ಕ್ಷಿಪಣಿ ದಾಳಿಗೆ ಮಲೇಷ್ಯಾ ವಿಮಾನ ಪತನ, 295 ಸಾವು
ಬೆಂಗಳೂರು, ಜು. 18 : ಮಲೇಷ್ಯಾ ಏರ್ ಲೈನ್ಸ್ ಕಂಪನಿಗೆ ಸೇರಿದ ವಿಮಾನ ರಷ್ಯಾ ಉಕ್ರೇನ್ ಗಡಿಯಲ್ಲಿ ಪತನಗೊಂಡಿದೆ. ಉಕ್ರೇನ್ ಬಂಡುಕೋರರು ಕ್ಷಿಪಣಿ ಮೂಲಕ ವಿಮಾನ ಹೊಡೆದುರುಳಿಸಿದ್ದು, ವಿಮಾನದಲ್ಲಿದ್ದ 280 ಪ್ರಯಾಣಿಕರು ಮತ್ತು 15 ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಪತನಗೊಂಡ ವಿಮಾನ ಅಮ್ ಸ್ಟರ್ ಡ್ಯಾಂನಿಂದ ಮಲೇಷ್ಯಾದ ಕೌಲಾಲಂಪುರಕ್ಕೆ ತೆರಳುತ್ತಿತ್ತು. ಬೋಯಿಂಗ್ 777 ವಿಮಾನದಲ್ಲಿದ್ದ 280 ಪ್ರಯಾಣಿಕರು ಮತ್ತು 15 ಸಿಬ್ಬಂದಿ ಸಾವನ್ನಪ್ಪಿದ್ದು, 100 ಶವಗಳು ದೊರಕಿವೆ.

ಕಳೆದ ಕೆಲವು ತಿಂಗಳ ಹಿಂದೆ ಮಲೇಷ್ಯಾ ಏರ್ ಲೈನ್ಸ್ ಕಂಪನಿಗೆ ಸೇರಿದ ಎಂ.ಎಚ್.370 ವಿಮಾನ ನಿಗೂಢವಾಗಿ ನಾಪತ್ತೆಯಾಗಿತ್ತು. ಸದ್ಯ ಇದೇ ಕಂಪನಿಗೆ ಸೇರಿದ ಬೋಯಿಂಗ್ 777 ವಿಮಾನವನ್ನು ಬಂಡುಕೋರರು ಹೊಡದುರುಳಿಸಿದ್ದಾರೆ. [ಎಂಎಚ್370 ಕಣ್ಮರೆ ಪ್ರಕರಣ ದುರಂತ ಅಂತ್ಯ]
ಉಕ್ರೇನ್ ಮತ್ತು ರಷ್ಯಾ ಗಡಿ ಭಾಗದ ಡೋನೆಟ್ಕ್ ಎಂಬಲ್ಲಿ ವಿಮಾನ ಪತನಗೊಂಡಿದೆ. ವಿಮಾನ ಜನ ವಸತಿ ಪ್ರದೇಶದಲ್ಲಿ ಪತನಗೊಂಡಿಲ್ಲ. ಆದ್ದರಿಂದ ಯಾವುದೇ ಹಾನಿ ಉಂಟಾಗಿಲ್ಲ. ಯದ್ಧಪೀಡಿತ ಪ್ರದೇಶದಲ್ಲಿ ಬಂಡುಕೋರರು ನೆಲದಿಂದ ಕ್ಷಿಪಣಿ ದಾಳಿ ನಡೆಸಿ ವಿಮಾನವನ್ನು ಹೊಡೆದುರುಳಿಸಿದ್ದಾರೆ.
ಕೃತ್ಯ ಒಪ್ಪಿಕೊಂಡ ಬಂಡುಕೋರರು : ರಷ್ಯಾದ ಬಂಡುಕೋರ ನಾಯಕರು ವಿಮಾನವನ್ನು ಹೊಡೆದುರುಳಿಸಿದ್ದು ನಾವೇ ಎಂದು ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ. ನಮ್ಮ ವಾಯು ಪ್ರದೇಶದಲ್ಲಿ ಹಾರಾಟ ನಡೆಸಬಾರದು ಎಂದು ಎಚ್ಚರಿಕೆ ನೀಡಿದ್ದೆವು. ಅದನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಅದನ್ನು ಹೊಡೆದುರುಳಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ತನಿಖೆಗೆ ಆದೇಶ : ವಿಮಾನವನ್ನು ಕ್ಷಿಪಣಿ ಮೂಲಕ ಹೊಡೆದುರುಳಿಸಲಾಗಿದೆ ಎಂದು ಹೇಳಿರುವ ಉಕ್ರೇನ್ ಅಧ್ಯಕ್ಷ ಪೊರೋಶೇಂಕೊ ಹೇಳಿದ್ಧು ಈ ಕುರಿತು ಅಂತರಾಷ್ಟ್ರೀಯಮಟ್ಟದ ತನಿಖೆಯಾಗಬೇಕೆಂದು ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications