ಹೊತ್ತಿ ಉರಿಯುತ್ತಿದೆ ಅಮೇಜಾನ್ ಕಾಡು: ಭಾರಿ ಕಾಳ್ಗಿಚ್ಚು
ನವದೆಹಲಿ, ಆಗಸ್ಟ್ 23: ಜಗತ್ತಿನ ಅತಿ ದೊಡ್ಡ ಹಾಗೂ ವೈವಿಧ್ಯವನ್ನು ಒಳಗೊಂಡಿರುವ ವಿಸ್ಮಯಕಾರಿ ಅಮೇಜಾನ್ ಕಾಡಿನಲ್ಲಿ ಮುಗಿಲು ಮುಟ್ಟುವಂತಹ ಬೆಂಕಿಯ ಜ್ವಾಲೆಗಳು ಏಳುತ್ತಿವೆ. ಅಪಾರ ಹಾಗೂ ಅಪರೂಪದ ಸಸ್ಯ ಮತ್ತು ಪ್ರಾಣಿ ಜಗತ್ತಿಗೆ ಆಶ್ರಯ ನೀಡಿರುವ ಅಮೇಜಾನ್ ಅರಣ್ಯ ಹೊತ್ತಿ ಉರಿಯುತ್ತಿದೆ.
ಬ್ರೆಜಿಲ್, ಪೆರು, ಕೊಲಂಬಿಯಾ, ಫ್ರಾನ್ಸ್, ವೆನೆಜುವೆಲಾ, ಈಕ್ವೆಡಾರ್, ಗಯಾನಾ, ಬೊಲಿವಿಯಾ ಮತ್ತು ಸುರಿನೇಮ್ ದೇಶಗಳಲ್ಲಿ ಹರಡಿಕೊಂಡಿರುವ ಅಮೇಜಾನ್ ಕಾಡಿನಲ್ಲಿ ಉಂಟಾಗಿರುವ ಕಾಳ್ಗಿಚ್ಚು ಭಾರಿ ಪ್ರಮಾಣದ ಅನಾಹುತ ಸೃಷ್ಟಿಸಿದೆ. ಸಾವಿರಾರು ಎಕರೆ ಕಾಡು ಬೆಂಕಿಯ ಜ್ವಾಲೆಗೆ ಸುಟ್ಟು ಭಸ್ಮವಾಗಿವೆ. ಸೋಮವಾರ ಮಧ್ಯಾಹ್ನದ ಬಳಿಕ 1,700 ಮೈಲುವರೆಗೂ ಬೆಂಕಿಯ ಹೊಗೆ ಆವರಿಸಿದೆ.
ಅತ್ಯಂತ ದಟ್ಟ ಕಾಡನ್ನು ಹೊಂದಿರುವ ಭಾಗದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದರೂ ಈ ದೇಶಗಳ ಗಮನಕ್ಕೆ ಬಂದಿಲ್ಲ. ನಾಸಾದ ಸ್ಯಾಟಲೈಟ್ ಬೆಂಕಿಯ ರೋಷಾವೇಷದ ಚಿತ್ರವನ್ನು ಸೆರೆಹಿಡಿದಿವೆ. ಭಾರಿ ಗಾಳಿಯಿಂದಾಗಿ ಬೆಂಕಿ ವ್ಯಾಪಿಸುವ ರಭಸ ಇನ್ನಷ್ಟು ಜೋರಾಗಿದ್ದು, ಕಪ್ಪನೆಯ ದಟ್ಟ ಹೊಗೆ ಆವರಿಸಿಕೊಂಡಿದೆ. ಅದನ್ನು ನಂದಿಸುವುದಕ್ಕೆ ಹರಸಾಹಸ ಪಡಬೇಕಾಗಿದೆ.

ಅಮೇಜಾನ್ ಅರಣ್ಯದ ಅಗ್ನ ಅನಾಹುತವನ್ನು ಅಂತಾರಾಷ್ಟ್ರೀಯ ಬಿಕ್ಕಟ್ಟು ಎಂದು ಫ್ರಾನ್ಸ್ನ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಹೇಳಿದ್ದಾರೆ. ಜಿ7ರ ಶೃಂಗಸಭೆಯಲ್ಲಿ ಕಾಳ್ಗಿಚ್ಚಿನ ಸಮಸ್ಯೆಯನ್ನು ಪ್ರಮುಖವಾಗಿ ಚರ್ಚೆಗೆ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಬ್ರೆಜಿಲ್ ಈ ಪ್ರದೇಶದಲ್ಲಿ ಅಗ್ನಿ ಅನಾಹುತಗಳು ಹೆಚ್ಚುತ್ತಿರುವುದರಿಂದ ತುರ್ತು ಪರಿಸ್ಥಿತಿ ಘೋಷಿಸಿತ್ತು. ಇದುವರೆಗೂ 73,000ದಷ್ಟು ಬೆಂಕಿ ಅನಾಹುತಗಳನ್ನು ಬ್ರೆಜಿಲ್ನ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಪತ್ತೆಹಚ್ಚಿದೆ.
ಜಗತ್ತಿನ ಶೇ 20ರಷ್ಟು ಆಮ್ಲಜನಕವನ್ನು ಅಮೇಜಾನ್ ಮಳೆ ಕಾಡು ಉತ್ಪಾದಿಸುತ್ತದೆ. ಜತೆಗೆ ಶೇ 10ರಷ್ಟು ಜೀವವೈವಿಧ್ಯ ಈ ಕಾಡಿನಲ್ಲಿದೆ. ಭೂಗ್ರಹದ ಶ್ವಾಸಕೋಶ ಎಂದೇ ಹೆಸರಾಗಿರುವ ಅಮೇಜಾನ್, ಹವಾಮಾನದ ವೈಪರೀತ್ಯಗಳನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.
550 ಮಿಲಿಯನ್ ಹೆಕ್ಟೇರ್ ವಿಸ್ತೀರ್ಣದಲ್ಲಿ ಅಮೇಜಾನ್ ಕಾಡು ಹರಡಿಕೊಂಡಿದೆ. ಬೆಂಕಿಯ ರಭಸ ಕಾಡಿನ ಸುತ್ತಮುತ್ತ ವಾಸಿಸುವ ಪ್ರದೇಶಗಳ ಜನರಲ್ಲಿ ಆತಂಕ ಮೂಡಿಸಿದೆ. ಅನೇಕ ಸೆಲೆಬ್ರಿಟಿಗಳು ಅಮೇಜಾನ್ಗಾಗಿ ಪ್ರಾರ್ಥಿಸಿ ಎಂದು ಫೇಸ್ಬುಕ್, ಇನ್ಸ್ಟಾಗ್ರಾಂಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.
ಗುರುವಾರದಿಂದ ಸ್ಯಾಟಲೈಟ್ ಚಿತ್ರಗಳು ಸುಮಾರು 9,507 ಹೊಸ ಕಾಳ್ಗಿಚ್ಚುಗಳನ್ನು ಪತ್ತೆಹಚ್ಚಿವೆ. ಇವುಗಳಲ್ಲಿ ಹೆಚ್ಚಿನವು ಅಮೇಜಾನ್ ವಲಯದಲ್ಲಿ ಕಾಣಿಸಿಕೊಂಡಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications