ಝೂಮ್ ಕರೆ ಮೂಲಕವೇ ಅಪರಾಧಿಗೆ ಗಲ್ಲು ಶಿಕ್ಷೆ ಪ್ರಕಟ!
ಸಿಂಗಾಪುರ, ಮೇ 20 : ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಝೂಮ್ ಅಪ್ಲಿಕೇಶನ್ ಬಳಕೆ ಹೆಚ್ಚಾಗಿದೆ. ಮಾದಕ ವಸ್ತು ಕಳ್ಳ ಸಾಗಣೆಗೆ ಸಹಾಯ ಮಾಡಿದ ಆರೋಪಿಗೆ ಝೂಮ್ ವಿಡಿಯೋ ಕರೆ ಮೂಲಕವೇ ಗಲ್ಲು ಶಿಕ್ಷೆ ಜಾರಿಗೆ ಆದೇಶ ನೀಡಲಾಗಿದೆ.
ಮಲೇಷ್ಯಾ ಮೂಲದ 37 ವರ್ಷದ ವ್ಯಕ್ತಿಗೆ ಸಿಂಗಾಪುರದಲ್ಲಿ ಗಲ್ಲು ಶಿಕ್ಷೆ ಘೋಷಣೆ ಮಾಡಲಾಗಿದೆ. ಮಾದಕ ವಸ್ತು ಕಳ್ಳ ಸಾಗಣೆಯಲ್ಲಿ ವ್ಯಕ್ತಿಯ ಪಾತ್ರ ಇರುವುದು ಖಚಿತವಾದ ಮೇಲೆ ಶಿಕ್ಷೆ ವಿಧಿಸಲಾಗಿದ್ದು, ಸಿಂಗಾಪುರದಲ್ಲಿ ಹೀಗೆ ಗಲ್ಲು ಶಿಕ್ಷೆ ಘೋಷಣೆ ಮಾಡಿದ್ದು ಇದೇ ಮೊದಲು.
ಕೊರೊನಾ ಸಂದರ್ಭದಲ್ಲಿ ಸುರಕ್ಷಿತವಾಗಿಲು ಸಿಂಗಾಪುರ ಸುಪ್ರೀಂಕೋರ್ಟ್ ಕಲಾಪಗಳನ್ನು ಝೂಮ್ ವಿಡಿಯೋ ಕಾಲಿಂಗ್ ಮೂಲಕ ನಡೆಸಲಾಗುತ್ತಿದೆ. ಮಾದಕ ವಸ್ತು ಕಳ್ಳ ಸಾಗಣೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಿ ಎಂದು ಆದೇಶ ನೀಡಿದೆ.

ಕೆಲವು ದಿನಗಳ ಹಿಂದೆ ಪ್ರಕರಣದ ವಿಚಾರಣೆ ನಡೆದಾಗ ಆರೋಪಿ ಝೂಮ್ ಕರೆಯ ಮೂಲಕವೇ ವಿಚಾರಣೆ ನಡೆಸಿದ್ದ. ತೀರ್ಪು ಪ್ರಕಟಿಸುವ ದಿನ ಆರೋಪಿಗೆ ನ್ಯಾಯಾಧೀಶರ ಆದೇಶವನ್ನು ಮಾತ್ರ ಕೇಳಲು ಅವಕಾಶ ನೀಡಲಾಗಿತ್ತು.
ಏಪ್ರಿಲ್ ಮೊದಲ ವಾರದಿಂದ ಜೂನ್ 1ರ ತನಕ ಸಿಂಗಾಪುರದಲ್ಲಿ ಎಲ್ಲಾ ನ್ಯಾಯಾಲಯಗಳ ಕಲಾಪವನ್ನು ಮುಂದೂಡಲಾಗಿದೆ. ಒಂದು ವೇಳೆ ತುಂಬಾ ಮುಖ್ಯವಾದ ಪ್ರಕರಣವಾದರೆ ಮಾತ್ರ ಝೂಮ್ ಕರೆ ಮೂಲಕ ಅದರ ವಿಚಾರಣೆ ನಡೆಸಲಾಗುತ್ತದೆ.
ಮಾದಕ ವಸ್ತುಗಳ ಕಳ್ಳ ಸಾಗಣೆ ವಿಚಾರದಲ್ಲಿ ಸಿಂಗಾಪುರದಲ್ಲಿ ಕಟ್ಟು ನಿಟ್ಟಿನ ಕ್ರಮವಿದೆ. ಇಂತಹ ಆರೋಪ ಸಾಬೀತಾದ ವಿದೇಶಿಯರು ಸೇರಿದಂತೆ ನೂರಾರು ಜನರನ್ನು ಇದುವರೆಗೂ ಗಲ್ಲಿಗೆ ಹಾಕಲಾಗಿದೆ. ಈಗ ಝೂಮ್ ಕಾಲ್ ಮೂಲಕವೇ ಅಪರಾಧಿಗೆ ಗಲ್ಲು ಶಿಕ್ಷೆ ಪ್ರಕಟವಾಗಿದೆ.
ಕೆಲವು ದಿನಗಳ ಹಿಂದೆ ನೈಜೀರಿಯಾದಲ್ಲಿಯೂ ಝೂಮ್ ಕಾಲ್ ಮೂಲಕ ಮರಣದಂಡನೆ ಶಿಕ್ಷೆ ಪ್ರಕಟ ಮಾಡಲಾಗಿತ್ತು. ಆಗ ಮಾನವ ಹಕ್ಕುಗಳ ಆರೋಗ ಈ ಕುರಿತು ಆಕ್ಷೇಪಣೆಯನ್ನು ಎತ್ತಿತ್ತು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications