ಬ್ರುಸೆಲ್ಸ್: ನಾಪತ್ತೆಯಾಗಿದ್ದ ಇನ್ಫಿ ಟೆಕ್ಕಿ ಗಣೇಶನ್ ಶವವಾಗಿ ಪತ್ತೆ
ನವದೆಹಲಿ, ಮಾರ್ಚ್ 28 : ಬ್ರುಸೆಲ್ಸ್ ನಲ್ಲಿ ನಡೆದ ಅವಳಿ ಸ್ಫೋಟದ ನಂತರ ನಾಪತ್ತೆಯಾಗಿದ್ದಾರೆ ಎನ್ನಲಾದ ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರ ಗಣೇಶ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ಬ್ರುಸೆಲ್ಸ್ ನ ಮೆಟ್ರೋ ಸ್ಟೇಷನ್ ಬಳಿ ಸೋಮವಾರ ಗಣೇಶ್ ಅವರ ಶವ ಪತ್ತೆಯಾಗಿರುವುದನ್ನು ಭಾರತೀಯ ರಾಯಭಾರಿ ಕಚೇರಿ ದೃಢಪಡಿಸಿದೆ.

ಮಾರ್ಚ್ 22 ರಂದು ನಡೆದ ಅವಳಿ ಸ್ಫೋಟ ಹಾಗೂ ಮೆಲ್ ಬ್ರೇಕ್ ಮೆಟ್ರೋ ಸ್ಟೇಷನ್ ಬಳಿ ಸ್ಫೋಟ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 35 ಕ್ಕೂ ಅಧಿಕ ಮಂದಿ ಸಾವನ್ನಪ್ಪಿ, ನೂರಾರು ಜನ ಗಾಯಗೊಂಡಿದ್ದರು. ಪ್ರತಿನಿತ್ಯ ಮೆಟ್ರೋ ಸ್ಟೇಷನ್ ಮೂಲಕ ಕಚೇರಿಗೆ ತೆರಳುತ್ತಿದ್ದ 31 ವರ್ಷ ವಯಸ್ಸಿನ ಗಣೇಶನ್ ಅವರು ಆತ್ಮಾಹುತಿ ದಾಳಿಗೆ ಬಲಿಯಾಗಿದ್ದಾರೆ.[ಇನ್ಫಿ ಟೆಕ್ಕಿ ರಾಘವೇಂದ್ರ ನಾಪತ್ತೆ, ತಾಯಿಯ ಅಳಲು]
ಘಟನೆ ನಡೆದ ದಿನ ಕಚೇರಿಗೆ ತೆರಳುವುದಕ್ಕೂ ಮುನ್ನ ಮುಂಬೈಯಲ್ಲಿರುವ ತನ್ನ ತಾಯಿ ಅನ್ನಪೂರ್ಣೆ ಅವರಿಗೆ ಕರೆ ಮಾಡಿ ಮಾತನಾಡಿದ್ದರು. ಆದರೆ, ನಂತರ ಗಣೇಶನ್ ಇರುವಿಕೆ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಸುಮಾರು ಆರು ದಿನಗಳ ನಂತರ ಗಣೇಶನ್ ಅವರ ಶವ ಪತ್ತೆಯಾಗಿದೆ. ಇನ್ಫೋಸಿಸ್ ಕಚೇರಿ ಸಿಬ್ಬಂದಿ, ಗಣೇಶನ್ ಅವರ ಸೋದರ ಹಾಗೂ ಸ್ಥಳೀಯ ಪೊಲೀಸರು ಕಳೆದ 48 ಗಂಟೆಗಳಲ್ಲಿ ತೀವ್ರ ಶೋಧ ನಡೆಸಿದ ಮೇಲೆ ಗಣೇಶನ್ ಅವರ ಶವ ಪತ್ತೆಯಾಗಿದೆ.[ಬ್ರುಸೆಲ್ಸ್ ನಂತರ ಇನ್ನಷ್ಟು ದಾಳಿ ಮಾಡ್ತೇವೆ: ಐಎಸ್ಐಎಸ್]
ಬೆಂಗಳೂರು ಮೂಲದ ಇನ್ಫೋಸಿಸ್ ಸಂಸ್ಥೆ ಸೇರಿದ ಸಾಫ್ಟ್ ವೇರ್ ಇಂಜಿನಿಯರ್ ರಾಘವೇಂದ್ರ ಅವರು ಮೊದಲಿಗೆ ಪುಣೆಯಲ್ಲಿ ನಾಲ್ಕು ವರ್ಷ ಕಾರ್ಯನಿರ್ವಹಿಸಿದ್ದರು. ನಂತರ ಬ್ರುಸೆಲ್ಸ್ ಗೆ ಬಂದು ನಾಲ್ಕು ವರ್ಷವಾಗಿತ್ತು. ಕಳೆದ ತಿಂಗಳು ತಮ್ಮ ನವಜಾತ ಶಿಶುವನ್ನು ನೋಡಲು ಚೆನ್ನೈಗೆ ಬಂದು ಹೋಗಿದ್ದರು.ಗಣೇಶನ್ ಅವರು ಪತ್ನಿ, ಒಂದೂವರೆ ತಿಂಗಳ ಮಗು, ತಾಯಿ, ಸೋದರ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications