ಕ್ಷಿಪಣಿ ದಾಳಿಗೆ ಮಲೇಷ್ಯಾ ವಿಮಾನ ಪತನ, 295 ಸಾವು
ಬೆಂಗಳೂರು, ಜು. 18 : ಮಲೇಷ್ಯಾ ಏರ್ ಲೈನ್ಸ್ ಕಂಪನಿಗೆ ಸೇರಿದ ವಿಮಾನ ರಷ್ಯಾ ಉಕ್ರೇನ್ ಗಡಿಯಲ್ಲಿ ಪತನಗೊಂಡಿದೆ. ಉಕ್ರೇನ್ ಬಂಡುಕೋರರು ಕ್ಷಿಪಣಿ ಮೂಲಕ ವಿಮಾನ ಹೊಡೆದುರುಳಿಸಿದ್ದು, ವಿಮಾನದಲ್ಲಿದ್ದ 280 ಪ್ರಯಾಣಿಕರು ಮತ್ತು 15 ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಪತನಗೊಂಡ ವಿಮಾನ ಅಮ್ ಸ್ಟರ್ ಡ್ಯಾಂನಿಂದ ಮಲೇಷ್ಯಾದ ಕೌಲಾಲಂಪುರಕ್ಕೆ ತೆರಳುತ್ತಿತ್ತು. ಬೋಯಿಂಗ್ 777 ವಿಮಾನದಲ್ಲಿದ್ದ 280 ಪ್ರಯಾಣಿಕರು ಮತ್ತು 15 ಸಿಬ್ಬಂದಿ ಸಾವನ್ನಪ್ಪಿದ್ದು, 100 ಶವಗಳು ದೊರಕಿವೆ.

ಕಳೆದ ಕೆಲವು ತಿಂಗಳ ಹಿಂದೆ ಮಲೇಷ್ಯಾ ಏರ್ ಲೈನ್ಸ್ ಕಂಪನಿಗೆ ಸೇರಿದ ಎಂ.ಎಚ್.370 ವಿಮಾನ ನಿಗೂಢವಾಗಿ ನಾಪತ್ತೆಯಾಗಿತ್ತು. ಸದ್ಯ ಇದೇ ಕಂಪನಿಗೆ ಸೇರಿದ ಬೋಯಿಂಗ್ 777 ವಿಮಾನವನ್ನು ಬಂಡುಕೋರರು ಹೊಡದುರುಳಿಸಿದ್ದಾರೆ. [ಎಂಎಚ್370 ಕಣ್ಮರೆ ಪ್ರಕರಣ ದುರಂತ ಅಂತ್ಯ]
ಉಕ್ರೇನ್ ಮತ್ತು ರಷ್ಯಾ ಗಡಿ ಭಾಗದ ಡೋನೆಟ್ಕ್ ಎಂಬಲ್ಲಿ ವಿಮಾನ ಪತನಗೊಂಡಿದೆ. ವಿಮಾನ ಜನ ವಸತಿ ಪ್ರದೇಶದಲ್ಲಿ ಪತನಗೊಂಡಿಲ್ಲ. ಆದ್ದರಿಂದ ಯಾವುದೇ ಹಾನಿ ಉಂಟಾಗಿಲ್ಲ. ಯದ್ಧಪೀಡಿತ ಪ್ರದೇಶದಲ್ಲಿ ಬಂಡುಕೋರರು ನೆಲದಿಂದ ಕ್ಷಿಪಣಿ ದಾಳಿ ನಡೆಸಿ ವಿಮಾನವನ್ನು ಹೊಡೆದುರುಳಿಸಿದ್ದಾರೆ.
ಕೃತ್ಯ ಒಪ್ಪಿಕೊಂಡ ಬಂಡುಕೋರರು : ರಷ್ಯಾದ ಬಂಡುಕೋರ ನಾಯಕರು ವಿಮಾನವನ್ನು ಹೊಡೆದುರುಳಿಸಿದ್ದು ನಾವೇ ಎಂದು ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ. ನಮ್ಮ ವಾಯು ಪ್ರದೇಶದಲ್ಲಿ ಹಾರಾಟ ನಡೆಸಬಾರದು ಎಂದು ಎಚ್ಚರಿಕೆ ನೀಡಿದ್ದೆವು. ಅದನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಅದನ್ನು ಹೊಡೆದುರುಳಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ತನಿಖೆಗೆ ಆದೇಶ : ವಿಮಾನವನ್ನು ಕ್ಷಿಪಣಿ ಮೂಲಕ ಹೊಡೆದುರುಳಿಸಲಾಗಿದೆ ಎಂದು ಹೇಳಿರುವ ಉಕ್ರೇನ್ ಅಧ್ಯಕ್ಷ ಪೊರೋಶೇಂಕೊ ಹೇಳಿದ್ಧು ಈ ಕುರಿತು ಅಂತರಾಷ್ಟ್ರೀಯಮಟ್ಟದ ತನಿಖೆಯಾಗಬೇಕೆಂದು ಹೇಳಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications