ವಿಶ್ವದ ಅತಿ ತೂಕದ ವ್ಯಕ್ತಿ ಯುರಿಬಿ ಇನ್ನಿಲ್ಲ
ಮೆಕ್ಸಿಕೋ, ಮೇ.28: ವಿಶ್ವದ ಅತಿ ತೂಕದ ವ್ಯಕ್ತಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು ದಾಖಲೆ ನಿರ್ಮಿಸಿದ್ದ ಮ್ಯಾನ್ಯುಯಲ್ ಯುರಿಬಿ ಸೋಮವಾರ ನಿಧನ ಹೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಸ್ಥೂಲಕಾಯದಿಂದ ಹೃದಯಬಡಿತ ಸಮಸ್ಯೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮ್ಯಾನ್ಯುಯಲ್. ಮೇ 2ರಂದು ಆಸ್ಪತ್ರೆಗೆ ದಾಖಲಾಗಿದ್ದರು.ಮೆಕ್ಸಿಕೋದ 'ಹೆವಿವೇಟ್ 'ಮ್ಯಾನ್ಯುಯಲ್ ಅವರು ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿ ಪ್ರಕಟಿಸಿದ್ದಾರೆ. ಆದರೆ, ಮ್ಯಾನ್ಯುಯಲ್ ಯುರಿಬಿ ಅವರ ಸಾವಿಗೆ ನಿಖರ ಕಾರಣವನ್ನು ತಿಳಿಸಿಲ್ಲ. ಸುಮಾರು 560 ಕೆ.ಜಿ. ತೂಕವಿದ್ದ ಅವರು 2006ರಲ್ಲಿ ಗಿನ್ನೆಸ್ ದಾಖಲೆ ಸ್ಥಾಪಿಸಿದ್ದರು.
ಅನಾರೋಗ್ಯದ ಕಾರಣ ವೈದ್ಯರ ಸಲಹೆ ಬಳಿಕ ಯುರಿಬಿ ಅವರು ತಮ್ಮ ದೇಹದ ತೂಕವನ್ನು 394 ಕೆ.ಜಿಗೆ ಇಳಿಸಿಕೊಂಡರಾದರೂ ಸ್ವತಂತ್ರವಾಗಿ ಎದ್ದು ಓಡಾಡುವಂತಹ ಪರಿಸ್ಥಿತಿಯಲ್ಲಿ ಅವರಿರಲಿಲ್ಲ. ಭಾರಿ ತೂಕವಿದ್ದ ಮ್ಯಾನ್ಯುಯಲ್ ಅವರು ಹಾಸಿಗೆಯಿಂದ ಏಳುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಅವರನ್ನು ಕ್ರೇನ್ ಸಹಾಯದಿಂದ ಆಸ್ಪತ್ರೆ ಕೊಠಡಿಗೆ ಸಾಗಿಸಲಾಗಿತ್ತು ಎಂದು ತಿಳಿದು ಬಂದಿದೆ.

ಮೇ 2ರಂದು ಹೃದಯಬಡಿತದಲ್ಲಿ ಸಮಸ್ಯೆ ಕಾಣಿಸಿಕೊಂಡಾಗ ಕ್ರೇನ್ ಮುಖಾಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. 2002ರಿಂದ ಅವರ ಆರೋಗ್ಯ ಸರಿ ಇರಲಿಲ್ಲ, ಅನೇಕ ಬಾರಿ ಚಿಕಿತ್ಸೆ ಪಡೆದುಕೊಂಡರೂ ದೇಹಾರೋಗ್ಯ ಸುಧಾರಣೆ ಕಂಡಿರಲಿಲ್ಲ. ಯುರಿಬಿ ಅವರ ತಾಯಿ ಹಾಗೂ ಗೆಳೆಯರು ಅತನ ಶುಶ್ರೂಷೆ ಮಾಡುತ್ತಿದ್ದರು, ಆತನ ಸ್ನಾನ, ಪಾನ ಎಲ್ಲವನ್ನು ನೋಡಿಕೊಳ್ಳುತ್ತಿದ್ದರು.
2008ರಲ್ಲಿ 48 ವರ್ಷ ವಯಸ್ಸಿನ ಯುರಿಬಿಗೆ ಮದುವೆ ಯೋಗವೂ ಕೂಡಿ ಬಂದಿತ್ತು. ಕ್ಲಾಡಿಯಾ ಸೊಲಿಸ್ ಎಂಬುವರನ್ನು ಯುರಿಬಿ ಮದುವೆಯಾಗಿದ್ದರು. ಅದರೆ, ದೇಹ ತೂಕ ಇಳಿಸಿಕೊಳ್ಳದ ಕಾರಣ ದಾಂಪತ್ಯ ಜೀವನವಿರಲಿ ದೈನಂದಿನ ಬದುಕು ದುಸ್ತರವಾಗಿಬಿಟ್ಟಿತ್ತು. ಗಿನ್ನಿಸ್ ದಾಖಲೆ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಗೆದ್ದಿದ್ದ ಯುರಿಬಿಗೆ ದೇಹ ತೂಕ ಇಳಿಸಿಕೊಂಡು ಎಲ್ಲರಂತೆ ಬಾಳುವ ಇಚ್ಛೆ ಇತ್ತು ಆದರೆ, ಬಿಡದಂತೆ ಕಾಡುತ್ತಿದ್ದ ಕಾಯಿಲೆಗಳಿಂದ ಯುರಿಬಿ ಚೇತರಿಸಿಕೊಳ್ಳಲಾಗಲಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications