ಆಂಟಿಗುವಾದಿಂದ ನಾಪತ್ತೆಯಾದ ಮೆಹುಲ್ ಚೋಕ್ಸಿ, ಕ್ಯೂಬಾಗೆ ಪಲಾಯನ ಶಂಕೆ
ಆಂಟಿಗುವಾ, ಮೇ 25: ಸಾವಿರಾರು ಕೋಟಿ ವಂಚನೆಯ ಆರೋಪವನ್ನು ಹೊತ್ತಿರುವ ಉದ್ಯಮಿ ಮೆಹುಲ್ ಚೋಕ್ಸಿ ಆಂಟಿಗುವಾ ಮತ್ತು ಬಾರ್ಬುಡ ದ್ವೀಪದಿಂದ ನಾಪತ್ತೆಯಾಗಿದ್ದಾರೆ. ಚೋಕ್ಸಿ ಪತ್ತೆಗೆ ಪೊಲೀಸರು ಹುಟುಕಾಟವನ್ನು ನಡೆಸುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಕ್ಯೂಬಾದಲ್ಲಿ ತಲೆಮರೆಸಿಕೊಂಡಿರಬಹುದು ಎಂದು ಶಂಕೆಗಳು ವ್ಯಕ್ತವಾಗಿದೆ.
ಸ್ಥಳೀಯ ಮಾಧ್ಯಮಗಳಾದ ಆಂಟಿಗುವಾನ್ಸ್ರೂಮ್ ಮಂಗಳವಾರ ಪೊಲೀಸ್ ಆಯುಕ್ತ ಅಟ್ಲೀ ರೊಡ್ನಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ. "ಭಾರತೀಯ ಉದ್ಯಮಿ ಮೆಹುಲ್ ಚೋಕ್ಸಿ ನಾಪತ್ತೆಯಾಗಿರುವ ಬಗ್ಗೆ ವದಂತಿಗಳು ಇವೆ. ಅವರು ಇರುವ ಸ್ಥಳವನ್ನು ಪೊಲೀಸರು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ" ಎಂದು ಅಟ್ಲಿ ರೋಡ್ನಿ ಹೇಳಿಕೆ ನೀಡಿದ್ದಾರೆ.
ಕೆರಿಬಿಯನ್ ದ್ವೀಪ ರಾಷ್ಟ್ರವಾಗಿರುವ ಆಂಟಿಗುವಾ ಮತ್ತು ಬಾರ್ಬುಡಾದ ನಾಗರೀಕತ್ವವನ್ನು ಮೆಹುಲ್ ಚೋಕ್ಸಿ ಹೊಂದಿದ್ದು 2018ರಿಂದ ಅಲ್ಲಿ ವಾಸವಿರುವ ಬಗ್ಗೆ ವರದಿಯಾಗಿದೆ. ಕಳೆದ ಭಾನುವಾರ(ಮೇ 23) ದ್ವೀಪದ ದಕ್ಷಿಣ ಭಾಗದಲ್ಲಿ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಬಳಿಕ ಕಾರು ಪತ್ತೆಯಾಗಿದ್ದು ಮೆಹುಲ್ ಚೋಕ್ಸಿಯ ಬಗ್ಗೆ ಮಾಹಿತಿಗಳು ಲಭ್ಯವಾಗಿಲ್ಲ ಎಂದು ವರದಿಗಳು ಹೇಳುತ್ತಿವೆ.

ಪಂಜಾಬ್ ನ್ಯಾಶನಲ್ ಬ್ಯಾಂಕ್ಗೆ 13,500 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಮೆಹುಲ್ ಚೋಕ್ಸಿ ಆರೋಪಿಯಾಗಿದ್ದಾರೆ. ಈ ಬೃಹತ್ ವಂಚನೆ ಪ್ರಕರಣದಲ್ಲಿ ನೀರವ್ ಮೋದಿ ಪ್ರಮುಖ ಆರೋಪಿಯಾಗಿದ್ದು ಸದ್ಯ ಲಂಡನ್ ಜೈಲಿನಲ್ಲಿದ್ದಾರೆ. ಭಾರತಕ್ಕೆ ಹಸ್ತಾಂತರಿಸುವ ಕಾನೂನು ಪ್ರಕ್ರಿಯೆಗಳು ನಡೆಯುತ್ತಿದೆ. 62 ವರ್ಷದ ಮೆಹುಲ್ ಚೋಕ್ಸಿ ನೀರವ್ ಮೋದಿಯ ಸೋದರಳಿಯ.
ಆಂಟಿಗುವ ಪ್ರಧಾನಮಂತ್ರಿ ಗಾಸ್ಟನ್ ಬ್ರೌನ್ ಚೋಕ್ಸಿ ನಾಪತ್ತೆಯಾಗಿರುವುದನ್ನು ಖಚಿತಪಡಿಸಿದ್ದಾರೆ. ನಾಪತ್ತೆ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದು ಪತ್ತೆಕಾರ್ಯದಲ್ಲಿ ತೊಡಗಿದ್ದಾರೆ. ಪಕ್ಕದ ರಾಷ್ಟ್ರಗಳಿಂದಲೂ ಪತ್ತೆಗೆ ಸಹಾಯ ಕೇಳಲಾಗುತ್ತದೆ ಎಂದಿದ್ದಾರೆ. ಕ್ಯೂಬಾಗೆ ಹಾರಿರುವ ಬಗ್ಗೆ ವರದಿಯಾಗಿದ್ದರೂ ಈ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ಅಲ್ಲಿನ ಆಡಳಿತ ನೀಡಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications