Mohamed Muizzu: ಬೆಂಗಳೂರಿಗೆ ಬರಲಿದ್ದಾರೆ ಮಾಲ್ಡೀವ್ಸ್ ಅಧ್ಯಕ್ಷ, ಯಾಕೆ?
ಭಾರತದ ಬಗ್ಗೆ ಕೆಂಡಕಾರುತ್ತಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು (Mohamed Muizzu) ಇದೀಗ ಭಾರತಕ್ಕೆ ಮೂರು ದಿನ ಪ್ರವಾಸ ಕೈಗೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ದೇಶದ ಪ್ರಮುಖ ಮೂರು ನಗರಗಳಿಗೆ ಮುಯಿಝು ಭೇಟಿ ನೀಡಲಿದ್ದು, ಇದರಲ್ಲಿ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರು ಕೂಡ ಇದೆ ಎನ್ನಲಾಗಿದೆ.
ಈ ಹಿಂದೆ ಪ್ರಧಾನಿ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಮೊಹಮ್ಮದ್ ಮುಯಿಝು ಅತಿಥಿಯಾಗಿ ಬಂದಿದ್ದರು. ಈಗ ಮತ್ತೆ ಅವರು ಅಧಿಕೃತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ದೆಹಲಿ, ಮುಂಬೈ ಹಾಗೂ ಬೆಂಗಳೂರಿಗೆ ಅವರು ಭೇಟಿ ನೀಡಲಿದ್ದು, ಮಹತ್ವದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರಂತೆ.

ಮೂಲಗಳ ಪ್ರಕಾರ ಅವರು ಅಕ್ಟೋಬರ್ 7ರಿಂದ 10ರವರೆಗೆ ಭಾರತದಲ್ಲೇ ಇರಲಿದ್ದು ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಚೀನಾ ಪರ ಒಲವು ಹೊಂದಿರುವ ಮುಯಿಝು ಅವರು ಮಾಲ್ಡೀವ್ಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಾದ ನಂತರ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಸಂಬಂಧಗಳು ತೀವ್ರ ಒತ್ತಡಕ್ಕೆ ಒಳಗಾಯಿತು. ಭಾರತದ ಬಗ್ಗೆ ಮುಯಿಝು ವಿರೋಧದ ಮಾತುಗಳನ್ನಾಡಿದ್ದರು.
ಭಾರತ ವಿರೋಧಿ ನಿಲುವು ಪ್ರದರ್ಶಿಸಿದ್ದ ಮುಯಿಝು ಮಾಲ್ಡೀವ್ಸ್ನಲ್ಲಿ ಗೆದ್ದ ನಂತರ ಅಲ್ಲಿದ್ದ ಭಾರತೀಯ ಯೋಧರಿಗೆ ಮಾಲ್ಡೀವ್ಸ್ ತೊರೆಯುವಂತೆ ಡೆಡ್ಲೈನ್ ನೀಡಿದ್ದರು. ಭಾರತ ವಿರೋಧಿ ಚೀನಾ ಜೊತೆಗೆ ಮುಯಿಝು ಸ್ನೇಹ ಬೆಸೆದುಕೊಂಡು ಕೆಂಗಣ್ಣಿಗೆ ಗುರಿಯಾಗಿದ್ದರು.

ಭಾರತದ ಬಗ್ಗೆ ಅಗೌರವ ತೋರಿದ ಕಾರಣ ಭಾರತೀಯರ ಕೆಂಗಣ್ಣಿಗೆ ಮುಯಿಜು ಕೂಡ ಗುರಿಯಾಗಿದ್ದರು. ಬಳಿಕ ಪ್ರಧಾನಿ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿ ಗಮನ ಸೆಳೆದಿದ್ದರು. ಇದಾದ ಕೆಲವೇ ದಿನಗಳಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಎನ್ನುವ ಅಭಿಯಾನ ಎಲ್ಲೆಡೆ ಜೋರಾಗಿ ಸದ್ದು ಮಾಡಿತು.
ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಹೋಗಬೇಕಿದ್ದ ಪ್ರವಾಸಗಳನ್ನು ರದ್ದು ಮಾಡುವ ಮೂಲಕ ಮುಯಿಝುಗೆ ಭಾರತೀಯರು ತಕ್ಕ ಉತ್ತರ ನೀಡಿದ್ದರು. ಇದರಿಂದಾಗಿ ಜಾಗತಿಕವಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮ ನೆಲಕಚ್ಚುವ ಹಂತಕ್ಕೆ ತಲುಪಿತ್ತು. ಬಳಿಕ ಮುಯಿಝು ಸೈಲೆಂಟ್ ಆಗಿದ್ದರು.
ಭಾರತದ ಜೊತೆಗಿನ ಮಾಲ್ಡೀವ್ಸ್ ಸಂಬಂಧ ಬಗ್ಗೆ ಯೂಟರ್ನ್ ಹೊಡೆದಿದ್ದ ಮೊಹಮ್ಮದ್ ಮುಯಿಝು, ಮಾಲ್ಡೀವ್ಸ್ ನೆಲದಲ್ಲಿ ವಿದೇಶಿ ಸೇನೆ ಇರುವುದು ನಮ್ಮಲ್ಲೇ ಒಂದು ಗಂಭೀರ ಸಮಸ್ಯೆಯಾಗಿತ್ತು. ಆದರೆ ಭಾರತ ಮಾಲ್ಡೀವ್ಸ್ನಿಂದ ಹೊರಹೋಗಬೇಕು ಎನ್ನುವ ಉದ್ದೇಶವನ್ನು ನಾವು ಹೊಂದಿಲ್ಲ ಎಂದು ಮುಯಿಝು ಹೇಳಿದ್ದಾಗಿ ವರದಿಯಾಗಿತ್ತು.
ಇದಾದ ಕೆಲವೇ ತಿಂಗಳಲ್ಲಿ ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರಕ್ಕೇರಿದರು. ಈ ಪ್ರಮಾಣವಚನದ ಕಾರ್ಯಕ್ರಮಕ್ಕೆ ಮುಯಿಝು ಅವರನ್ನು ಆಹ್ವಾನಿಸಲಾಗಿತ್ತು. ಅದರಂತೆ ನವದೆಹಲಿಗೆ ಮುಯಿಝು ಆಗಮಿಸಿ, ಮೋದಿ ಅವರ ಪ್ರಮಾಣವಚನದಲ್ಲಿ ಭಾಗಿಯಾಗಿದ್ದರು. ಇದೀಗ ಎರಡನೇ ಬಾರಿ ಭಾರತಕ್ಕೆ ಬರುತ್ತಿದ್ದಾರೆ.
ಬೆಂಗಳೂರು ಜಾಗತಿಕವಾಗಿ ಗುರುತಿಸಿಕೊಂಡಿರುವ ನಗರ ಆಗಿರುವುದರಿಂದ ಮಾಲ್ಡೀವ್ಸ್ ಅಧ್ಯಕ್ಷ ಇಲ್ಲಿಗೂ ಭೇಟಿ ನೀಡುತ್ತಿರುವುದು ಕುತೂಹಲ ಮೂಡಿಸಿದೆ. ಉದ್ಯಾನನಗರಿಯನ್ನು ಸುತ್ತಿ, ಅವರು ಕೆಲವು ಮಹತ್ವದ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications