ವಿವಿಧ ದೇಶಗಳಲ್ಲಿ ಭಾರಿ ಪ್ರಮಾಣದ ಭೂಕಂಪ, ಸುನಾಮಿ ಎಚ್ಚರಿಕೆ
ಸಿಡ್ನಿ, ಫೆಬ್ರವರಿ 10: ಜಗತ್ತಿನ ಅನೇಕ ದೇಶಗಳಲ್ಲಿ ಬುಧವಾರ ತೀವ್ರ ಪ್ರಮಾಣದ ಭೂಕಂಪ ಸಂಭವಿಸಿದೆ. ದಕ್ಷಿಣ ಪೆಸಿಫಿಕ್ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ಉಂಟಾಗಿದೆ. ಇದರಿಂದ ನ್ಯೂಜಿಲೆಂಡ್, ವನೌಟು, ನ್ಯೂ ಕ್ಯಾಲೆಡೋನಿಯಾ ಮತ್ತು ಈ ಭಾಗದ ಇತರೆ ದೇಶಗಳಲ್ಲಿ ಸುನಾಮಿ ಭೀತಿ ಉಂಟಾಗಿದೆ.
ಇನ್ನೊಂದೆಡೆ ಪಶ್ಚಿಮ ಇಂಡೋನೇಷ್ಯಾದಲ್ಲಿ 6.2 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಬೆಂಗ್ಕುಲು ಪ್ರಾಂತ್ಯದ ಬೆಂಗ್ಕುಲು ನಗರದ ದಕ್ಷಿಣ-ನೈಋತ್ಯ ಭಾಗದಲ್ಲಿ 10 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ. ಇಂಡೋನೇಷ್ಯಾದ ಹವಾಮಾನ, ಭೂಕಂಪಶಾಸ್ತ್ರ ಸಂಸ್ಥೆಯು ಇದುವರೆಗೂ ಸುನಾಮಿ ಎಚ್ಚರಿಕೆ ನೀಡಿಲ್ಲ. ಯಾವುದೇ ಸಾವು ನೋವು ವರದಿಯಾಗಿಲ್ಲ.
ದಕ್ಷಿಣ ಪೆಸಿಫಿಕ್ ಪ್ರದೇಶದಲ್ಲಿ ಗುರುವಾರ ಮಧ್ಯರಾತ್ರಿ ನ್ಯೂ ಕ್ಯಾಲೆಡೋನಿಯಾದ ವಾಯೊ ಪಟ್ಟಣದ ಪೂರ್ವ ಭಾಗದಿಂದ 415 ಕಿಮೀ ದೂರದಲ್ಲಿ 10 ಕಿಮೀ ಆಳದಲ್ಲಿ ಕಂಪನ ಉಂಟಾಗಿದೆ. ಮುಂದಿನ ಮೂರು ಗಂಟೆಗಳಲ್ಲಿ ಈ ಭೂಕಂಪನದಿಂದ ಭೀಕರ ಸುನಾಮಿ ಅಲೆಗಳು ಏಳುವ ಸಂಭವವಿದೆ ಎಂದು ಎನ್ಡಬ್ಲ್ಯೂಎಸ್ ಪೆಸಿಫಿಕ್ ಸುನಾಮಿ ಕೇಂದ್ರ ಎಚ್ಚರಿಕೆ ನೀಡಿದೆ.

ಆಸ್ಟ್ರೇಲಿಯಾ, ಕುಕ್ ಐಲ್ಯಾಂಡ್ಸ್ ಮತ್ತು ಅಮೆರಿಕದ ಸಮೋವಾದಲ್ಲಿನ ಭಾಗಗಳ ಸಮುದ್ರದಲ್ಲಿ ಸಣ್ಣ ಪ್ರಮಾಣದ ಅಲೆಗಳು ಎದ್ದಿವೆ. ಫಿಜಿ, ನ್ಯೂಜಿಲ್ಯಾಂಡ್ ಮತ್ತು ವನೌಟುಗಳ ಕೆಲವು ಕರಾವಳಿಗಳಲ್ಲಿ 0.3 ರಿಂದ 1 ಮೀಟರ್ ಎತ್ತರದವರೆಗೂ ಅಲೆಗಳು ಏಳುತ್ತಿವೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications