ಈಜಿಪ್ಟ್ ಮಸೀದಿ ಮೇಲಿನ ಭಯಾನಕ ದಾಳಿ ಖಂಡಿಸಿದ ಮೋದಿ, ಟ್ರಂಪ್
ಕೈರೋ, ನವೆಂಬರ್ 25: 'ಈಜಿಪ್ಟ್ ನ ಮಸೀದಿಯಲ್ಲಿ ನಡೆದ ಬರ್ಬರ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಈಜಿಪ್ಟಿನ ಸಿನೈ ಪ್ರದೇಶದ ಮಸೀದಿಯೊಂದರಲ್ಲಿ ನಿನ್ನೆ(ನ.24) ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 235 ಕ್ಕೂ ಹೆಚ್ಚು ಜನ ಅಸುನೀಗಿದ್ದರು. ಉಗ್ರರು ಮಸೀದಿ ಮೇಲೆ ಬಾಂಬ್ ಮತ್ತು ಗುಂಡಿನ ದಾಳಿ ನಡೆಸಿದ್ದರು. ಮಸೀದಿಗೆ ಪ್ರಾರ್ಥನೆಗೆಂದು ತೆರಳಿದ್ದ ಇನ್ನೂರಕ್ಕೂ ಹೆಚ್ಚು ಜನರಿಗೆ ಅದೇ ಕೊನೆಯ ಪ್ರಾರ್ಥನೆಯಾಗಿತ್ತು.
ಈ ದುರಂತವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿದ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿ, ಟ್ವೀಟ್ ಮಾಡಿದ್ದಾರೆ.
Strongly condemn the barbaric terrorist attack on a place of worship in Egypt. Our deep condolences at the loss of innocent lives. India resolutely supports the fight against all forms of terrorism and stands with the people as well as Government of Egypt.
— Narendra Modi (@narendramodi) November 24, 2017
ಈ ಬರ್ಬರ ಘಟನೆಯನ್ನು ನಾನು ಖಂಡಿತವರ್ತಿಸುತ್ತೇನೆ. ಅಮಾಯಕ ಜೀವಗಳು ಬಲಿಯಾಗಿದ್ದರ ಬಗ್ಗೆ ನಮ್ಮ ತೀವ್ರ ಸಂತಾಪವಿದೆ. ಭಯೋತ್ಪಾದನೆಯ ವಿರುದ್ಧ ಹೋರಾಡಲು ಭಾರತ ಸದಾ ಈಜಿಪ್ಟ್ ನೊಂದಿದಗೆ ಸಹಕರಿಸಲಿದೆ. ನಾವು ಈಜಿಪ್ಟ್ ಸರ್ಕಾರದೊಂದಿಗಿದ್ದೇವೆ ಎಂದು ಮೋದಿ ಅಭಯ ನೀಡಿದ್ದಾರೆ.
Horrible and cowardly terrorist attack on innocent and defenseless worshipers in Egypt. The world cannot tolerate terrorism, we must defeat them militarily and discredit the extremist ideology that forms the basis of their existence!
— Donald J. Trump (@realDonaldTrump) November 24, 2017
ಪ್ರಾರ್ಥನೆ ಮಾಡುತ್ತಿದ್ದ ಅಮಾಯಕರ ಮೇಲೆ ನಡೆದ ಈ ಕ್ರೂರ ದಾಳಿ ನಿಜಕ್ಕೂ ಭೀಕರ. ಜಗತ್ತು ಖಂಡಿತ ಭಯೋತ್ಪಾದನೆಯನ್ನು ಸಹಿಸುವುದಿಲ್ಲ. ಮಿಲಿಟರಿ ಬಲದಿಂದ ನಾವು ಭಯೋತ್ಪಾದನೆಯನ್ನು ಹತ್ತಿಕ್ಕುವ ಅಗತ್ಯವಿದೆ. ಅವರ ಹುಟ್ಟಡಗಿಸುವ ಅಗತ್ಯವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications