ಢಾಕಾ ಕೆಫೆ ದಾಳಿ 'ಮಾಸ್ಟರ್ ಮೈಂಡ್' ಮರ್ಜನ್ ಬಲಿ
ಬಾಂಗ್ಲಾದೇಶದ ರಾಜಧಾನಿ ಢಾಕಾದ ಕೆಫೆಯೊಂದರ ಮೇಲೆ ದಾಳಿ ನಡೆಸಿ 29 ಮಂದಿ ಸಾವಿಗೆ ಕಾರಣನಾಗಿದ್ದ ಉಗ್ರನನ್ನು ಶುಕ್ರವಾರ ಬೆಳಗ್ಗೆ ಬಲಿ ಹಾಕಲಾಗಿದೆ.
ಢಾಕಾ, ಜನವರಿ 06: ಬಾಂಗ್ಲಾದೇಶದ ರಾಜಧಾನಿ ಢಾಕಾದ ಕೆಫೆಯೊಂದರ ಮೇಲೆ ದಾಳಿ ನಡೆಸಿ 29 ಮಂದಿ ಸಾವಿಗೆ ಕಾರಣನಾಗಿದ್ದ ಉಗ್ರನನ್ನು ಶುಕ್ರವಾರ ಬೆಳಗ್ಗೆ ಬಲಿ ಹಾಕಲಾಗಿದೆ.
ಢಾಕಾದ ಮೊಹಮ್ಮದ್ಪುರ್ ಬೇರಿಬಂದ್ ಪ್ರದೇಶದಲ್ಲಿ ಭಯೋತ್ಪಾದಕ ನಿಗ್ರಹ ಪಡೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಜಮಾತ್ ಉಲ್ ಮುಜಾಹಿದೀನ್ ಸಂಘಟನೆಯ ನುರುಲ್ ಇಸ್ಲಾಮ್ ಅಲಿಯಾಸ್ ಮರ್ಜನ್ ಹತ್ಯೆ ಮಾಡಲಾಗಿದೆ. ಮರ್ಜನ್ ಜತೆಗೆ ಮತ್ತೊಬ್ಬ ಉಗ್ರ ಕೂಡಾ ಮೃತಪಟ್ಟಿದ್ದಾನೆ ಎಂದು ಭಯೋತ್ಪಾದಕ ನಿಗ್ರಹದ ದಳದ ಮುಖ್ಯಸ್ಥ ಮೋನಿರುಲ್ ಇಸ್ಲಾಮ್ ಹೇಳಿದ್ದಾರೆ.

2016ರ ಜುಲೈ 1 ರಂದು ಢಾಕಾದ ಗುಲ್ಶನ್ ಹೋಲಿ ಆರ್ಟಿಸಾನ್ ಬೇಕರಿ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಭಾರತೀಯ ಯುವತಿ ಸೇರಿದಂತೆ 29 ಜನರು ಮೃತಪಟ್ಟಿದ್ದರು. ಐವರು ಈ ರೆಸ್ಟೋರೆಂಟ್ ಗೆ ನುಗ್ಗಿ ಬಾಂಬ್ ಎಸೆದು, ಗಾಳಿಯಲ್ಲಿ ಗುಂಡು ಹಾರಿಸಿ ಅಲ್ಲಿದ್ದ ಹಲವರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದರು.
#FLASH: Mastermind' of Bangladesh cafe siege killed in raid: police (AFP)
— ANI (@ANI_news) January 6, 2017
22 ಮಂದಿ ನಾಗರಿಕರು, ಐವರು ಗನ್ ಮ್ಯಾನ್ ಹಾಗೂ 2 ಪೊಲೀಸ್ ಸಿಬ್ಬಂದಿ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದರು, 50 ಮಂದಿ ಗಾಯಗೊಂಡಿದ್ದರು. ಈ ಕೆಫೆ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿತ್ತು. ಆದರೆ, ಬಾಂಗ್ಲಾದೇಶ ಪೊಲೀಸರು ಇದು ಜಮಾತ್ ಉಲ್ ಮುಜಾಹೀದ್ದೀನ್ ಕೃತ್ಯ ಎಂದು ವಾದಿಸಿದ್ದರು. (ಒನ್ಇಂಡಿಯಾ ಸುದ್ದಿ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications