ಎಂಎಚ್370 ಕಣ್ಮರೆ ಪ್ರಕರಣ ದುರಂತ ಅಂತ್ಯ
ಕೌಲಾಲಂಪುರ, ಮಾ. 25 : ಅತ್ಯಂತ ನಿಗೂಢವಾಗಿ ಕಣ್ಮರೆಯಾಗಿದ್ದ ವಿಮಾನದ ಹುಡುಕಾಟಕ್ಕೆ ತೆರೆಬಿದ್ದಿದೆ. ಏನು ಆಗಬಾರದು ಎಂದು ಇಡೀ ಜಗತ್ತು ಜಪಿಸುತ್ತಿತ್ತೋ ಅದು ಘಟಿಸಿಹೋಗಿದೆ. ಐವರು ಭಾರತೀಯರು ಸೇರಿದಂತೆ 239 ಜನರಿದ್ದ, ಮಲೇಷ್ಯಾ ಏರ್ ಲೈನ್ ವಿಮಾನ ಎಂಎಚ್370 ವಿಮಾನ ಹಿಂದೂ ಮಹಾಸಾಗರದಲ್ಲಿ ಮುಳುಗಿರುವುದು ಖಚಿತವಾಗಿದೆ.
"ಕಣ್ಮರೆಯಾಗಿದ್ದ ಎಂಎಚ್370 ವಿಮಾನ ಹಿಂದೂ ಮಹಾಸಾಗರದಲ್ಲಿ ಮುಳುಗಿದೆ ಎಂದು ಅತ್ಯಂತ ದುಃಖದಿಂದ ತಿಳಿಯಬಯಸುತ್ತೇನೆ" ಎಂದು ಮಲೇಷ್ಯಾದ ಪ್ರಧಾನಿ ನಜೀಬ್ ರಜಾಕ್ ಅವರು ಶುಕ್ರವಾರ ಪ್ರಕಟಿಸಿದರು. ಈ ವಿಷಯ ತಿಳಿಯುತ್ತಿದ್ದಂತೆ ಸಾವಿಗೀಡಾದವರ ಸಂಬಂಧಿಕರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಯುನೈಟೆಡ್ ಕಿಂಗಡಂನ ವಿಮಾನ ಅಪಘಾತ ತನಿಖಾ ಸಂಸ್ಥೆ ನೀಡಿದ ಸ್ಯಾಟಲೈಟ್ ಮಾಹಿತಿಯ ಆಧಾರದ ಮೇಲೆ ಎಂಎಚ್370 ವಿಮಾನ ಹಿಂದೂ ಮಹಾಸಾಗರದಲ್ಲಿ ಮುಳುಗಿರುವುದು ತಿಳಿದುಬಂದಿದೆ ಎಂದು ನಜೀಬ್ ರಜಾಕ್ ತಿಳಿಸಿದರು. ಈ ಪ್ರಕರಣದ ಹೆಚ್ಚಿನ ವಿವರಗಳನ್ನು ತಿಳಿಸಲು ಮತ್ತೊಂದು ಪತ್ರಿಕಾಗೋಷ್ಠಿಯನ್ನು ಮಂಗಳವಾರ ನಡೆಸಲಾಗುತ್ತಿದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಕಳೆದ 17 ದಿನಗಳಿಂದ ವಿಮಾನದ ಸುಳಿವಿನ ಬಗ್ಗೆ, ಪ್ರಯಾಣಿಕರ ಸುರಕ್ಷತೆಯ ಬಗ್ಗೆ ತಿಳಿಯಲು ಕಾತುರದಿಂದ ಹೋಟೆಲಿನಲ್ಲಿಯೇ ತಂಗಿದ್ದ ಸಂಬಂಧಿಕರು, ದುರಂತದ ವಿಷಯ ತಿಳಿಯುತ್ತಿದ್ದಂತೆ ದುಃಖದ ಮಡುವಿನಲ್ಲಿ ಮುಳುಗಿದರು. ಕೆಲವರನ್ನು ಸ್ಟ್ರೆಚರ್ ಮೇಲೆ ಆಸ್ಪತ್ರೆಗೆ ಕರೆದುಕೊಂಡುಹೋಗಬೇಕಾಗಿ ಬಂದಿತು. ಓರ್ವ ಮಹಿಳೆ ದುಃಖ ಭರಿಸದೆ ತೀವ್ರವಾಗಿ ಕಂಪಿಸುತ್ತಿದ್ದರೆಂದು ತಿಳಿದುಬಂದಿದೆ.
227 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳಿದ್ದ ವಿಮಾನ ಮಾರ್ಚ್ 8ರಂದು, ರಾಡಾರ್ ವ್ಯಾಪ್ತಿಯನ್ನು ಕೂಡ ತಪ್ಪಿಸಿಕೊಂಡು ನಿಗೂಢವಾಗಿ ಕಣ್ಮರೆಯಾಗಿತ್ತು. ಭಾರತವೂ ಸೇರಿದಂತೆ ಎಲ್ಲ ರಾಷ್ಟ್ರಗಳು ಸಮುದ್ರದಲ್ಲಿ ಹುಡುಕಾಟ ನಡೆಸಿದ್ದರೂ ಅದರ ಸುಳಿವು ಕೂಡ ಸಿಕ್ಕಿರಲಿಲ್ಲ. ಹೀಗಾಗಿ ವಿಮಾನವನ್ನು ಭಯೋತ್ಪಾದಕರು ಅಪಹರಿಸಿರಬಹುದು ಊಹಾಪೋಹ ಎದ್ದಿತ್ತು.
ದುಃಖತಪ್ತ ಸಂಬಂಧಿಕರು ಮಲೇಷ್ಯಾ ಸರಕಾರದ ಮೇಲೆ ಈ ದುರಂತಕ್ಕಾಗಿ ಹಿಡಿಶಾಪ ಹಾಕುತ್ತಿದ್ದಾರೆ. ಮಲೇಷ್ಯಾ ಸರಕಾರ, ಮಲೇಷ್ಯಾ ವಿಮಾನಯಾನ ಸಂಸ್ಥೆ, ಮಲೇಷ್ಯಾ ಸೇನೆ ನಿಜವಾದ ಕೊಲೆಗಡುಕರು. ಅವರೆಲ್ಲ ಸೇರಿ ನಮ್ಮ ಬಂಧುಗಳನ್ನು ಕೊಂದುಬಿಟ್ಟರು ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಪತ್ರಕರ್ತರ ಮೇಲೆ ಕೂಡ ದಾಳಿಗೆ ಯತ್ನಿಸಿದರು.
ಬೀಜಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಬಿಡುಗಡೆ ಮಾಡಿದ ಪ್ರಯಾಣಿಕರ ಪಟ್ಟಿಯಲ್ಲಿದ್ದ ಸಾವಿಗೀಡಾದ ಭಾರತೀಯರ ಹೆಸರು ಇಂತಿವೆ : ಚಂದ್ರಿಕಾ ಶರ್ಮಾ, ಪ್ರಹ್ಲಾದ್ ಶಿರ್ಸಾತ್, ಚೇತನಾ ವಿನೋದ್ ಕೋಲೆಕಾರ್, ವಿನೋದ್ ಸುರೇಶ್ ಕೋಲೆಕಾರ್ ಮತ್ತು ಸ್ವಾನಂದ್ ವಿನೋದ್ ಕೋಲೆಕಾರ್. [ಭಾರತೀಯರ ವಿವರ]
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications