ವಿಡಿಯೋ: 23 ಮಂದಿ ಬಲಿ ಪಡೆದ ಮೆಕ್ಸಿಕೋ ಮೆಟ್ರೋ ದುರಂತ
ಮೆಕ್ಸಿಕೋ ನಗರ, ಮೇ 5: ಮೆಟ್ರೋ ರೈಲು ಸಾಗುತ್ತಿದ್ದ ವೇಳೆ ಮೇಲ್ಸೇತುವೆಯಿಂದ ಕುಸಿದು ಭಾರಿ ದುರಂತ ಸಂಭವಿಸಿದೆ. ಜನನಿಬಿಡ ರಸ್ತೆ ಮೇಲೆ ಮೇಲ್ಸೇತುವೆ ಕುಸಿದು ಕೆಳಗೆ ಬಿದ್ದಿದೆ. ಈ ಅಪಘಾತದಲ್ಲಿ 23ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 79 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ದೇಹಗಳನ್ನು ಹೊರ ತೆಗೆಯಲಾಗಿದೆ. ಮೇಲ್ನೋಟಕ್ಕೆ ಮೆಟ್ರೋ ಮೇಲ್ಸೇತುವೆ ಕಳಪೆ ಕಾಮಗಾರಿಯೇ ಈ ಕುಸಿತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಮೆಕ್ಸಿಕೋ ನಗರದ ಮೇಯರ್ ಕ್ಲೌಡಿಯಾ ಶೀನ್ ಬಾಮ್ ಅವರು ಘಟನಾ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ರಕ್ಷಣಾ ಕಾರ್ಯವನ್ನು ಪರಿಶೀಲಿಸುತ್ತಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕ್ರೇನ್ ಬಳಸಿ, ಲೇನ್ 12ರ ಮೆಟ್ರೋ ಬೋಗಿಯನ್ನು ಮೇಲಕ್ಕೇತ್ತಲಾಗಿದೆ.

1969ರಿಂದ ಇಲ್ಲಿ ತನಕ ಇಂಥ ದುರಂತವನ್ನು ನಮ್ಮ ನಗರ ಎದುರಿಸಿರಲಿಲ್ಲ. ಈ ಘಟನೆ ಬಗ್ಗೆ ತನಿಖೆ ನಡೆಸಲಾಗುವುದು, ಮೊದಲು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವುದು ನಮ್ಮ ಆದ್ಯತೆ ಎಂದು ಮೇಯರ್ ಕ್ಲೌಡಿಯಾ ಪ್ರತಿಕ್ರಿಯಿಸಿದ್ದಾರೆ.

ಮೆಕ್ಸಿಕೋ ನಗರದಲ್ಲಿ 12 ಲೇನ್ ಮೆಟ್ರೋ ರೈಲು ಪ್ರತಿ ನಿತ್ಯ ಸಂಚರಿಸುತ್ತಿದೆ. 1975ರ ಅಕ್ಟೋಬರ್ ತಿಂಗಳಲ್ಲಿ ಎರಡು ಮೆಟ್ರೋ ರೈಲುಗಳು ಪರಸ್ಪರ ಡಿಕ್ಕಿ ಹೊಡೆದಿದ್ದರಿಂದ 23 ಮಂದಿ ಮೃತಪಟ್ಟು, 55 ಗಾಯಗೊಂಡಿದ್ದರು. 2021ರ ಜನವರಿಯಲ್ಲಿ ಮೆಟ್ರೋ ಕಂಟ್ರೋಲ್ ಕೇಂದ್ರದಲ್ಲಿ ಬೆಂಕಿ ದುರಂತದಲ್ಲಿ ಒಬ್ಬರು ಮೃತಪಟ್ಟು, 29 ಮಂದಿ ತೀವ್ರ ಉಸಿರಾಟ ತೊಂದರೆ ಅನುಭವಿಸಿದ್ದರು.
ಕೊರೊನಾವೈರಸ್ ಸಂಕಷ್ಟದಲ್ಲಿರುವ ಮೆಕ್ಸಿಕೋದಲ್ಲಿ ಇಲ್ಲಿ ತನಕ 217,000 ಮಂದಿ ಮೃತಪಟ್ಟಿದ್ದಾರೆ. ಕೋವಿಡ್ ನಿರ್ಬಂಧಗಳ ನಡುವೆ ಸಂಚಾರ, ಸಾರಿಗೆಗೆ ಅನುಮತಿ ನೀಡಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications