ಡೊಮಿನಿಕಾ ನ್ಯಾಯಾಲಯದಿಂದ ಮೆಹುಲ್ ಚೋಕ್ಸಿಗೆ ವೈದ್ಯಕೀಯ ಜಾಮೀನು
ನವದೆಹಲಿ, ಜುಲೈ 12: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ವಂಚನೆ ಎಸಗಿ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಸೋಮವಾರ ವೈದ್ಯಕೀಯ ಜಾಮೀನು ಮಂಜೂರಾಗಿದೆ.
ಆಂಟಿಗುವಾಗೆ ಚಿಕಿತ್ಸೆ ಕಾರಣಕ್ಕೆ ತೆರಳಲು ಆರೋಪಿ ಚೋಕ್ಸಿಗೆ ಡೊಮಿನಿಕಾದ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
2018ರಲ್ಲಿ ಚೋಕ್ಸಿ ಭಾರತ ತೊರೆದು ಆಂಟಿಗುವಾಗೆ ಪರಾರಿಯಾಗಿದ್ದರು. ಭಾರತದಲ್ಲಿ ತಮ್ಮ ವಿರುದ್ಧ ಕಾನೂನು ಕ್ರಮ ಶುರುವಾಗುತ್ತಿದ್ದಂತೆ ಅಕ್ರಮವಾಗಿ ಡೊಮಿನಿಕಾ ನುಸುಳಿ ಅಲ್ಲಿನ ಪೊಲೀಸರಿಂದ ಬಂಧಿತರಾಗಿದ್ದರು. ಮೇ 23ರಿಂದಲೂ ಡೊಮಿನಿಕಾದಲ್ಲಿ ಬಂಧಿತರಾಗಿದ್ದರು. ಈಚೆಗಷ್ಟೆ ಉದ್ಯಮಿ ಮೆಹುಲ್ ಚೋಕ್ಸಿ ಅಕ್ರಮ ವಲಸಿಗ ಎಂದು ಡೊಮಿನಿಕಾ ಘೋಷಿಸಿತ್ತು. ಸೋಮವಾರ ವೈದ್ಯಕೀಯ ಕಾರಣಕ್ಕೆ ಜಾಮೀನು ದೊರೆತಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಜೂನ್ 10ರಂದು ಕೇಂದ್ರೀಯ ತನಿಖಾ ದಳ ಮೆಹುಲ್ ಚೋಕ್ಸಿ ಮತ್ತು ಇತರೆ 21 ಜನರ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿತ್ತು. ಭಾರತದಿಂದ ಪರಾರಿಯಾಗಿರುವ ಮೆಹುಲ್ ಚೋಕ್ಸಿ, ಸಾಕ್ಷ್ಯ ನಾಶಪಡಿಸಿರುವ ಆರೋಪವನ್ನು ಮೊದಲ ಬಾರಿ ಉಲ್ಲೇಖಿಸಿತ್ತು.
2017ರಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಸಹಾಯದಿಂದ ಚೋಕ್ಸಿ ಎಲ್ಒಯು, 58 ಎಫ್ಎಲ್ಸಿಗಳನ್ನು ಮೋಸದಿಂದ ಪಡೆದು, ಬ್ಯಾಂಕಿಗೆ 13,500 ಕೋಟಿ ರೂ ವಂಚನೆ ಎಸಗಿದ ನಂತರ ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾಗಿ ಸಿಬಿಐ ಉಲ್ಲೇಖಿಸಿತ್ತು. ಚೋಕ್ಸಿ ವಿರುದ್ಧ ಸಾಕ್ಷ್ಯನಾಶ, ವಂಚನೆ, ಪಿತೂರಿ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಆರೋಪಗಳನ್ನು ತನಿಖಾ ದಳ ಮಾಡಿತ್ತು.
ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,500 ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಮೆಹುಲ್ ಚೋಕ್ಸಿ ಹಾಗೂ ಆತನ ಸೋದರಳಿಯ ನೀರವ್ ಮೋದಿ 2018ರ ಜನವರಿ ಮೊದಲ ವಾರದಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications