ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಲ್ಯ ಪ್ರತ್ಯಕ್ಷ!
ಲಂಡನ್, ಜೂನ್ 18 : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಘೋಷಿತ ಅಪರಾಧಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಲಂಡನ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತದ ರಾಯಭಾರಿಗಳು ಪಾಲ್ಗೊಂಡಿದ್ದರು.
'ಮಂತ್ರಾಸ್ ಆಫ್ ಸಕ್ಸಸ್ : ಇಂಡಿಯಾಸ್ ಗ್ರೇಟೆಸ್ಟ್ ಸಿಇಓಸ್ ಟೆಲ್ ಹೌ ಟು ವಿನ್' ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಮಲ್ಯ ಆಗಮಿಸಿದ್ದರು. ಸುಹೇಲ್ ಸೇಥ್ ಈ ಪುಸ್ತಕವನ್ನು ಬರೆದಿದ್ದಾರೆ. [ಘೋಷಿತ ಅಪರಾಧಿ ಪಟ್ಟ, ಇಡಿ ಕೈಯಲ್ಲಿ ಮಲ್ಯ ಜುಟ್ಟ!]

ಪುಸ್ತಕ ಬಿಡುಗಡೆ ಜೊತೆಗೆ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಸಂವಾದದಲ್ಲಿ ಭಾರತದ ರಾಯಭಾರಿ ನವತೇಜ್ ಸರ್ನಾ ಅವರು ಪಾಲ್ಗೊಂಡಿದ್ದರು. ಸುಹೇಲ್ ಸೇಥ್ ಅವರು ಟ್ವಿಟರ್ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಆಹ್ವಾನವಿತ್ತು ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. [ಮದ್ಯದ ದೊರೆಗೆ ಇದೀಗ ಘೋಷಿತ ಅಪರಾಧಿ ಪಟ್ಟ]
ಮಲ್ಯ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಬಗ್ಗೆ ಭಾರತ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಆದರೆ, ಕೇಂದ್ರ ಸರ್ಕಾರ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಕಾರ್ಯಕ್ರಮಕ್ಕೆ ಮಲ್ಯ ಅವರನ್ನು ಆಮಂತ್ರಿಸಿರಲಿಲ್ಲ. ಅತಿಥಿಗಳ ಪಟ್ಟಿಯಲ್ಲಿಯೂ ಅವರು ಇರಲಿಲ್ಲ. [ಲಂಡನ್ನಿನಲ್ಲಿ ಮಗನ ಜತೆ ಮಲ್ಯ, ವಿಡಿಯೋ ಟ್ರೆಂಡಿಂಗ್]
ಸಾಲ ಮರುಪಾವತಿ ಮಾಡದೆ ವಿದೇಶಕ್ಕೆ ಹಾರಿರುವ ಮಲ್ಯ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪಗಳಿವೆ. 9000 ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣ ಅವರ ಮೇಲಿದೆ. ಕಳೆದ ವಾರ ಮುಂಬೈ ಕೋರ್ಟ್ ಮಲ್ಯ ಘೋಷಿತ ಅಪರಾಧಿ ಎಂದು ತೀರ್ಪು ನೀಡಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications