ಲಂಕಾ: ಹಿಂಸಾಚಾರಿಗಳಿಗೆ ಗುಂಡು ಹಾರಿಸುವಂತೆ ರಕ್ಷಣಾ ಸಚಿವಾಲಯ ಆದೇಶ
ಕೊಲಂಬೊ ಮೇ 10: ಶ್ರೀಲಂಕಾದಲ್ಲಿ ಅಂತರ್ಯುದ್ಧದ ಪರಿಸ್ಥಿತಿ ನಿರಂತರವಾಗಿ ನಿರ್ಮಾಣವಾಗುತ್ತಿದೆ. ಮಹಿಂದಾ ರಾಜಪಕ್ಸೆ ಅವರ ರಾಜೀನಾಮೆಯ ನಂತರ, ಈ ದೇಶದ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತಿದೆ. ರಾಷ್ಟ್ರಪತಿ ಆಳ್ವಿಕೆಯ ಮಧ್ಯೆ ಬೀದಿಗಿಳಿದ ಗಲಭೆಕೋರರು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಿರಂತರ ಹಾನಿ ಉಂಟುಮಾಡುತ್ತಿದ್ದಾರೆ. ಇಂತಹವರನ್ನು ಶ್ರೀಲಂಕಾದ ರಕ್ಷಣಾ ಸಚಿವಾಲಯವು ಸ್ಥಳದಲ್ಲಿ ಶೂಟ್ ಮಾಡಲು ಆದೇಶ ನೀಡಿದೆ. ರಕ್ಷಣಾ ಸಚಿಮಾಲಯದ ಆದೇಶದಂತೆ ಯಾವುದೇ ಗಲಭೆಕೋರರು ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸುವುದು ಕಂಡುಬಂದರೆ, ಅಂತವರನ್ನು ಸ್ಥಳದಲ್ಲೇ ಗುಂಡು ಹಾರಿಸಿ ಕೊಲ್ಲಲಾಗುತ್ತದೆ.

ನಿಲ್ಲದ ಹಿಂಸಾಚಾರ
ಸೋಮವಾರ ಶ್ರೀಲಂಕಾದ ಹಲವಾರು ನಗರಗಳಲ್ಲಿ ಹಿಂಸಾಚಾರ ನಡೆದಿದ್ದು, ಇದರಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ ಮತ್ತು ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಮನೆಗೆ ಗಲಭೆಕೋರರು ಬೆಂಕಿ ಹಚ್ಚಿದ್ದಾರೆ. ನಿನ್ನೆ ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ ನಂತರ ಹಿಂಸಾಚಾರ ಉಲ್ಬಣಗೊಂಡಿದೆ. ಹಿಂಸಾಚಾರ ನಡೆಸಿದವರು ಮಹಿಂದಾ ರಾಜಪಕ್ಸೆ ಬೆಂಬಲಿಗರು ಎಂದು ಹೇಳಲಾಗುತ್ತಿದೆ.

ಅಧ್ಯಕ್ಷರಿಂದ ಶಾಂತಿಗಾಗಿ ಮನವಿ
ಶ್ರೀಲಂಕಾದಲ್ಲಿ ಹಿಂಸಾತ್ಮಕ ಪ್ರದರ್ಶನಗಳ ಮಧ್ಯೆ, ಅಧ್ಯಕ್ಷ ಗೊತಾಬಯ ರಾಜಪಕ್ಸೆ ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರತಿಭಟನಾಕಾರರಿಗೆ ಇಂತಹ ಹಿಂಸಾತ್ಮಕ ಘಟನೆಗಳನ್ನು ಮಾಡಬೇಡಿ ಮತ್ತು ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ಸಾಮಾನ್ಯ ನಾಗರಿಕರ ವಿರುದ್ಧ ಕ್ರಮ ಕೈಗೊಳ್ಳದಂತೆ ರಾಷ್ಟ್ರಪತಿಗಳು ಭದ್ರತಾ ಪಡೆಗಳಿಗೆ ಮನವಿ ಮಾಡಿದ್ದಾರೆ. ಸೋಮವಾರ ಹಿಂಸಾತ್ಮಕ ಘಟನೆಗಳ ನಂತರ, ಇಂದು ಬೆಳಿಗ್ಗೆಯವರೆಗೆ ಕರ್ಫ್ಯೂ ವಿಧಿಸಲಾಗಿದೆ.

ಮಿಲಿಟರಿ ಮತ್ತು ಪೊಲೀಸರಿಗೆ ತುರ್ತು ಅಧಿಕಾರ
ಇಂದಿಗೂ ಹಿಂಸಾತ್ಮಕ ಪರಿಸ್ಥಿತಿ ನಿಯಂತ್ರಣಕ್ಕಾ ಬಾರದ ಹಿನ್ನೆಲೆಯಲ್ಲಿ ವಾರಂಟ್ ಇಲ್ಲದೆ ಜನರನ್ನು ಬಂಧಿಸಲು ಶ್ರೀಲಂಕಾ ತನ್ನ ಮಿಲಿಟರಿ ಮತ್ತು ಪೊಲೀಸರಿಗೆ ತುರ್ತು ಅಧಿಕಾರವನ್ನು ನೀಡಿದೆ. ಹಿಂದೂ ಮಹಾಸಾಗರದ ರಾಷ್ಟ್ರ ಶ್ರೀಲಂಕಾ ಇತಿಹಾಸದಲ್ಲಿ ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದನ್ನು ಬಗೆಹರಿಸಲು ಸರ್ಕಾರ ಮಧ್ಯೆ ಪ್ರವೇಶಿಸಬೇಕು ಎಂದು ಒತ್ತಾಯಿಸಿ ಸಾವಿರಾರು ಜನ ಕೆಲ ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಲಂಕಾ ತೊರೆದ ಮಾಜಿ ಪ್ರಧಾನಿ
ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಅವರ ಕುಟುಂಬವು ದ್ವೀಪ ರಾಷ್ಟ್ರದ ಈಶಾನ್ಯ ಭಾಗದಲ್ಲಿರುವ ಟ್ರಿಂಕೋಮಲಿಯ ನೌಕಾ ನೆಲೆಯಲ್ಲಿ ಆಶ್ರಯ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ದೇಶದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ನಡುವೆ ಮಾರಣಾಂತಿಕ ಪ್ರತಿಭಟನೆಗಳು ಶ್ರೀಲಂಕಾದಲ್ಲಿ ಮುಂದುವರೆದಿವೆ. ಹೀಗಾಗಿ ನಿನ್ನೆಯಷ್ಟೇ ಮಹಿಂದಾ ರಾಜಪಕ್ಸೆ ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಆದರೂ ಹಿಂಸಾಚಾರ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು ಶ್ರೀಲಂಕಾದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರಧಾನಿ ಮನೆಯ ಸುತ್ತಲೂ ಹಿಂಸಾತ್ಮಾಕ ಘಟನೆಗಳು ವರದಿಯಾಗುತ್ತಲೇ ಇವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications