ಪತ್ನಿಯ ಬುರ್ಖಾ ತೊಟ್ಟು ವಿಮಾನ ಏರಿದ್ದ ಕೊರೊನಾ ಸೋಂಕಿತ: ಸಿಕ್ಕಿ ಬಿದ್ದಿದ್ಹೇಗೆ?
ಟೆರ್ನೆಟ್, ಜುಲೈ 22: ಕೊರೊನಾ ಸೋಂಕಿತರ ವ್ಯಕ್ತಿಯೊಬ್ಬ ಪತ್ನಿ ಬುರ್ಖಾ ತೊಟ್ಟು ಮಾರುವೇಶದಲ್ಲಿ ವಿಮಾನ ಹತ್ತಿರುವ ಘಟನೆ ನಡೆದಿದೆ.
ವಿಮಾನದಲ್ಲಿ ತೆರಳಲು ಹೆಂಡತಿಯ ಗುರುತಿನ ಚೀಟಿ ಹಾಗೂ ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಬಳಸಿದ್ದಾನೆ, ಅಲ್ಲದೆ ತನ್ನ ಮುಖವನ್ನು ಬುರ್ಖಾದಿಂದ ಮುಚ್ಚಿದ್ದ ಎಂದು ಹೇಳಲಾಗಿದೆ.
ವ್ಯಕ್ತಿ, ಹೆಂಡತಿಯ ಹೆಸರಿನಲ್ಲೇ ವಿಮಾನ ಟಿಕೆಟ್ ಖರೀದಿಸಿದ್ದಾನೆ, ಅಲ್ಲದೆ ಇದಕ್ಕಾಗಿ ಗುರುತಿನ ಚೀಟಿ, ಕೋವಿಡ್ ಪಿಸಿಆರ್ ಪರೀಕ್ಷೆಯ ವರದಿ ಮತ್ತು ಲಸಿಕಾ ಪ್ರಮಾಣಪತ್ರವನ್ನು ಕೂಡ ಬಳಸಿದ್ದಾನೆ. ಆತ ವಿಮಾನದಿಂದ ಇಳಿಯುತ್ತಿದ್ದಂತೆ ಬಂಧಿಸಲಾಗಿದೆ ಎಂದು ಟೆರ್ನೆಟ್ ಪೊಲೀಸ್ ಮುಖ್ಯಸ್ಥ ಆದಿತ್ಯ ಲಕ್ಷಿಮದ ಅವರು ತಿಳಿಸಿದ್ದಾರೆ.

ಈ ಘಟನೆ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ, ಜಕಾರ್ತಾದಿಂದ ಟೆರ್ನೆಟ್ನತ್ತ ಪ್ರಯಾಣಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ ಶೌಚಾಲಯಕ್ಕೆ ತೆರಳಿ ಬಟ್ಟೆ ಬದಲಿಸಿದ್ದನ್ನು ಗಮನಿಸಿದ್ದಾರೆ.
ಆರೋಪಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈಗ ಆತನನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇಂಡೋನೇಷ್ಯಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ, ಕಳೆದ 24 ಗಂಟೆಯಲ್ಲಿ 33,772 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 1383 ಮಂದಿ ಮೃತಪಟ್ಟಿದ್ದಾರೆ.
ಇಲ್ಲಿಯವರೆಗೆ 2.9 ಮಿಲಿಯನ್ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 77,583 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications