ಇಮ್ರಾನ್ ಖಾನ್ ಗೆ ಅಜರುದ್ದೀನ್ ನೀಡಿದ ಎಚ್ಚರಿಕೆ ಸಂದೇಶ
ಹೈದರಾಬಾದ್, ಜುಲೈ 29: ಪಾಕಿಸ್ತಾನದ ಮಾಜಿ ಕ್ರಿಕೆಟ್ ನಾಯಕ ಇಮ್ರಾನ್ ಖಾನ್ ಅವರು ಪಾಕಿಸ್ತಾನ ಮುಂದಿನ ಪ್ರಧಾನಿಯಾಗುವ ಕಾಲ ಸನ್ನಿಹಿತವಾಗಿದೆ.
ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಫ್(ಪಿಟಿಐ) ಪಕ್ಷ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಹೊಂದಿಸುವ ಯತ್ನದಲ್ಲಿದೆ. ಪಾಕಿಸ್ತಾನದ ಸಂಭಾವ್ಯ ಪ್ರಧಾನಿಯಾಗಿರುವ ಇಮ್ರಾನ್ ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಅವರು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.
ಖಾನ್ ಚುನಾವಣೆಯಲ್ಲೇ ಯಶಸ್ಸು ಸಾಧಿಸುತ್ತಿದ್ದಂತೆಯೇ ಕ್ರಿಕೆಟ್ ಲೋಕದ ಅನೇಕ ದಿಗ್ಗಜರು ಅಭಿನಂದನೆ ಸಲ್ಲಿಸಿ ತಮ್ಮದೇ ಸಲಹೆಗಳನ್ನು ನೀಡ ತೊಡಗಿದ್ದಾರೆ. ಇದೀಗ ಖಾನ್ ಸಮಕಾಲೀನರಾದ ಅಝರುದ್ದೀನ್ ರಾಷ್ಟ್ರ ಮತ್ತು ಕ್ರಿಕೆಟ್ ತಂಡವನ್ನು ಮುನ್ನಡೆಸುವುದರಲ್ಲಿ ಬಹುದೊಡ್ಡ ವ್ಯತ್ಯಾಸವಿದೆ ಎಂದು ಸಲಹೆ ನೀಡಿದ್ದಾರೆ.

ಪಾಕ್ ಕ್ರಿಕೆಟ್ ತಂಡದ ನಾಯಕರಾಗಿ ಖಾನ್ ಅನೇಕ ಬಾರಿ ಮೈದಾನದಲ್ಲಿ ಧನಾತ್ಮಕ, ದಿಟ್ಟ ಹಾಗೂ ವೈಯ್ಯಕ್ತಿಕ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಪಾಕ್ ಪ್ರಧಾನಿಯಾದ ನಂತರ ಅಂತಹ ನಿರ್ಧಾರಗಳನ್ನು ಮಾತ್ರ ಖಾನ್ ತೆಗೆದುಕೊಳ್ಳಬೇಕು ಎಂದು ಅಝರುದ್ದೀನ್ ಅಭಿಪ್ರಾಯಪಟ್ಟಿದ್ದಾರೆ.
ರಾಷ್ಟ್ರ ಮುನ್ನಡೆ ಹಾಗೂ ಕ್ರಿಕೆಟ್ ತಂಡ ಮುನ್ನಡೆ ಎಂಬುದು ಎರಡು ವಿಭಿನ್ನ ವಿಷಯಗಳು. ಖಾನ್ ಏನು ಮಾಡುತ್ತಾರೆ ಎಂಬುದನ್ನು ನಾವು ನೋಡಬೇಕಾಗಿದೆ ಎಂದು ಹೇಳಿದ್ದಾರೆ.
ಖಾನ್ ಪ್ರಧಾನಿಯಾಗಿ ಇಂಡೋ-ಪಾಕ್ ಸಂಬಂಧದ ಬಗ್ಗೆ ಮಾತನಾಡಲು ಅವಕಾಶ ಸಿಕ್ಕರೆ, ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಪಾಕ್ನೊಳಗೆ ಅನೇಕ ಸಮಸ್ಯೆಗಳಿವೆ. ಮೊದಲು ಅದನ್ನು ತಿಳಿದುಕೊಂಡು ಬಗೆಹರಿಸಲಿ. ಆನಂತರ ಇತರೆ ಸಮಸ್ಯೆಗಳ ಕಡೆ ನೋಡಲಿ ಎಂಬ ಮಾತನ್ನಾಡಿದ್ದಾರೆ.
ಕ್ರೀಡಾ ಲೋಕದಲ್ಲಿ ಉಭಯ ನಾಯಕರು ತಮ್ಮ ತಂಡಗಳನ್ನು ಅನೇಕ ಸಂದರ್ಭಗಳಲ್ಲಿ ಮುನ್ನಡೆಸಿದ್ದಾರೆ. 1992ರಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ತಂಡವನ್ನು ಭಾರತ ಬಗ್ಗುಬಡಿತ್ತು. ಆದರೆ, ಪಾಕಿಸ್ತಾನವು ಕಪ್ ಗೆಲ್ಲಲು ಇಮ್ರಾನ್ ನೆರವಾದರು. ಈ ವೇಳೆ ಈ ಇಬ್ಬರು ದಿಗ್ಗಜರು ತಮ್ಮ ತಂಡಗಳನ್ನು ಮುನ್ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. (ಪಿಟಿಐ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications