ಎಂಎಚ್370 ಕಣ್ಮರೆ ಪ್ರಕರಣ ದುರಂತ ಅಂತ್ಯ
ಕೌಲಾಲಂಪುರ, ಮಾ. 25 : ಅತ್ಯಂತ ನಿಗೂಢವಾಗಿ ಕಣ್ಮರೆಯಾಗಿದ್ದ ವಿಮಾನದ ಹುಡುಕಾಟಕ್ಕೆ ತೆರೆಬಿದ್ದಿದೆ. ಏನು ಆಗಬಾರದು ಎಂದು ಇಡೀ ಜಗತ್ತು ಜಪಿಸುತ್ತಿತ್ತೋ ಅದು ಘಟಿಸಿಹೋಗಿದೆ. ಐವರು ಭಾರತೀಯರು ಸೇರಿದಂತೆ 239 ಜನರಿದ್ದ, ಮಲೇಷ್ಯಾ ಏರ್ ಲೈನ್ ವಿಮಾನ ಎಂಎಚ್370 ವಿಮಾನ ಹಿಂದೂ ಮಹಾಸಾಗರದಲ್ಲಿ ಮುಳುಗಿರುವುದು ಖಚಿತವಾಗಿದೆ.
"ಕಣ್ಮರೆಯಾಗಿದ್ದ ಎಂಎಚ್370 ವಿಮಾನ ಹಿಂದೂ ಮಹಾಸಾಗರದಲ್ಲಿ ಮುಳುಗಿದೆ ಎಂದು ಅತ್ಯಂತ ದುಃಖದಿಂದ ತಿಳಿಯಬಯಸುತ್ತೇನೆ" ಎಂದು ಮಲೇಷ್ಯಾದ ಪ್ರಧಾನಿ ನಜೀಬ್ ರಜಾಕ್ ಅವರು ಶುಕ್ರವಾರ ಪ್ರಕಟಿಸಿದರು. ಈ ವಿಷಯ ತಿಳಿಯುತ್ತಿದ್ದಂತೆ ಸಾವಿಗೀಡಾದವರ ಸಂಬಂಧಿಕರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಯುನೈಟೆಡ್ ಕಿಂಗಡಂನ ವಿಮಾನ ಅಪಘಾತ ತನಿಖಾ ಸಂಸ್ಥೆ ನೀಡಿದ ಸ್ಯಾಟಲೈಟ್ ಮಾಹಿತಿಯ ಆಧಾರದ ಮೇಲೆ ಎಂಎಚ್370 ವಿಮಾನ ಹಿಂದೂ ಮಹಾಸಾಗರದಲ್ಲಿ ಮುಳುಗಿರುವುದು ತಿಳಿದುಬಂದಿದೆ ಎಂದು ನಜೀಬ್ ರಜಾಕ್ ತಿಳಿಸಿದರು. ಈ ಪ್ರಕರಣದ ಹೆಚ್ಚಿನ ವಿವರಗಳನ್ನು ತಿಳಿಸಲು ಮತ್ತೊಂದು ಪತ್ರಿಕಾಗೋಷ್ಠಿಯನ್ನು ಮಂಗಳವಾರ ನಡೆಸಲಾಗುತ್ತಿದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಕಳೆದ 17 ದಿನಗಳಿಂದ ವಿಮಾನದ ಸುಳಿವಿನ ಬಗ್ಗೆ, ಪ್ರಯಾಣಿಕರ ಸುರಕ್ಷತೆಯ ಬಗ್ಗೆ ತಿಳಿಯಲು ಕಾತುರದಿಂದ ಹೋಟೆಲಿನಲ್ಲಿಯೇ ತಂಗಿದ್ದ ಸಂಬಂಧಿಕರು, ದುರಂತದ ವಿಷಯ ತಿಳಿಯುತ್ತಿದ್ದಂತೆ ದುಃಖದ ಮಡುವಿನಲ್ಲಿ ಮುಳುಗಿದರು. ಕೆಲವರನ್ನು ಸ್ಟ್ರೆಚರ್ ಮೇಲೆ ಆಸ್ಪತ್ರೆಗೆ ಕರೆದುಕೊಂಡುಹೋಗಬೇಕಾಗಿ ಬಂದಿತು. ಓರ್ವ ಮಹಿಳೆ ದುಃಖ ಭರಿಸದೆ ತೀವ್ರವಾಗಿ ಕಂಪಿಸುತ್ತಿದ್ದರೆಂದು ತಿಳಿದುಬಂದಿದೆ.
227 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳಿದ್ದ ವಿಮಾನ ಮಾರ್ಚ್ 8ರಂದು, ರಾಡಾರ್ ವ್ಯಾಪ್ತಿಯನ್ನು ಕೂಡ ತಪ್ಪಿಸಿಕೊಂಡು ನಿಗೂಢವಾಗಿ ಕಣ್ಮರೆಯಾಗಿತ್ತು. ಭಾರತವೂ ಸೇರಿದಂತೆ ಎಲ್ಲ ರಾಷ್ಟ್ರಗಳು ಸಮುದ್ರದಲ್ಲಿ ಹುಡುಕಾಟ ನಡೆಸಿದ್ದರೂ ಅದರ ಸುಳಿವು ಕೂಡ ಸಿಕ್ಕಿರಲಿಲ್ಲ. ಹೀಗಾಗಿ ವಿಮಾನವನ್ನು ಭಯೋತ್ಪಾದಕರು ಅಪಹರಿಸಿರಬಹುದು ಊಹಾಪೋಹ ಎದ್ದಿತ್ತು.
ದುಃಖತಪ್ತ ಸಂಬಂಧಿಕರು ಮಲೇಷ್ಯಾ ಸರಕಾರದ ಮೇಲೆ ಈ ದುರಂತಕ್ಕಾಗಿ ಹಿಡಿಶಾಪ ಹಾಕುತ್ತಿದ್ದಾರೆ. ಮಲೇಷ್ಯಾ ಸರಕಾರ, ಮಲೇಷ್ಯಾ ವಿಮಾನಯಾನ ಸಂಸ್ಥೆ, ಮಲೇಷ್ಯಾ ಸೇನೆ ನಿಜವಾದ ಕೊಲೆಗಡುಕರು. ಅವರೆಲ್ಲ ಸೇರಿ ನಮ್ಮ ಬಂಧುಗಳನ್ನು ಕೊಂದುಬಿಟ್ಟರು ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಪತ್ರಕರ್ತರ ಮೇಲೆ ಕೂಡ ದಾಳಿಗೆ ಯತ್ನಿಸಿದರು.
ಬೀಜಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಬಿಡುಗಡೆ ಮಾಡಿದ ಪ್ರಯಾಣಿಕರ ಪಟ್ಟಿಯಲ್ಲಿದ್ದ ಸಾವಿಗೀಡಾದ ಭಾರತೀಯರ ಹೆಸರು ಇಂತಿವೆ : ಚಂದ್ರಿಕಾ ಶರ್ಮಾ, ಪ್ರಹ್ಲಾದ್ ಶಿರ್ಸಾತ್, ಚೇತನಾ ವಿನೋದ್ ಕೋಲೆಕಾರ್, ವಿನೋದ್ ಸುರೇಶ್ ಕೋಲೆಕಾರ್ ಮತ್ತು ಸ್ವಾನಂದ್ ವಿನೋದ್ ಕೋಲೆಕಾರ್. [ಭಾರತೀಯರ ವಿವರ]
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications