ಮೈಮರಗಟ್ಟಿಸುವ ಉಗ್ರರ ವಿಡಿಯೋದಲ್ಲಿ ಮೋದಿ ಹೆಸರು
ನವದೆಹಲಿ, ಜನವರಿ 03 : ಮೈಮರಗಟ್ಟಿಸುವ ದೆಹಲಿಯ ಚಳಿಯಲ್ಲಿಯೂ ನೋಡಿದವರಿಗೆ ಬೆವರು ಬರಿಸುವಂಥ ಖರರ್ನಾಕ್ ವಿಡಿಯೋವನ್ನು ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಬಿಡುಗಡೆ ಮಾಡಿದೆ.
ಅದರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಟರ್ಕಿಯ ಅಧ್ಯಕ್ಷ ರಿಸೆಪ್ ಟಯಿಪ್ ಎರ್ಡೋಗನ್ ಅವರು ಮುಸ್ಲಿಂ ಮತ್ತು ಇಸ್ಲಾಂನ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಲಾಗಿದೆ.
'ದಿ ಕ್ರಾಸ್ ಶೀಲ್ಡ್' ಎಂಬ 19 ನಿಮಿಷಗಳ ವಿಡಿಯೋಗೆ ಟರ್ಕಿ ಮತ್ತು ಅರೇಬಿಕ್ ಭಾಷೆಯಲ್ಲಿ ವಾಯ್ಸ್ ಓವರ್ ನೀಡಲಾಗಿದೆ. ಇಡೀ ವಿಡಿಯೋ ತುಂಬ ಸಿರಿಯಾದಲ್ಲಿನ ರಕ್ತಪಾತ ಮತ್ತು ವಿಧ್ವಂಸಕ ಕೃತ್ಯಗಳ ಬಗ್ಗೆಯೇ ಮಾತುಗಳು ತುಂಬಿವೆ.[ಇಸ್ತಾಂಬುಲ್ ಉಗ್ರರ ದಾಳಿಯಲ್ಲಿ ಇಬ್ಬರು ಭಾರತೀಯರ ಸಾವು]

ಸಿರಿಯಾದಲ್ಲಿ ನಡೆಯುತ್ತಿರುವ ರಕ್ತಪಾತಕ್ಕೆ ಈ ನಾಯಕರೇ ಕಾರಣ ಎಂದು ವಿಡಿಯೋದಲ್ಲಿ ಆರೋಪಿಸಲಾಗಿದೆ. ಸಿರಿಯಾದಲ್ಲಿ ಯುದ್ಧದಂಥ ವಾತಾವರಣ ಸೃಷ್ಟಿಸಿದ್ದೇ ಟರ್ಕಿಯ ಅಧ್ಯಕ್ಷ ಎರ್ಡೋಗನ್ ಎಂದು ಹೀಗಳಿಯಲಾಗಿದೆ.
ಈ ಕಾರಣದಿಂದಾಗಿಯೇ, ಇಸ್ಲಾಮಿಕ್ ಸ್ಟೇಟ್ ಉಗ್ರರು ಕಳೆದ ವರ್ಷದುದ್ದಕ್ಕೂ ಟರ್ಕಿಯಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಿ ಸೇಡು ತೀರಿಸಿಕೊಂಡಿದ್ದಾರೆ. ಹೊಸವರ್ಷದ ಮುನ್ನಾದಿನ ಪಾರ್ಟಿ ನಡೆಯುತ್ತಿದ್ದಾಗ ಓರ್ವ ಮನಸೋಇಚ್ಛೆ ಗುಂಡಿಕ್ಕಿ 39 ಜನರನ್ನು ಹತ್ಯೆಗೈದಿರುವುದು ಇನ್ನೂ ಕೆಂಪಾಗಿದೆ.[ಬಾರಾಮುಲ್ಲಾದಲ್ಲಿ ಉಗ್ರನ ಹೊಡೆದುರುಳಿಸಿದ ರಕ್ಷಣಾ ಸಿಬ್ಬಂದಿ]
ಟರ್ಕಿಯಲ್ಲಿ 2015ರ ನವೆಂಬರ್ ನಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಎರ್ಡೋಗನ್ ಜೊತೆ ನರೇಂದ್ರ ಮೋದಿಯವರು ಕ್ಲಿಕ್ಕಿಸಿಕೊಂಡಿರುವ ಚಿತ್ರವೂ ವಿಡಿಯೋದಲ್ಲಿದೆ. ಈ ನಾಯಕರ ಹೊರತಾಗಿ ಬರಾಕ್ ಒಬಾಮಾ, ಸಿರಿಯಾ ಅಧ್ಯಕ್ಷ ಬಶಾರ್ ಅಲ್ ಅಸಾದ್, ಪೋಪ್ ಫ್ರಾನ್ಸಿಸ್ ಅವರಿಗೂ ಮುಸ್ಲಿಂ ವಿರೋಧಿ ಪಟ್ಟ ಕಟ್ಟಲಾಗಿದೆ.
ಅಫಘಾನಿಸ್ತಾನದಲ್ಲಿ ಉದ್ಭವವಾಗಿರುವ ಪರಿಸ್ಥಿತಿಯ ಬಗ್ಗೆಯೂ ವಿಡಿಯೋದಲ್ಲಿ ಪ್ರಸ್ತಾಪವಿದೆ. ಈ ವಿಡಿಯೋವನ್ನು ಟರ್ಕಿಯಲ್ಲಿ ಇತ್ತೀಚೆಗೆ ನಡೆದ ಹತ್ಯಾಕಾಂಡಕ್ಕೆ ಮುನ್ನ ಹಲವಾರು ವೆಬ್ ಸೈಟ್ ಗಳಲ್ಲಿ ಅಪ್ಲೋಡ್ ಮಾಡಲಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications