ಟ್ಯುನಿಷಿಯಾ: ದೋಣಿ ಮುಳುಗಿ 50ಕ್ಕೂ ಹೆಚ್ಚು ವಲಸಿಗರ ಸಾವು
ಕೈರೋ, (ಈಜಿಪ್ಟ್), ಜೂನ್ 4: ಮೆಡಿಟರೇನಿಯನ್ ಸಮುದ್ರದಲ್ಲಿ ದೋಣಿಯೊಂದು ಮುಳುಗಿ 50ಕ್ಕೂ ಹೆಚ್ಚು ವಲಸಿಗರು ಮೃತಪಟ್ಟ ದಾರುಣ ಘಟನೆ ಟ್ಯುನಿಷಿಯಾದ ದಕ್ಷಿಣ ಕರಾವಳಿ ಪ್ರದೇಶದಲ್ಲಿ ನಡೆದಿದೆ.
75-90 ಮಂದಿ ಕೂರಬಹುದಾದ ದೋಣಿಯಲ್ಲಿ ಸುಮಾರು 180 ಮಂದಿ ಪ್ರಯಾಣ ಮಾಡುತ್ತಿದ್ದರು. ದೋಣಿಯಲ್ಲಿ ಬಿರುಕು ಉಂಟಾಗಿದ್ದರಿಂದ ನೀರು ಒಳನುಗ್ಗಿ ಮುಳುಗಿದೆ.
ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿರುವ ಟ್ಯುನಿಷಿಯಾ ಸೇನಾ ಪಡೆ, 48 ಮೃತದೇಹಗಳನ್ನು ಹೊರತೆಗೆದಿದೆ. 60ಕ್ಕೂ ಹೆಚ್ಚು ಜನರನ್ನು ರಕ್ಷಿಸಿದೆ.

ಉದ್ಯೋಗ ಮತ್ತು ಆಹಾರಕ್ಕಾಗಿ ಪರದಾಡುತ್ತಿರುವ ಆಫ್ರಿಕಾದ ವಿವಿಧ ದೇಶಗಳ ಜನರು ಯುರೋಪ್ನತ್ತ ಮೆಡಿಟರೇನಿಯನ್ ಸಮುದ್ರದ ಮೂಲಕ ವಲಸೆ ಹೋಗುವುದು ಸಾಮಾನ್ಯವಾಗಿದೆ.
ಅಕ್ರಮ ವಲಸಿಗರು ದೋಣಿ, ಹಡಗುಗಳನ್ನು ಬಳಸಿ ಸೇನಾ ಪಡೆಗಳ ಕಣ್ತಪ್ಪಿಸಿ ಮೆಡಿಟರೇನಿಯನ್ ಸಮುದ್ರದ ಮೂಲಕ ಇಟಲಿ, ಫ್ರಾನ್ಸ್ ಮುಂತಾದ ದೇಶಗಳನ್ನು ತಲುಪಲು ಪ್ರಯತ್ನಿಸುತ್ತಾರೆ. ದೋಣಿಯ ಸಾಮರ್ಥ್ಯಕ್ಕಿಂತಲೂ ಅಧಿಕ ವಲಸಿಗರು ಅದರಲ್ಲಿ ತುಂಬಿಕೊಳ್ಳುವುದರಿಂದ ಸಮುದ್ರದಲ್ಲಿ ದೋಣಿ ಮುಳುಗಿ ವಲಸಿಗರು ಮೃತಪಟ್ಟ ಅನೇಕ ಘಟನೆಗಳು ನಡೆದಿವೆ.
ಫೆಬ್ರುವರಿ 2ರಂದು ಲಿಬಿಯಾದ ಕರಾವಳಿ ತೀರದಲ್ಲಿ ಮೆಡಿಟರೇನಿಯನ್ನಲ್ಲಿ ಉಂಟಾದ ದೋಣಿ ಅವಘಡದಲ್ಲಿ ಕನಿಷ್ಠ 90 ವಲಸಿಗರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು.
Sad day in #Tunisia a boat sank off running away from the misery,46 people found dead mostly youth &4 pregnant women,a story that you will never hear in international media because our lives don’t matter!!!besides misery &poverty their families cant even have a peaceful #Ramadan pic.twitter.com/Pp7x3VZI3P
— Aya Chebbi (@aya_chebbi) 3 June 2018
ಯುರೋಪ್ಗೆ ತೆರಳಲು ಬಯಸುವ ಆಫ್ರಿಕಾದ ವಲಸಿಗರು ಟರ್ಕಿಯ ಮೂಲಕ ಸಮುದ್ರ ಮಾರ್ಗದಲ್ಲಿ ಹೋಗುತ್ತಾರೆ. 2018ರಲ್ಲಿ ಇದುವರೆಗೂ 32,601 ವಲಸಿಗರು ಸಮುದ್ರದಲ್ಲಿನ ದೋಣಿ ದುರಂತಗಳಲ್ಲಿ ಬದುಕುಳಿದಿದ್ದಾರೆ. ಇನ್ನು 649 ಮಂದಿ ಮೃತಪಟ್ಟಿದ್ದಾರೆ ಅಥವಾ ಕಾಣೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ ದಾಖಲೆಗಳು ಹೇಳಿವೆ.
2011ರಲ್ಲಿ ನಾಗರಿಕ ಯುದ್ಧಗಳು ಆರಂಭವಾದಾಗಿನಿಂದ ಅಕ್ರಮ ವಲಸೆ ಪ್ರಕ್ರಿಯೆ ಹೆಚ್ಚಾಗಿದೆ. ಲಕ್ಷಾಂತರ ಮಂದಿ ಮೆಡಿಟರೇನಿಯನ್ ಸಮುದ್ರವನ್ನು ದಾಟಿ ಯುರೋಪಿಯನ್ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications