ಬ್ರುಸೆಲ್ಸ್: ನಾಪತ್ತೆಯಾಗಿದ್ದ ಇನ್ಫಿ ಟೆಕ್ಕಿ ಗಣೇಶನ್ ಶವವಾಗಿ ಪತ್ತೆ
ನವದೆಹಲಿ, ಮಾರ್ಚ್ 28 : ಬ್ರುಸೆಲ್ಸ್ ನಲ್ಲಿ ನಡೆದ ಅವಳಿ ಸ್ಫೋಟದ ನಂತರ ನಾಪತ್ತೆಯಾಗಿದ್ದಾರೆ ಎನ್ನಲಾದ ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರ ಗಣೇಶ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ಬ್ರುಸೆಲ್ಸ್ ನ ಮೆಟ್ರೋ ಸ್ಟೇಷನ್ ಬಳಿ ಸೋಮವಾರ ಗಣೇಶ್ ಅವರ ಶವ ಪತ್ತೆಯಾಗಿರುವುದನ್ನು ಭಾರತೀಯ ರಾಯಭಾರಿ ಕಚೇರಿ ದೃಢಪಡಿಸಿದೆ.

ಮಾರ್ಚ್ 22 ರಂದು ನಡೆದ ಅವಳಿ ಸ್ಫೋಟ ಹಾಗೂ ಮೆಲ್ ಬ್ರೇಕ್ ಮೆಟ್ರೋ ಸ್ಟೇಷನ್ ಬಳಿ ಸ್ಫೋಟ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 35 ಕ್ಕೂ ಅಧಿಕ ಮಂದಿ ಸಾವನ್ನಪ್ಪಿ, ನೂರಾರು ಜನ ಗಾಯಗೊಂಡಿದ್ದರು. ಪ್ರತಿನಿತ್ಯ ಮೆಟ್ರೋ ಸ್ಟೇಷನ್ ಮೂಲಕ ಕಚೇರಿಗೆ ತೆರಳುತ್ತಿದ್ದ 31 ವರ್ಷ ವಯಸ್ಸಿನ ಗಣೇಶನ್ ಅವರು ಆತ್ಮಾಹುತಿ ದಾಳಿಗೆ ಬಲಿಯಾಗಿದ್ದಾರೆ.[ಇನ್ಫಿ ಟೆಕ್ಕಿ ರಾಘವೇಂದ್ರ ನಾಪತ್ತೆ, ತಾಯಿಯ ಅಳಲು]
ಘಟನೆ ನಡೆದ ದಿನ ಕಚೇರಿಗೆ ತೆರಳುವುದಕ್ಕೂ ಮುನ್ನ ಮುಂಬೈಯಲ್ಲಿರುವ ತನ್ನ ತಾಯಿ ಅನ್ನಪೂರ್ಣೆ ಅವರಿಗೆ ಕರೆ ಮಾಡಿ ಮಾತನಾಡಿದ್ದರು. ಆದರೆ, ನಂತರ ಗಣೇಶನ್ ಇರುವಿಕೆ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಸುಮಾರು ಆರು ದಿನಗಳ ನಂತರ ಗಣೇಶನ್ ಅವರ ಶವ ಪತ್ತೆಯಾಗಿದೆ. ಇನ್ಫೋಸಿಸ್ ಕಚೇರಿ ಸಿಬ್ಬಂದಿ, ಗಣೇಶನ್ ಅವರ ಸೋದರ ಹಾಗೂ ಸ್ಥಳೀಯ ಪೊಲೀಸರು ಕಳೆದ 48 ಗಂಟೆಗಳಲ್ಲಿ ತೀವ್ರ ಶೋಧ ನಡೆಸಿದ ಮೇಲೆ ಗಣೇಶನ್ ಅವರ ಶವ ಪತ್ತೆಯಾಗಿದೆ.[ಬ್ರುಸೆಲ್ಸ್ ನಂತರ ಇನ್ನಷ್ಟು ದಾಳಿ ಮಾಡ್ತೇವೆ: ಐಎಸ್ಐಎಸ್]
ಬೆಂಗಳೂರು ಮೂಲದ ಇನ್ಫೋಸಿಸ್ ಸಂಸ್ಥೆ ಸೇರಿದ ಸಾಫ್ಟ್ ವೇರ್ ಇಂಜಿನಿಯರ್ ರಾಘವೇಂದ್ರ ಅವರು ಮೊದಲಿಗೆ ಪುಣೆಯಲ್ಲಿ ನಾಲ್ಕು ವರ್ಷ ಕಾರ್ಯನಿರ್ವಹಿಸಿದ್ದರು. ನಂತರ ಬ್ರುಸೆಲ್ಸ್ ಗೆ ಬಂದು ನಾಲ್ಕು ವರ್ಷವಾಗಿತ್ತು. ಕಳೆದ ತಿಂಗಳು ತಮ್ಮ ನವಜಾತ ಶಿಶುವನ್ನು ನೋಡಲು ಚೆನ್ನೈಗೆ ಬಂದು ಹೋಗಿದ್ದರು.ಗಣೇಶನ್ ಅವರು ಪತ್ನಿ, ಒಂದೂವರೆ ತಿಂಗಳ ಮಗು, ತಾಯಿ, ಸೋದರ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications