ಭಾರತದ ಪೌರತ್ವ ವಾಪಸ್ ಮಾಡಿದ ಉದ್ಯಮಿ ಮೆಹುಲ್ ಚೋಕ್ಸಿ
ನವದೆಹಲಿ, ಜನವರಿ 21 : ಇಂಟರ್ ಪೋಲ್ ನಿಂದ ರೆಡ್ ಕಾರ್ನರ್ ನೋಟಿಸ್ ಪಡೆದಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿ ಅವರು ಭಾರತದ ಪೌರತ್ವವನ್ನು ತೊರೆದಿದ್ದಾರೆ. ರಾಯಭಾರ ಕಚೇರಿಗೆ ಭಾರತದ ಪಾಸ್ ಪೋರ್ಟ್ ನೀಡಿದ್ದಾರೆ. ಜೊತೆಗೆ ಜಾಲಿ ಹಾರ್ಬರ್ ಮಾರ್ಕ್ಸ್ ನಲ್ಲಿ ವಾಸವಾಗಿದ್ದೇನೆ ಎಂದು ಹೊಸ ವಿಳಾಸವನ್ನು ನೀಡಿದ್ದಾರೆ.
ಮೆಹುಲ್ ಚೋಕ್ಸಿ ಅವರ ಪಾಸ್ ಪೋರ್ಟ್ (Z-3396732) ಈಗ ಅಂಟಿಗುವಾದಲ್ಲಿರುವ ಭಾರತದ ರಾಯಭಾರ ಕಚೇರಿಯಲ್ಲಿದೆ. ಪಾಸ್ ಪೋರ್ಟ್ ಜತೆಗೆ 177 ಡಾಲರ್ ಕೂಡಾ ನೀಡಿದ್ದಾರೆ.
13 ಸಾವಿರ ಕೋಟಿ ಪಿಎನ್ ಬಿ ಹಗರಣದ ರುವಾರಿಯನ್ನು ವಶಕ್ಕೆ ಪಡೆದುಕೊಳ್ಳುವಂತೆ ಮತ್ತು ಆತನ ಚಲನವಲನಗಳ ಮೇಲೆ ನಿಯಂತ್ರಣ ಇರಿಸುವಂತೆ ಆಂಟಿಗುವಾ ಮತ್ತು ಬರ್ಬುಡಾ ಸರ್ಕಾರಕ್ಕೆ ಈಗಾಗಲೇ ಭಾರತ ಮನವಿ ಮಾಡಿದೆ. ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ(ಇಡಿ) ಹಾಗೂ ಸಿಬಿಐ ತಂಡಗಳು, ಚೋಕ್ಸಿ ವಿರುದ್ಧ ದೋಷರೋಪಣ ಪಟ್ಟಿ ಸಲ್ಲಿಸಲಾಗಿದೆ.

ಭಾರತದಿಂದ ಪರಾರಿಯಾಗಿರುವ ಚೋಕ್ಸಿ ಸದ್ಯ ವೆಸ್ಟ್ ಇಂಡೀಸ್ ನ ಆಂಟಿಗುವಾ ಹಾಗು ಬಾರ್ಬಡೋಸ್ ನಲ್ಲಿ ನೆಲೆಸಿದ್ದಾರೆ. ಜನವರಿ 15, 2018ರಂದು ಆಂಟಿಗುವಾದ ಪ್ರಜೆಯಾಗಿ ಪೌರತ್ವ ಪಡೆದುಕೊಂಡಿರುವ ಚೋಕ್ಸಿ ಅವರನ್ನು ವಿಚಾರಣೆಗಾಗಿ ಕರೆ ತರಲು ಭಾರತದ ತನಿಖಾ ಸಂಸ್ಥೆಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ.
ಕಳೆದ ಜುಲೈ ತಿಂಗಳಿನಲ್ಲಿ ಪಿಎನ್ ಬಿ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ನೀರವ್ ಮೋದಿ ಅವರಿಗೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ. ಆರ್ಥಿಕ ಅಪರಾಧಿಗಳ ಹಸ್ತಾಂತರಕ್ಕಾಗಿ ಯಾವುದೇ ಒಪ್ಪಂದವನ್ನು ಆಂಟಿಗುವಾ ಹಾಗೂ ಭಾರತ ಹೊಂದಿಲ್ಲ..
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications