ಹಾಂಕಾಂಗ್ ಜಾಗಕ್ಕಾಗಿ ಬಡಿದಾಟ: ಚೀನಾ ವಿರುದ್ಧ ಅಮೆರಿಕ ಯುದ್ಧ..?
ಹಾಂಕಾಂಗ್ ವಿಚಾರವಾಗಿ ಅಮೆರಿಕ-ಚೀನಾ ನಡುವಿನ ವಾಕ್ಸಮರ ಮುಂದುವರಿದಿದೆ. ಇತ್ತೀಚೆಗೆ ಹಾಂಕಾಂಗ್ ಮೂಲದ 12 ಹೋರಾಟಗಾರರನ್ನು ಚೀನಾ ಬಂಧಿಸಿತ್ತು. ಇದರ ಹಿಂದೆ ಚೀನಾ ಸರ್ಕಾರ ಷಡ್ಯಂತ್ರ ಅಡಗಿತ್ತು. ಹೀಗಾಗಿ ನೇರಾನೇರ ಚೀನಾಗೆ ವಾರ್ನಿಂಗ್ ಮಾಡಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಪಾಂಪಿಯೋ, ಚೀನಾ ಬಂಧಿಸಿದ ಹಾಂಕಾಂಗ್ ಮೂಲದ 12 ಜನರ ಜೊತೆ ನಾವು ನಿಲ್ಲುತ್ತೇವೆ ಎಂದಿದ್ದಾರೆ.
ಈ ಮೂಲಕ ಈಗಾಗಲೇ ಹೊತ್ತಿ ಉರಿಯುತ್ತಿರುವ ಎರಡೂ ದೇಶಗಳ ಸೇಡಿನ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಇಷ್ಟುದಿನ ಮುಸುಕಿನ ಗುದ್ದಾಟದಂತಿದ್ದ ಎರಡೂ ದೇಶಗಳ ಜಗಳ ಬೀದಿಗೆ ಬಂದು ನಿಂತಿದೆ. ಕೆಲವು ದಿನಗಳ ಹಿಂದಷ್ಟೇ ಹಾಂಕಾಂಗ್ನಿಂದ ಕೆಲವರು ದೋಣಿಗಳ ಮೂಲಕ ತೈವಾನ್ಗೆ ಎಸ್ಕೇಪ್ ಆಗುತ್ತಿದ್ದರು. ಹಾಂಕಾಂಗ್ನಿಂದ ಸಮುದ್ರ ಮಾರ್ಗವಾಗಿ ಪ್ರಯಾಣಿಸಿದರೆ ತೈವಾನ್ ತುಂಬಾ ಹತ್ತಿರ. ಹೀಗೆ ಎಸ್ಕೇಪ್ ಆಗಲು ಯತ್ನಿಸಿದವರಲ್ಲಿ ಬಹುಪಾಲು ಜನರು, ಕಳೆದ ವರ್ಷ ಹಾಂಕಾಂಗ್ನಲ್ಲಿ ನಡೆದಿದ್ದ ಹೋರಾಟದಲ್ಲಿ ಪಾಲ್ಗೊಂಡಿದ್ದರು.
ಆದರೆ ಹೋರಾಟಗಾರರನ್ನೇ ಟಾರ್ಗೆಟ್ ಮಾಡಿರುವ ಚೀನಾ ಹಾಂಕಾಂಗ್ನಲ್ಲಿ ಹೊಸ ಕಾನೂನು ಹೇರಿಕೆ ಮಾಡಿದ್ದು, ಹೋರಾಟಗಾರರು ಒಬ್ಬೊಬ್ಬರಾಗಿ ಜೈಲು ಸೇರುತ್ತಿದ್ದಾರೆ. ಹೀಗಾಗಿ ಜೀವ ಉಳಿಸಿಕೊಳ್ಳಲು ನೂರಾರು ಮಂದಿ ಈಗಾಗಲೇ ಹಾಂಕಾಂಗ್ ಬಿಟ್ಟು ಓಡಿ ಹೋಗಿದ್ದಾರೆ. ಹೀಗೆ ಎಸ್ಕೇಪ್ ಆಗುವಾಗ ತೈವಾನ್-ಹಾಂಕಾಂಗ್ನ ಸಮುದ್ರ ಮಧ್ಯೆ 10 ಮಂದಿ ಸಿಕ್ಕಿದ್ದರು. ಹಾಗೂ ಚೀನಾ ಗಡಿಯಲ್ಲಿ ಇಬ್ಬರನ್ನು ಅರೆಸ್ಟ್ ಮಾಡಲಾಗಿತ್ತು.

ಹಾಂಕಾಂಗ್ ಮೇಲೇಕೆ ಚೀನಾ ಕಣ್ಣು..?
ಹೌದು, ಇಂತಹದ್ದೊಂದು ಪ್ರಶ್ನೆ ಸಾಕಷ್ಟು ಜನರನ್ನು ಕಾಡುತ್ತಿರುತ್ತದೆ. ಅಂದಹಾಗೆ ಚೀನಾಗೆ ಅದೆಷ್ಟೇ ಭೂಮಿ ಇದ್ದರೂ ಮತ್ತಷ್ಟು ಜಾಗ ನನ್ನದಾಗಬೇಕು ಎಂಬ ದುರಾಸೆ. ಚೀನಿ ಗ್ಯಾಂಗ್ಗೆ ಮತ್ತೊಂದು ದೇಶದ ಜಾಗ ಕೊಳ್ಳೆ ಹೊಡೆಯುವುದೇ ಕೆಲಸ. ಇದೇ ರೀತಿ ರಷ್ಯಾ ಮೇಲೂ ಜಗಳಕ್ಕೆ ಹೋಗಿ ಒಮ್ಮೆ ಸರಿಯಾಗೇ ಏಟು ತಿಂದು ಬಂದಿದೆ ಚೀನಾ. ಮತ್ತೊಂದ್ಕಡೆ ಹಾಂಕಾಂಗ್ ಮೇಲೆ ಚೀನಾ ಕಣ್ಣಿಡಲು ಬಲವಾದ ಕಾರಣವೂ ಇದೆ. ಆಯಕಟ್ಟಿನ ಜಾಗದಲ್ಲಿರುವ ಹಾಗೂ ಚೀನಾ ಗಡಿಯಿಂದ ಕೂಗಳತೆ ದೂರದಲ್ಲಿರುವ ಶ್ರೀಮಂತ ದೇಶ ಈ ಹಾಂಕಾಂಗ್. ಹೀಗಾಗಿ ಹಾಂಕಾಂಗ್ ತನ್ನ ವೈರಿ ದೇಶಗಳ ವಶವಾಗಿ, ತನ್ನ ವಿರುದ್ಧವೇ ಮಸಲತ್ತು ಮಾಡಲು ನಿಂತರೆ ಕಷ್ಟ ಎಂಬುದು ಚೀನಾಗೆ ಎದುರಾಗಿರುವ ಭಯ. ಈ ಕಾರಣಕ್ಕೆ ಹಾಂಕಾಂಗ್ ದೇಶವನ್ನ ಕಂಟ್ರೋಲ್ ಮಾಡಲು ಚೀನಿ ಗ್ಯಾಂಗ್ ಏನು ಬೇಕಾದರೂ ಮಾಡಲು ಸಿದ್ಧವಿದೆ.

ನೆಮ್ಮದಿಯಾಗಿ ಉಸಿರಾಡಲೂ ಆಗುತ್ತಿಲ್ಲ
ಚೀನಾ ಎಂಬ ಭಸ್ಮಾಸುರನ ಕರಿನೆರಳು ಬಿದ್ದಕಡೆ ಒಂದಲ್ಲ ಒಂದು ಸಮಸ್ಯೆ ಇದ್ದೇ ಇರುತ್ತದೆ. ಹಾಂಕಾಂಗ್ನಲ್ಲಿ ಆಗಿರುವುದು ಕೂಡ ಅದೇ. ಹಾಂಕಾಂಗ್ ತನ್ನಿಂದ ದೂರ ಹೋಯಿತು ಎನ್ನುವಷ್ಟರಲ್ಲಿ ರಾಜಕಾರಣಿಗಳನ್ನೆಲ್ಲಾ ಬುಟ್ಟಿಗೆ ಹಾಕಿಕೊಂಡ ಕುತಂತ್ರಿ ಚೀನಾ, ಹಾಂಕಾಂಗ್ನಲ್ಲಿ ಪ್ರತಿಭಟನೆ ಹತ್ತಿಕ್ಕಲು ಕಾನೂನು ಜಾರಿಗೆ ತಂದಿತ್ತು.

ಹಾಂಕಾಂಗ್ ನಾಯಕರಿಂದ ಹೊಸ ಕಾನೂನು ಜಾರಿಗೆ
ಹೊಸ ಕಾನೂನಿನಲ್ಲಿ ಹೋರಾಟ ಹತ್ತಿಕ್ಕುವುದರಿಂದ ಹಿಡಿದು, ಹೋರಾಟಗಾರರ ನೆಮ್ಮದಿ ಕೆಡಿಸುವ ತನಕ ಎಲ್ಲವನ್ನೂ ಚೀನಾ ಪ್ಲಾನ್ ಮಾಡಿ ಕೊಟ್ಟಿತ್ತು. ಅದರಂತೆ ಹಾಂಕಾಂಗ್ ನಾಯಕರು ಹೊಸ ಕಾನೂನು ಜಾರಿಗೆ ತಂದಿದ್ದು, ಹಾಂಕಾಂಗ್ನಲ್ಲಿ ಖಾಸಗಿ ಮಾಹಿತಿಗಳನ್ನೂ ಸರ್ಕಾರ ಕದಿಯುತ್ತಿದೆ. ಜಿಮ್ಮಿ ಲಾಯಿ ಅವರಂತಹ ಮಾಧ್ಯಮ ದಿಗ್ಗಜರನ್ನು ಕೂಡ ಹಿಡಿದು, ಹಿಡಿದು ಒಳಗೆ ಹಾಕುತ್ತಿದ್ದಾರೆ. ಆದರೆ ಕೋರ್ಟ್ನಲ್ಲಿ ಗೆಲುವು ಕಂಡ ಜಿಮ್ಮಿ ಲಾಯಿ ಬಿಡುಗಡೆಗೆ ಆಗಿದ್ದರೂ ಅವರ ಮೇಲೆ ಚೀನಾ ಸರ್ಕಾರ ಇನ್ನೂ ಕಣ್ಣಿಟ್ಟಿದೆ.

ನೆಮ್ಮದಿಯೇ ಇಲ್ಲದ ದೇಶ ಹಾಂಕಾಂಗ್
ಹಲವು ವರ್ಷಗಳ ಕಾಲ ಬ್ರಿಟಿಷರ ಅಡಿಯಾಳಾಗಿದ್ದ ಹಾಂಕಾಂಗ್ ಸ್ವತಂತ್ರಗೊಂಡರೂ ನೆಮ್ಮದಿಯೇ ಇಲ್ಲ. ಏಕೆಂದರೆ ಅಲ್ಲಿ ಚೀನಾ ಎಂಟ್ರಿ ಕೊಟ್ಟಿತ್ತು. ಸ್ವತಂತ್ರ ದೇಶದಂತೆ ಬಾಳಿದ್ದ ಹಾಂಕಾಂಗ್ ಮೇಲೆ ಚೀನಾ ಮೆಲ್ಲಗೆ ಹಿಡಿತ ಸಾಧಿಸಿತ್ತು. ಹಾಂಕಾಂಗ್ ರಾಜಕಾರಣಿಗಳ ಬ್ರೈನ್ ವಾಶ್ ಮಾಡಿ ಹೈಜಾಕ್ ಮಾಡಿದೆ. ಪರಿಣಾಮ ಜನರಿಗೆ ನೆಮ್ಮದಿ ಇಲ್ಲವಾಗಿದೆ. ಅಷ್ಟೊಂದು ಅಭಿವೃದ್ಧಿ ಹೊಂದಿದ್ದರೂ ಬೇರೆ ಯಾವುದೋ ದೇಶ ಹಾಂಕಾಂಗ್ ಜನರನ್ನ ಕಂಟ್ರೋಲ್ ಮಾಡುತ್ತಿದೆ. ಅತ್ತ ತೈವಾನ್ ಮೇಲೂ ಕಣ್ಣಿಟ್ಟು ಕೂತಿರುವ ಚೀನಾಗೆ ಹಾಂಕಾಂಗ್ ಕೂಡ ಬೇಕಾಗಿದೆ. ಇದು ನನಸಾಗದಂತೆ ತಡೆಯಲು ಅಮೆರಿಕ ಶತಾಯಗತಾಯ ದಾಳ ಉರುಳಿಸುತ್ತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications