ಪಾಕಿಸ್ತಾನದಲ್ಲಿ ಮೊಹರಂ ದಿನ ಪೆಟ್ರೋಲ್ ಗಿಂತ ಹಾಲು ದುಬಾರಿ
ಕರಾಚಿ, ಸೆಪ್ಟೆಂಬರ್ 10: ಪಾಕಿಸ್ತಾನದ ಪ್ರಮುಖ ನಗರಗಳಲ್ಲಿ ಹಾಲಿನ ದರ ಆಕಾಶವನ್ನೂ ಮೀರಿ ಮೇಲೆ ಚಿಮ್ಮಿದೆ. ಮೊಹರಂ ಆಚರಣೆ ದಿನವಾದ ಮಂಗಳವಾರ ಭಾರೀ ಬೆಲೆಗೆ ಹಾಲಿನ ಮಾರಾಟ ಮಾಡಲಾಗಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಕರಾಚಿ ಹಾಗೂ ಸಿಂಧ್ ಪ್ರಾಂತ್ಯದಲ್ಲಿ ಒಂದು ಲೀಟರ್ ಹಾಲನ್ನು 140 ರುಪಾಯಿಗೆ (ಪಾಕಿಸ್ತಾನ ರುಪಾಯಿ) ಮಾರಲಾಗಿದೆ.
ಆಸಕ್ತಿಕರ ಸಂಗತಿ ಏನೆಂದರೆ, ಪಾಕಿಸ್ತಾನದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹಾಲಿನ ದರಕ್ಕಿಂತ ಕಡಿಮೆ ಇದೆ. ಎರಡು ದಿನದ ಹಿಂದಷ್ಟೇ ಪೆಟ್ರೋಲ್ ಪ್ರತಿ ಲೀಟರ್ ಗೆ 113 ರುಪಾಯಿಯಂತೆ ಮಾರಾಟ ಆಗುತ್ತಿದ್ದರೆ, ಡೀಸೆಲ್ ಲೀಟರ್ ಗೆ 91 ರುಪಾಯಿಯಂತೆ ಮಾರಲಾಗಿದೆ.
ವರದಿಗಳ ಪ್ರಕಾರ, ಸಿಂಧ್ ಪ್ರಾಂತ್ಯದ ಹಲವೆಡೆ ಪ್ರತಿ ಲೀಟರ್ ಹಾಲಿಗೆ 140 ರುಪಾಯಿಯಂತೆ ಮಾರಲಾಗಿದೆ. ಬೇಡಿಕೆ ವಿಪರೀತ ಹೆಚ್ಚಾಗಿದ್ದರಿಂದ ಕರಾಚಿ ನಗರದಲ್ಲಿ 120ರಿಂದ 140 ರುಪಾಯಿ ತನಕ ಲೀಟರ್ ಹಾಲನ್ನು ಮಾರಾಟ ಮಾಡಲಾಗಿದೆ ಎಂದು ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

ಮೊಹರಂನಲ್ಲಿ ಪವಿತ್ರ ಮೆರವಣಿಗೆ ಮಾಡಲಾಗುತ್ತದೆ. ಆ ವೇಳೆ ನಗರದ ವಿವಿಧೆಡೆ ಹಾಲು, ಹಣ್ಣಿನ ರಸ, ತಂಪಾದ ನೀರು ನೀಡಲಾಗುತ್ತದೆ. ಆ ಕಾರಣಕ್ಕೆ ಹಾಲಿಗೆ ವಿಪರೀತ ಬೇಡಿಕೆ ಇದೆ. ಹೀಗೆ ಬೇಡಿಕೆ ಇರುವುದರಿಂದಲೇ ಹಾಲಿನ ಬೆಲೆ ವಿಪರೀತ ಏರಿಕೆ ಆಗಿದೆ ಎಂದು ಮಾರಾಟಗಾರರು ತಿಳಿಸಿದ್ದಾರೆ.
ಕರಾಚಿ ಕಮಿಷನರ್ ಕಚೇರಿಯು ಲೀಟರ್ ಹಾಲಿಗೆ ನಿಗದಿ ಪಡಿಸಿರುವ ದರ 94 ರುಪಾಯಿ. ಅದಕ್ಕಿಂತ ಹೆಚ್ಚಿನ ಬೆಲೆಗೆ ಮಾರುವಂತಿಲ್ಲ. ಆದರೆ ಕಾನೂನು ಪಾಲನೆಯೇ ಆಗುತ್ತಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications