ಮ್ಯಾಚ್ ನೋಡೋಕೆ ನಾನು ಬಂದೇ ಬರ್ತೀನಿ: ವಿಜಯ್ ಮಲ್ಯ
ಭಾರತ- ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯವನ್ನು ನೋಡಲು ಕ್ರೀಡಾಂಗಣಕ್ಕೆ ತೆರಳಿದ್ದನ್ನು ಮಾಧ್ಯಮಗಳು ಹೆಚ್ಚಾಗಿ ಬಿಂಬಿಸಿದ್ದಕ್ಕೆ ವಿಜಯ್ ಮಲ್ಯ ಉತ್ತರಿಸಿದ್ದು, ಚಾಂಪಿಯನ್ಸ್ ಟ್ರೋಫಿಯ ಭಾರತದ ಪಂದ್ಯಗಳಿಗೆ ಹೋಗುವುದಾಗಿ
ಲಂಡನ್, ಜೂನ್ 6: ''ಮೊನ್ನೆ ಭಾರತ- ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಪಂದ್ಯವನ್ನು ನೋಡಲು ಬಂದಿದ್ದೆ. ನಾನು ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿ. ಭಾರತದ ಪಂದ್ಯಗಳನ್ನು ನೋಡಲು, ನಮ್ಮ ತಂಡವನ್ನು ಹುರಿದುಂಬಿಸಲು ನಾನು ಬಂದೇ ಬರುತ್ತೇನೆ'' - ಇವು ಮದ್ಯದ ದೊರೆ ವಿಜಯ್ ಮಲ್ಯ ಅವರ ಮಾತು.
ಕಾರಣ: ಭಾರತ- ಪಾಕಿಸ್ತಾನ ಪಂದ್ಯದ ವೇಳೆ ಅವರು ಗ್ಯಾಲರಿಯಲ್ಲಿ ಕೂತಿದ್ದು, ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಜತೆ ಮಾತನಾಡುತ್ತಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಮಾಧ್ಯಮಗಳಲ್ಲೂ ಅದು ಚರ್ಚೆಗೆ ಕಾರಣವಾಗಿದ್ದು. ಭಾರತೀಯ ಬ್ಯಾಂಕುಗಳಿಗೆ ಕೋಟ್ಯಾಂತರ ರು. ಸಾಲ ಬಾಕಿ ಉಳಿಸಿಕೊಂಡು ಲಂಡನ್ ನಲ್ಲಿ ಅವಿತಿರುವ ಮಲ್ಯ, ಅಲ್ಲಿ ರಾಜಾರೋಷವಾಗಿ ಅಡ್ಡಾಡುತ್ತಿರುವ ಬಗ್ಗೆ ಚರ್ಚೆ.

ಸ್ಪಷ್ಟನೆ: ತಮ್ಮ ಫೋಟೋಗಳು ವೈರಲ್ ಆಗಿ, ತಮ್ಮ ಬಗ್ಗೆ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಮಲ್ಯ, ''ನಾನು ಭಾರತ ತಂಡದ ಅಪ್ಪಟ ಅಭಿಮಾನಿ. ಚಾಂಪಿಯನ್ಸ್ ಟ್ರೋಫಿ ಲಂಡನ್ ನಲ್ಲೇ ನಡೆಯುತ್ತಿರುವುದರಿಂದ ಭಾರತ ತಂಡದ ಪಂದ್ಯಗಳನ್ನು ನೋಡಲು ನಾನು ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ? ಮಾಧ್ಯಮಗಳು ಇದನ್ನು ಸುಮ್ಮನೇ ಗಂಭೀರ ಸುದ್ದಿಯೆಂಬಂತೆ ಬಿತ್ತರಿಸಿವೆ'' ಎಂದಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications