೀರ್ ನಾಯ್ಕ್ ಭಾರತದಿಂದ ಹೊರ ಹೋಗಿದ್ದರು, ಅವರ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ, ಅವರು ಮತ್ತೆ ಭಾರತದೇ ಇರುವ ಬಗ್ಗೆ ನಿಶ್ಚಯಿಸಿ ಮುಸ್ಲಿಂ ದೇಶವಾದ ಮಲೇಷ್ಯಾಕ್ಕೆ ಹೋದರು, ಸರ್ಕಾರವು ಅವರಿಗೆ ವಾಸ್ತವ್ಯವನ್ನು ನೀಡಿದೆ.
ಜಾಕೀರ್ ನಾಯ್ಕ್ ಅನ್ನು ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಈ ಹಿಂದೆಯೇ ಭಾರತ ಸರ್ಕಾರವು ಮಲೇಷ್ಯಾಕ್ಕೆ ಮನವಿ ಮಾಡಿತ್ತು. ಮೊನ್ನೆಯಷ್ಟೆ ಮೋದಿ ಅವರು ಮಲೇಷ್ಯಾಕ್ಕೆ ಭೇಟಿ ನೀಡಿದ ಸಂದರ್ಭ ಜಾಕೀರ್ ನಾಯ್ಕ್ ಭಾರತಕ್ಕೆ ಹಸ್ತಾಂತರ ಆಗಲಿದ್ದಾರೆ ಎಂದೇ ನಂಬಲಾಗಿತ್ತು, ಆದರೆ ಹಾಗೆ ಆಗಿಲ್ಲ. ಇದು ಭಾರತಕ್ಕೆ ಆದ ಸಣ್ಣ ಹಿನ್ನಡೆ ಎಂದೇ ಭಾವಿಸಲಾಗುತ್ತಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications