ಢಾಕಾ ಕೆಫೆ ದಾಳಿ 'ಮಾಸ್ಟರ್ ಮೈಂಡ್' ಮರ್ಜನ್ ಬಲಿ
ಬಾಂಗ್ಲಾದೇಶದ ರಾಜಧಾನಿ ಢಾಕಾದ ಕೆಫೆಯೊಂದರ ಮೇಲೆ ದಾಳಿ ನಡೆಸಿ 29 ಮಂದಿ ಸಾವಿಗೆ ಕಾರಣನಾಗಿದ್ದ ಉಗ್ರನನ್ನು ಶುಕ್ರವಾರ ಬೆಳಗ್ಗೆ ಬಲಿ ಹಾಕಲಾಗಿದೆ.
ಢಾಕಾ, ಜನವರಿ 06: ಬಾಂಗ್ಲಾದೇಶದ ರಾಜಧಾನಿ ಢಾಕಾದ ಕೆಫೆಯೊಂದರ ಮೇಲೆ ದಾಳಿ ನಡೆಸಿ 29 ಮಂದಿ ಸಾವಿಗೆ ಕಾರಣನಾಗಿದ್ದ ಉಗ್ರನನ್ನು ಶುಕ್ರವಾರ ಬೆಳಗ್ಗೆ ಬಲಿ ಹಾಕಲಾಗಿದೆ.
ಢಾಕಾದ ಮೊಹಮ್ಮದ್ಪುರ್ ಬೇರಿಬಂದ್ ಪ್ರದೇಶದಲ್ಲಿ ಭಯೋತ್ಪಾದಕ ನಿಗ್ರಹ ಪಡೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಜಮಾತ್ ಉಲ್ ಮುಜಾಹಿದೀನ್ ಸಂಘಟನೆಯ ನುರುಲ್ ಇಸ್ಲಾಮ್ ಅಲಿಯಾಸ್ ಮರ್ಜನ್ ಹತ್ಯೆ ಮಾಡಲಾಗಿದೆ. ಮರ್ಜನ್ ಜತೆಗೆ ಮತ್ತೊಬ್ಬ ಉಗ್ರ ಕೂಡಾ ಮೃತಪಟ್ಟಿದ್ದಾನೆ ಎಂದು ಭಯೋತ್ಪಾದಕ ನಿಗ್ರಹದ ದಳದ ಮುಖ್ಯಸ್ಥ ಮೋನಿರುಲ್ ಇಸ್ಲಾಮ್ ಹೇಳಿದ್ದಾರೆ.

2016ರ ಜುಲೈ 1 ರಂದು ಢಾಕಾದ ಗುಲ್ಶನ್ ಹೋಲಿ ಆರ್ಟಿಸಾನ್ ಬೇಕರಿ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಭಾರತೀಯ ಯುವತಿ ಸೇರಿದಂತೆ 29 ಜನರು ಮೃತಪಟ್ಟಿದ್ದರು. ಐವರು ಈ ರೆಸ್ಟೋರೆಂಟ್ ಗೆ ನುಗ್ಗಿ ಬಾಂಬ್ ಎಸೆದು, ಗಾಳಿಯಲ್ಲಿ ಗುಂಡು ಹಾರಿಸಿ ಅಲ್ಲಿದ್ದ ಹಲವರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದರು.
#FLASH: Mastermind' of Bangladesh cafe siege killed in raid: police (AFP)
— ANI (@ANI_news) January 6, 2017
22 ಮಂದಿ ನಾಗರಿಕರು, ಐವರು ಗನ್ ಮ್ಯಾನ್ ಹಾಗೂ 2 ಪೊಲೀಸ್ ಸಿಬ್ಬಂದಿ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದರು, 50 ಮಂದಿ ಗಾಯಗೊಂಡಿದ್ದರು. ಈ ಕೆಫೆ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿತ್ತು. ಆದರೆ, ಬಾಂಗ್ಲಾದೇಶ ಪೊಲೀಸರು ಇದು ಜಮಾತ್ ಉಲ್ ಮುಜಾಹೀದ್ದೀನ್ ಕೃತ್ಯ ಎಂದು ವಾದಿಸಿದ್ದರು. (ಒನ್ಇಂಡಿಯಾ ಸುದ್ದಿ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications