Manipur Video: ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಪ್ರಕರಣಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ ಅಮೆರಿಕ
ವಾಷಿಂಗ್ಟನ್, ಜುಲೈ 23: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವಿಡಿಯೊಗಳಿಗೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಧ್ವನಿಗೂಡಿಸಿರುವ ಅಮೆರಿಕ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ಸುದ್ದಿಸಂಸ್ಥೆ 'ರಾಯಿಟರ್ಸ್' ವರದಿ ಮಾಡಿದೆ.
ಯುವಕರ ಗುಂಪೊಂದು ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದೆ. ಆ ನಂತರ ಅವರ ಮೇಲೆ ಅತ್ಯಾಚಾರ ಎಸಗಿದೆ. ಈ ಘಟನೆ ಮೇ 04 ರಂದು ನಡೆದಿದೆ ಎಂದು ವರದಿಯಾಗಿದೆ. ಎರಡು ತಿಂಗಳ ಹಿಂದೆ ನಡೆದ ವಿಡಿಯೊ ಕಳೆದ ವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ದೇಶದಲ್ಲಿ ಅಷ್ಟೇ ಅಲ್ಲದೇ ಜಾಗತಿಕವಾಗಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ ಎಂದು ಮಣಿಪುರ ಸರ್ಕಾರ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರು, ಘಟನೆಯನ್ನು 'ಕ್ರೂರ' ಹಾಗೂ 'ಭಯಾನಕ' ಎಂದು ಕರೆದಿದ್ದಾರೆ. ಭೀಕರ ದಾಳಿಗೆ ತುತ್ತಾದ ಸಂತ್ರಸ್ತರ ಜೊತೆ ಅಮೆರಿಕ ಇರಲಿದೆ ಎಂದು ತಿಳಿಸಿದ್ದಾರೆ.
21 ಮತ್ತು 19 ವರ್ಷ ವಯಸ್ಸಿನ ಮಹಿಳೆಯರ ಮೇಲೆ ಈ ಲೈಂಗಿಕ ದೌರ್ಜನ್ಯ ನಡೆದಿದೆ. ಕುಕಿ ಸಮುದಾಯಕ್ಕೆ ಸೇರಿದ ಮಹಿಳೆಯರ ಮೇಲೆ ಬಹುಸಂಖ್ಯಾತ ಸಮುದಾಯದ ಮೈಟೆಯಿ ಯುವಕರು ದೌರ್ಜನ್ಯ ಎಸಗಿದ್ದಾರೆ. ತೀವ್ರವಾದ ಜನಾಂಗೀಯ ಘರ್ಷಣೆಯಲ್ಲಿ ಬಳಲುತ್ತಿರುವ ಮಣಿಪುರದಲ್ಲಿ ಇದೇ ರೀತಿಯ ಘಟಣೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ.

ಮೂವತ್ತು ಲಕ್ಷಕ್ಕೂ ಅಧಿಕ ಜನರಿರುವ ಮಣಿಪುರಕ್ಕೆ ಕೇಂದ್ರ ಸರ್ಕಾರವು ಅರೆಸೇನಾ ಮತ್ತು ಸೇನಾ ಪಡೆಗಳನ್ನು ಕಳುಹಿಸಿದೆ. ಆದರೆ, ಹಿಂಸಾಚಾರ ಕೊನೆಯಾಗದೇ ಇರುವುದು ಕಳವಳಕ್ಕೆ ಕಾರಣವಾಗಿದೆ. ಹತ್ಯೆಗಳು ನಡೆಯುತ್ತಲೇ ಇವೆ. ಮೇ 03 ರಂದು ಶುರುವಾದ ಘರ್ಷಣೆಯು ಈ ವರೆಗೆ 160 ಕ್ಕೂ ಹೆಚ್ಚು ಜನರನ್ನು ಬಲಿಪಡೆದುಕೊಂಡಿದೆ.
ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಸುಮಾರು 40,000 ಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ.
ಮಣಿಪುರ ಹಿಂಸಾಚಾರವನ್ನು ಶಾಂತಿಯುತವಾಗಿ ಕೊನೆಗೊಳಿಸಬೇಕೆಂದು ಯುನೈಟೆಡ್ ಸ್ಟೇಟ್ಸ್ ಭಾರತ ಸರ್ಕಾರವನ್ನು ಒತ್ತಾಯಿಸಿದೆ. ಎಲ್ಲಾ ಗುಂಪುಗಳು, ಮನೆಗಳು ಮತ್ತು ಪೂಜಾ ಸ್ಥಳಗಳನ್ನು ರಕ್ಷಿಸುವ ಮೂಲಕ ಮಾನವೀಯತೆ ಮೆರೆಯಬೇಕೆಂದು ಯುನೈಟೆಡ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರು ಎಂದು ತಿಳಿಸಿದ್ದಾರೆ.

ಮಣಿಪುರ ವೈರಲ್ ವಿಡಿಯೊಗೆ ಪ್ರತಿಕ್ರಿಯಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರ ಮೇಲೆ ನಡೆದ ಅಮಾನವೀಯ ದಾಳಿಯು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ. ಕಠಿಣ ಕ್ರಮದ ಭರವಸೆ ನೀಡಿದ್ದಾರೆ.
ಮಣಿಪುರ ಹಿಂಸಾಚಾರ ಹಾಗೂ ಲೈಂಗಿಕ ದೌರ್ಜನ್ಯದ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.
ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಹೇಳಿಕೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಜಂಟಿ ಪ್ರತಿಭಟನೆಯನ್ನು ಸೋಮವಾರ ಯೋಜಿಸಿವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications