ಮಲೇಶ್ಯಾದ ನೂತನ ಪ್ರಧಾನಿಯಾಗಿ ಮುಹಿದ್ದೀನ್ ಯಾಸಿನ್
ಕೌಲಾಲಂಪುರ, ಮಾರ್ಚ್ 01: ಮಲೇಷ್ಯಾದ ಪ್ರಧಾನಿ ಮಹತೀರ್ ಮೊಹಮ್ಮದ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ನೂತನ ಪ್ರಧಾನಿಯಾಗಿ ಮುಹಿದ್ದೀನ್ ಯಾಸಿನ್ ಅವರು ಭಾನುವಾರದಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಂತರ ಮಾತನಾಡಿ, ನನ್ನ ಬಳಿ 114 ಸದಸ್ಯ ಬಲ ಎಂದು ಹೇಳಿದ್ದಾರೆ.
ನ್ಯಾಷನಲ್ ಪ್ಯಾಲೇಸ್ನಲ್ಲಿ ನಡೆದ ಸಮಾರಂಭದಲ್ಲಿ ಯಾಸೀನ್ ಅವರು ನೂತನ ಪ್ರಧಾನಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ರಾಜಕೀಯ ಅಸ್ಥಿರತೆಯಿಂದ ಕಂಗಲಾಗಿರುವ ಮಲೇಷ್ಯಾದಲ್ಲಿ ಮುಹಿದ್ದೀನ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ನೂತನ ಸರ್ಕಾರದ ವಿರುದ್ಧ ಹೋರಾಡುವುದಾಗಿ ಮಾಜಿ ಪ್ರಧಾನಿ ಮಹತೀರ್ ಹೇಳಿದ್ದಾರೆ.
ಮಹತೀರ್ ಮೊಹಮ್ಮದ್ ಅವರು ತಮ್ಮ ಉತ್ತರಾಧಿಕಾರಿತಾಗಿ ಅನ್ವರ್ ಇಬ್ರಾಹಿಂರನ್ನು ನೇಮಿಸಿ ಹೊಸ ಸರ್ಕಾರ ರಚಿಸಲು ಮುಂದಾಗಿದ್ದರು. ಆದರೆ, ಮೈತ್ರಿಕೂಟ ಇದಕ್ಕೆ ಅಡ್ಡಿಪಡಿಸಿತ್ತು. ಹೀಗಾಗಿ, ತಮ್ಮ ಸ್ಥಾನಕ್ಕೆ ಮಹತೀರ್ ರಾಜೀನಾಮೆ ಸಲ್ಲಿಸಿದ್ದಾರೆ. 222 ಸ್ಥಾನಗಳುಳ್ಳ ಸಂಸತ್ತಿನಲ್ಲಿ ಹೊಸ ಸರ್ಕಾರ ರಚನೆ ಮಾಡಲು ಕನಿಷ್ಠ 112 ಸ್ಥಾನಗಳು ಬೇಕಿವೆ. 1981 ರಿಂದ 2003 ರ ಅವಧಿಯಲ್ಲಿ ಮಹತೀರ್ ಪ್ರಧಾನಿಯಾಗಿದ್ದಾಗ ಅನ್ವರ್ ಅವರು ಉಪ ಪ್ರಧಾನಿಯಾಗಿದ್ದರು. ಆದರೆ, 1998ರಲ್ಲಿ ಅನ್ವರ್ ಅಮಾನತುಗೊಳಿಸಿ, ಜೈಲಿಗೆ ಕಳಿಸಲಾಗಿತ್ತು.

72 ವರ್ಷ ವಯಸ್ಸಿನ ಮುಹಿದ್ದೀನ್ ಅವರು ಯುಎಂಎನ್ಒ ಸದಸ್ಯರಾಗಿದ್ದು, ಅನೇಕ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ನಜೀಬ್ ಸರ್ಕಾರದ ವೇಳೆ ಉಪ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ, ಹಗರಣವೊಂದರಲ್ಲಿ ಮುಹಿದ್ದೀನ್ ಹೆಸರು ಕೇಳಿ ಬಂದ ಹಿನ್ನಲೆ ಅವರನ್ನು ನಜೀಬ್ ಅಮಾನತುಗೊಳಿಸಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications