ಡಿ.8 ರಂದು ಮೌಂಟ್ ಎವೆರೆಸ್ಟ್ನ ಪರಿಷ್ಕೃತ ಎತ್ತರ ಘೋಷಣೆ
ಕಠ್ಮಂಡು,ಡಿಸೆಂಬರ್ 07: ವಿಶ್ವದ ಅತಿ ಎತ್ತರ ಶಿಖರ ಮೌಂಟ್ ಎವೆರೆಸ್ಟ್ನ ಪರಿಷ್ಕೃತ ಎತ್ತರವನ್ನು ನೇಪಾಳ ಸರ್ಕಾರ ಡಿ.8 ರಂದು ಬಿಡುಗಡೆ ಮಾಡಲಿದೆ.
Recommended Video
2015ರಲ್ಲಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ನೇಪಾಳ ಭೂಕಂಪನದ ಬಳಿಕ ಮೌಂಟ್ ಎವರೆಸ್ಟ್ ನ ಎತ್ತರದಲ್ಲಿ ಬದಲಾವಣೆಯಾಗಿರಬಹುದು ಎಂದು ತಜ್ಞರು ಶಂಕಿಸಿದ್ದರು.
ಇದೇ ಕಾರಣಕ್ಕೆ ನೇಪಾಳ ಸರ್ಕಾರ ವಿಶ್ವದ ಅತಿ ಎತ್ತರದ ಶಿಖರದ ಎತ್ತರವನ್ನು ಅಳೆಯುವ ಯೋಜನೆ ಕೈಗೆತ್ತಿಕೊಂಡಿತ್ತು, ಪರ್ವತದ ಎತ್ತರವನ್ನು ಪುನಃ ಅಳೆಯಲು ನೇಪಾಳಿ ಅಧಿಕಾರಿಗಳು ಮತ್ತು ತಜ್ಞರನ್ನು ನಿಯೋಜಿಸುವಾಗ, ನೇಪಾಳ ಸರ್ಕಾರವು ತನ್ನ ದೇಶೀಯ ಪ್ರಯತ್ನಗಳಲ್ಲಿ ಚೀನಾದೊಂದಿಗೆ ಸಮನ್ವಯ ಸಾಧಿಸಿತು.

2019 ರಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ನೇಪಾಳ ಭೇಟಿಯ ಸಂದರ್ಭದಲ್ಲಿ, ಉಭಯ ರಾಷ್ಟ್ರಗಳು ಜಂಟಿಯಾಗಿ ವಿಶ್ವದ ಅತಿ ಎತ್ತರದ ಶಿಖರದ ಎತ್ತರವನ್ನು ಅಳೆದು ಘೋಷಿಸುವ ಒಪ್ಪಂದಕ್ಕೆ ಸಹಿ ಹಾಕಿದವು.
ವಿಶ್ವದ ಅತೀ ಎತ್ತರದ ಶಿಖರದ ನಿಜವಾದ ಎತ್ತರವನ್ನು ನೇಪಾಳ ಸರ್ಕಾರ ಘೋಷಣೆ ಮಾಡಲಿದೆ. ಇದಕ್ಕಾಗಿಯೇ ಮಂಗಳವಾರ ನೇಪಾಳ ಸರ್ಕಾರ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈಗಾಗಲೇ ಎಲ್ಲ ಮಾಧ್ಯಮ ಸಂಸ್ಥೆಗಳಿಗೆ ಕಾರ್ಯಕ್ರಮದ ಕುರಿತು ವಿಶೇಷ ಆಹ್ವಾನ ನೀಡಿದೆ. ಈ ಕಾರ್ಯಕ್ರಮದಲ್ಲಿ ನೇಪಾಳದ ಸರ್ವೇ ಇಲಾಖೆ ಮಂಗಳವಾರ ಮೌಂಟ್ ಎವರೆಸ್ಟ್ ನ ಅಧಿಕೃತ ಎತ್ತರವನ್ನು ಘೋಷಣೆ ಮಾಡಲಿದೆ.
ಇದೇ ಕಾರ್ಯಕ್ರಮದಲ್ಲಿ ಮೌಂಟ್ ಎವರೆಸ್ಟ್ ನ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದವರನ್ನು ಕೂಡ ಸನ್ಮಾನಿಸಲಾಗುತ್ತದೆ ಎಂದು ಆಹ್ವಾನ ಪತ್ರಿಕೆಯಲ್ಲಿ ಘೋಷಣೆ ಮಾಡಲಾಗಿದೆ ಎಂದು ಹಿಮಾಲಯದ ಸಮೀಕ್ಷಾ ವಿಭಾಗದ ಉಪ ಮಹಾನಿರ್ದೇಶಕ ಸುಶೀಲ್ ನರಸಿಂಗ್ ರಾಜ್ಭಂಡಾರಿ ಹೇಳಿದ್ದಾರೆ.
ಇನ್ನು 1954ರಲ್ಲಿ ಸರ್ವೆ ಆಫ್ ಇಂಡಿಯಾ ಈ ಶಿಖರವನ್ನು ಅಳೆದಿತ್ತು. ಅಂದು ಸರ್ವೇ ಆಫ್ ಇಂಡಿಯಾ ಘೋಷಣೆ ಮಾಡಿದ್ದ 8,848 ಮೀಟರ್ ಎತ್ತರವೇ ಮೌಂಟ್ ಎವರೆಸ್ಟ್ ನ ಅಂಗೀಕರಿಸಲ್ಪಟ್ಟ ಮತ್ತು ಗುರುತಿಸಲ್ಪಟ್ಟ ಎತ್ತರವಾಗಿದೆ.
ಇದೀಗ ಈ ಸರ್ವೇ ಕಾರ್ಯ ಮುಕ್ತಾಯವಾಗಿದ್ದು, ಮಂಗಳವಾರ ಅಧಿಕೃತವಾಗಿ ಶಿಖರದ ಎತ್ತರವನ್ನು ಘೋಷಣೆ ಮಾಡಲಾಗುತ್ತದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications